Advertisement
ಸುದ್ದಿಗಳು

ಅಡಿಕೆ ಕೌಶಲ್ಯ ಪಡೆ | ಅರಂತೋಡು ಸಹಕಾರಿ ಸಂಘದ ವತಿಯಿಂದ ತರಬೇತಿ ಶಿಬಿರ | ದೋಟಿ ಖರೀದಿಗೆ ಸಹಾಯ ಯೋಜನೆ | ದೋಟಿ ಬಗ್ಗೆ ಆಸಕ್ತಿ ವಹಿಸಿದ ಮಹಿಳೆಯರು.. ! |

Share

ಅರಂತೋಡು ತೊಡಿಕಾನ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ  ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ತರಬೇತಿ ಶಿಬಿರ ಶುಕ್ರವಾರ ಉಳುವಾರು ರಾಧಾಕೃಷ್ನ ಅವರ ಅಡಿಕೆ ತೋಟದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಿಂದ ದೋಟಿ ಖರೀದಿ ಹಾಗೂ ಸಾಲ ಯೋಜನೆಯನ್ನು ನೀಡಲು ಚಿಂತನೆ ನಡೆಸಲಾಗುವುದು  ಎಂದರು.

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಸಾಯ ಎಂಟರ್ ಪ್ರೈಸಸ್ ಪುತ್ತೂರು ಇವರ ಸಹಯೋಗದೊಂದಿಗೆ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಕೃಷಿಕ ದೀಪಕ್‌ ಕುತ್ತಮೊಟ್ಟೆ ಉದ್ಘಾಟಿಸಿದರು. ಈ ಸಂದರ್ಭ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಸಾಯ ಎಂಟರ್‌ ಪ್ರೈಸಸ್‌ ನ ಗೋವಿಂದ ಪ್ರಕಾಶ್‌, ತರಬೇತುದಾರರಾದ ಮೂರೂರು ಕಲ್ಲಬ್ಬೆಯ ಆರ್ ಜಿ ಹೆಗಡೆ, ರಮೇಶ್ ಭಟ್  ಉಪಸ್ಥಿತರಿದ್ದರು.

ಮೂರೂರು ಕಲ್ಲಬ್ಬೆ ಗ್ರಾಮದ ಆರ್ ಜಿ ಹೆಗಡೆ ಹಾಗೂ ರಮೇಶ್ ಭಟ್  ಕಾರ್ಬನ್ ಫೈಬರ್ ದೋಟಿಯಲ್ಲಿ ಸುಲಭವಾಗಿ ಅಡಿಕೆ ಕೊಯ್ಲು ಹಾಗೂ ಸಿಂಪಡಣೆ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಶಿಬಿರದಲ್ಲಿ 10 ಮಂದಿ ತರಬೇತಿ ಪಡೆದರು.30 ಕ್ಕೂ ಅಧಿಕ ಕೃಷಿಕರು ಭಾಗವಹಿಸಿದರು. ಮಹಿಳೆಯರು ಕೂಡಾ ಶಿಬಿರದಲ್ಲಿ ಭಾಗವಹಿಸಿದರು. ಸಹಕಾರಿ ಸಂಘದ ಮೂಲಕ ವೈಯಕ್ತಿಕ ಅಥವಾ ರೈತ ಗುಂಪು ರಚಿಸಿ ಸಹಕಾರಿ ಸಂಘದಿಂದ ದೋಟಿ ಖರೀದಿಗೆ ಯೋಜನೆ ರೂಪಿಸಲು ಸಿದ್ಧತೆ ನಡೆಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

6 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

12 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

24 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago