ಅಡಿಕೆ ಕೌಶಲ್ಯ ಪಡೆ | ಅರಂತೋಡು ಸಹಕಾರಿ ಸಂಘದ ವತಿಯಿಂದ ತರಬೇತಿ ಶಿಬಿರ | ದೋಟಿ ಖರೀದಿಗೆ ಸಹಾಯ ಯೋಜನೆ | ದೋಟಿ ಬಗ್ಗೆ ಆಸಕ್ತಿ ವಹಿಸಿದ ಮಹಿಳೆಯರು.. ! |

March 26, 2022
9:40 AM

ಅರಂತೋಡು ತೊಡಿಕಾನ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ  ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ತರಬೇತಿ ಶಿಬಿರ ಶುಕ್ರವಾರ ಉಳುವಾರು ರಾಧಾಕೃಷ್ನ ಅವರ ಅಡಿಕೆ ತೋಟದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಿಂದ ದೋಟಿ ಖರೀದಿ ಹಾಗೂ ಸಾಲ ಯೋಜನೆಯನ್ನು ನೀಡಲು ಚಿಂತನೆ ನಡೆಸಲಾಗುವುದು  ಎಂದರು.

Advertisement

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಸಾಯ ಎಂಟರ್ ಪ್ರೈಸಸ್ ಪುತ್ತೂರು ಇವರ ಸಹಯೋಗದೊಂದಿಗೆ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಕೃಷಿಕ ದೀಪಕ್‌ ಕುತ್ತಮೊಟ್ಟೆ ಉದ್ಘಾಟಿಸಿದರು. ಈ ಸಂದರ್ಭ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಸಾಯ ಎಂಟರ್‌ ಪ್ರೈಸಸ್‌ ನ ಗೋವಿಂದ ಪ್ರಕಾಶ್‌, ತರಬೇತುದಾರರಾದ ಮೂರೂರು ಕಲ್ಲಬ್ಬೆಯ ಆರ್ ಜಿ ಹೆಗಡೆ, ರಮೇಶ್ ಭಟ್  ಉಪಸ್ಥಿತರಿದ್ದರು.

Advertisement

ಮೂರೂರು ಕಲ್ಲಬ್ಬೆ ಗ್ರಾಮದ ಆರ್ ಜಿ ಹೆಗಡೆ ಹಾಗೂ ರಮೇಶ್ ಭಟ್  ಕಾರ್ಬನ್ ಫೈಬರ್ ದೋಟಿಯಲ್ಲಿ ಸುಲಭವಾಗಿ ಅಡಿಕೆ ಕೊಯ್ಲು ಹಾಗೂ ಸಿಂಪಡಣೆ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಶಿಬಿರದಲ್ಲಿ 10 ಮಂದಿ ತರಬೇತಿ ಪಡೆದರು.30 ಕ್ಕೂ ಅಧಿಕ ಕೃಷಿಕರು ಭಾಗವಹಿಸಿದರು. ಮಹಿಳೆಯರು ಕೂಡಾ ಶಿಬಿರದಲ್ಲಿ ಭಾಗವಹಿಸಿದರು. ಸಹಕಾರಿ ಸಂಘದ ಮೂಲಕ ವೈಯಕ್ತಿಕ ಅಥವಾ ರೈತ ಗುಂಪು ರಚಿಸಿ ಸಹಕಾರಿ ಸಂಘದಿಂದ ದೋಟಿ ಖರೀದಿಗೆ ಯೋಜನೆ ರೂಪಿಸಲು ಸಿದ್ಧತೆ ನಡೆಸಲಾಗಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror