ಅಡಿಕೆ ಬೆಳೆಗಾರರ ಭವಿಷ್ಯ ಗಮನದಲ್ಲಿರಿಸಿಯೇ ಸಚಿವರು ಹೇಳಿಕೆ ನೀಡಿದ್ದಾರೆ | ತಪ್ಪಾಗಿ ಅರ್ಥೈಸಲಾಗಿದೆ | ಬೆಳೆಗಾರರಿಗೆ ಆತಂಕ ಬೇಡ | ಸಚಿವ ಅಂಗಾರ ಹೇಳಿಕೆ |

December 31, 2022
10:37 PM

ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಡಿಕೆ ಕೃಷಿಕರೂ ಆಗಿರುವ  ಗೃಹಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೃಷಿಕರು ಯಾವುದೇ ಗೊಂದಲ ಪಡುವುವುದು ಬೇಡ, ಬೆಳೆಗಾರರ ಪರವಾಗಿ ಸರ್ಕಾರ ಇದೆ ಎಂದು ಸಚಿವ ಎಸ್‌ ಅಂಗಾರ ಹೇಳಿದ್ದಾರೆ.

ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಡಿಕೆ ಕೃಷಿಗೆ ಭವಿಷ್ಯವಿಲ್ಲ ಎಂದು ಗೃಹ ಸಚಿವರು ಹೇಳಿರುವ ಹೇಳಿಕೆಯನ್ನು ಕೆಲವು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್‌ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ಕೃಷಿಕರಲ್ಲಿ ಗೊಂದಲ ಮೂಡಿಸುತ್ತಿದೆ. ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡೇ ಸಚಿವರು ಹೇಳಿಕೆ ನೀಡಿದ್ದಾರೆ. ಕೆಲವು ರಾಜ್ಯಗಳಲ್ಲಿ ಒಂದೇ ಬೆಳೆಯನ್ನು ಬೆಳೆಯಲು ಅವಕಾಶ ಇಲ್ಲ, ಆಯಾ ಪ್ರದೇಶಕ್ಕೆ ಅನುಗುಣವಾಗಿ ಬೆಳೆ ಬದಲಾವಣೆ ಆಗುತ್ತದೆ ಎಂದ ಸಚಿವರು ಅಡಿಕೆ ಅಭಿವೃದ್ಧಿ, ಸಂಶೋಧನೆಗೆ ಸರ್ಕಾರ ನೆರವು ನೀಡುತ್ತಿದೆ.  ಅಡಿಕೆಯ ಧಾರಣೆಯನ್ನು ಉಳಿಸಿಕೊಳ್ಳುವ ಅಗತ್ಯ ಇದೆ. ಸರ್ಕಾರಕ್ಕೂ ಜವಾಬ್ದಾರಿ ಇದೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ
May 28, 2026
7:20 AM
by: ದ ರೂರಲ್ ಮಿರರ್.ಕಾಂ
ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror