ಸುದ್ದಿಗಳು

ಅಡಿಕೆ ಕೌಶಲ್ಯ ಪಡೆ | ಕೊಕ್ಕಡದಲ್ಲಿ ದೋಟಿ ತರಬೇತಿ ಶಿಬಿರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ಸಹಯೋಗದೊಂದಿಗೆ ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ತರಬೇತಿ ಶಿಬಿರ ಗುರುವಾರ ಕೊಕ್ಕಡದ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಇವರ ಅಡಿಕೆ ತೋಟದಲ್ಲಿ ನಡೆಯಿತು.

Advertisement
Advertisement

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ಹಾಗೂ ಸಾಯ ಎಂಟರ್ ಪ್ರೈಸಸ್ ಪುತ್ತೂರು ಇವರ ಸಹಯೋಗದೊಂದಿಗೆ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ ಉದ್ಘಾಟಿಸಿ, ಶಿಬಿರ ಅಗತ್ಯದ ಬಗ್ಗೆ ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆಗೆ ಪರಿಹಾರ ಸಿಗಬೇಕು ಹಾಗೂ ಯುವಕರೂ ಕೂಡಾ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಇಂತಹ ಶಿಬಿರ ಅಗತ್ಯ ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರು ಈಶ್ವರ ಭಟ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ಹಾಗೂ ತರಬೇತುದಾರರಾದ ಮೂರೂರು ಕಲ್ಲಬ್ಬೆಯ ಆರ್ ಜಿ ಹೆಗಡೆ, ರಮೇಶ್ ಭಟ್ , ಸಾಯ ಎಂಟರ್ಪ್ರೈಸಸ್ ಪದ್ಮನಾಭ ಗೌಡ  ಉಪಸ್ಥಿತರಿದ್ದರು.

ಮೂರೂರು ಕಲ್ಲಬ್ಬೆ ಗ್ರಾಮದ ಆರ್ ಜಿ ಹೆಗಡೆ ಹಾಗೂ ರಮೇಶ್ ಭಟ್  ಕಾರ್ಬನ್ ಫೈಬರ್ ದೋಟಿಯಲ್ಲಿ ಸುಲಭವಾಗಿ ಅಡಿಕೆ ಕೊಯ್ಲು ಹಾಗೂ ಸಿಂಪಡಣೆ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಶಿಬಿರದಲ್ಲಿ 60 ಕ್ಕೂ ಅಧಿಕ ಕೃಷಿಕರು ಭಾಗವಹಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

5 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

5 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

5 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

5 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

5 hours ago