ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಡಿಕೆ ಕೃಷಿಕರೂ ಆಗಿರುವ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೃಷಿಕರು ಯಾವುದೇ ಗೊಂದಲ ಪಡುವುವುದು ಬೇಡ, ಬೆಳೆಗಾರರ ಪರವಾಗಿ ಸರ್ಕಾರ ಇದೆ ಎಂದು ಸಚಿವ ಎಸ್ ಅಂಗಾರ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಡಿಕೆ ಕೃಷಿಗೆ ಭವಿಷ್ಯವಿಲ್ಲ ಎಂದು ಗೃಹ ಸಚಿವರು ಹೇಳಿರುವ ಹೇಳಿಕೆಯನ್ನು ಕೆಲವು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ಕೃಷಿಕರಲ್ಲಿ ಗೊಂದಲ ಮೂಡಿಸುತ್ತಿದೆ. ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡೇ ಸಚಿವರು ಹೇಳಿಕೆ ನೀಡಿದ್ದಾರೆ. ಕೆಲವು ರಾಜ್ಯಗಳಲ್ಲಿ ಒಂದೇ ಬೆಳೆಯನ್ನು ಬೆಳೆಯಲು ಅವಕಾಶ ಇಲ್ಲ, ಆಯಾ ಪ್ರದೇಶಕ್ಕೆ ಅನುಗುಣವಾಗಿ ಬೆಳೆ ಬದಲಾವಣೆ ಆಗುತ್ತದೆ ಎಂದ ಸಚಿವರು ಅಡಿಕೆ ಅಭಿವೃದ್ಧಿ, ಸಂಶೋಧನೆಗೆ ಸರ್ಕಾರ ನೆರವು ನೀಡುತ್ತಿದೆ. ಅಡಿಕೆಯ ಧಾರಣೆಯನ್ನು ಉಳಿಸಿಕೊಳ್ಳುವ ಅಗತ್ಯ ಇದೆ. ಸರ್ಕಾರಕ್ಕೂ ಜವಾಬ್ದಾರಿ ಇದೆ ಎಂದರು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…