Advertisement
MIRROR FOCUS

ನೇಪಾಳದಲ್ಲಿ ಅಡಿಕೆ ಆಮದು ಸುಂಕ ಏರಿಕೆ | ಮ್ಯಾನ್ಮಾರ್‌ ಮೂಲಕ ದೇಶಕ್ಕೆ ಕಳಪೆ ಅಡಿಕೆ ರವಾನೆ | ಅಡಿಕೆ ಆಮದು ತಡೆಗೆ ಕ್ಯಾಂಪ್ಕೋ ಒತ್ತಾಯ | ಆಮದು ಸುಂಕ ಏರಿಕೆಗೆ ಬೇಕಿದೆ ಅಗತ್ಯ ಕ್ರಮ |

Share
News Summary
‌ಅಡಿಕೆ ಆಮದು ಸುದ್ದಿ ಮತ್ತೆ ಚರ್ಚೆಯಾಗುತ್ತಿದೆ. ಅಡಿಕೆ ಆಮದು ಎಂದ ತಕ್ಷಣವೇ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗುತ್ತಾರೆ. ಧಾರಣೆ, ಮಾರುಕಟ್ಟೆ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾರೆ. ಅಂತಹ ಆತಂಕ ಸದ್ಯಕ್ಕಿಲ್ಲ. ಆದರೆ ಭವಿಷ್ಯದ ದೃಷ್ಟಿಯಿಂದ ಈಗಲೇ ಅಗತ್ಯ ಕ್ರಮಗಳು ಬೇಕಾಗಿದೆ.

ನೇಪಾಳ ಸರ್ಕಾರವು ಅಡಿಕೆ ಆಮದು ಮೇಲಿನ ಅಬಕಾರಿ ಸುಂಕವನ್ನು  ಹೆಚ್ಚಿಸಿದೆ. ತೃತೀಯ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುವುದನ್ನು ಮತ್ತು ಭಾರತಕ್ಕೆ ಕಳ್ಳಸಾಗಣೆದಾರರನ್ನು ತಡೆಯಲು ಕ್ರಮ ಕೈಗೊಂಡ ಬೆನ್ನಲ್ಲೇ ಬರ್ಮಾ ಸೇರಿದಂತೆ ವಿವಿದೆಡೆಯ ಕಡಿಮೆ ಗುಣಮಟ್ಟದ ಅಡಿಕೆ ಮತ್ತೆ ಭಾರತದೊಳಕ್ಕೆ ಆಗಮನವಾಗುತ್ತಿದೆ.  ಮ್ಯಾನ್ಮಾರ್‌ ಗಡಿಯ ಮೂಲಕ ಅಸ್ಸಾಂ ದಾರಿಯಲ್ಲಿ ಭಾರತೊಳಕ್ಕೆ ಇತರ ವಸ್ತುಗಳ ಜತೆ ಸಾಂಬಾರು ವಸ್ತುಗಳ ಹೆಸರಿನಲ್ಲಿ ಅಡಿಕೆ, ಕಾಳುಮೆಣಸು ಕೂಡ ಕಡಿಮೆ ಬೆಲೆಗೆ ಆಮದಾಗುತ್ತಿದೆ. ಇದರಿಂದ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ. ಹೀಗಾಗಿ ಇದೀಗ ಅಡಿಕೆ ಆಮದು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

Advertisement
Advertisement

ಕಳೆದ ಕೆಲವು ಸಮಯಗಳಿಂದ ಸದ್ದಿಲ್ಲದೆ ಅಧಿಕೃತ ದಾರಿಯ ಮೂಲಕ ಬರ್ಮಾದ ಕಡಿಮೆ ಗುಣಮಟ್ಟದ ಅಡಿಕೆ ಆಮದು ಆಗುತ್ತಿದೆ. ಇತರ ಸಾಂಬಾರು ವಸ್ತುಗಳ ಹೆಸರಿನಲ್ಲಿ ಅಡಿಕೆ, ಕಾಳುಮೆಣಸು ಕೂಡ ಕಡಿಮೆ ಬೆಲೆಗೆ ಆಮದಾಗುತ್ತಿದೆ.  ಮ್ಯಾನ್ಮಾರ್‌ ಗಡಿಯಲ್ಲಿ ಗೇಟ್ ತೆರೆದು ವ್ಯಾಪಾರ ಪುನರಾರಂಭಕ್ಕೆ ಅವಕಾಶ ಕಲ್ಪಿ‌ಸಲಾಗಿದೆ. ದೇಶದ ಹಿತದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆಯಾದರೂ ಇತರ ವಸ್ತುಗಳ ಜೊತೆಗೆ ಅಡಿಕೆಯೂ ಆಮದಾಗುತ್ತಿದೆ. ಇದು ಇಲ್ಲಿನ ಕೃಷಿಕರ ಮೇಲೆ ಪರಿಣಾಂ ಬೀರಲಿದೆ.ಹೀಗಾಗಿ ಕ್ರಮ ಅಗತ್ಯ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ಗೆ ಅವರಿಗೆ ಕ್ಯಾಂಪ್ಕೋ ಪತ್ರ ಬರೆದಿದೆ. ತಕ್ಷಣವೇ ಅಡಿಕೆ ಆಮದು ತಡೆಗೆ ಕ್ರಮ ಆಗಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಒತ್ತಾಯಿಸಿದ್ದಾರೆ.

Advertisement

ಈ ನಡುವೆ ನೇಪಾಳ ಸರ್ಕಾರವು ಅಡಿಕೆ ಆಮದು ಮೇಲಿನ ಅಬಕಾರಿ ಸುಂಕವನ್ನು  ಹೆಚ್ಚಿಸಿದೆ. ತೃತೀಯ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುವುದನ್ನು ಮತ್ತು ಭಾರತಕ್ಕೆ ಕಳ್ಳಸಾಗಣೆ ಮಾಡುವುದನ್ನು ತಡೆಯಲು ಅಲ್ಲಿನ  ಸರ್ಕಾರವು ಅಡಿಕೆ ಆಮದಿನ ಮೇಲೆ ಪ್ರತಿ ಕೆಜಿಗೆ 75 ರೂಪಾಯಿ ಹೆಚ್ಚುವರಿ ತೆರಿಗೆ ವಿಧಿಸಲು ಪ್ರಾರಂಭಿಸಿದೆ. ಭಾರತಕ್ಕಿಂತ ನೇಪಾಳದಲ್ಲಿ ಅಡಿಕೆ ಅಗ್ಗವಾಗಿರುವುದರಿಂದ ಮೂರನೇ ದೇಶಗಳಿಂದ ಅಡಿಕೆಯನ್ನು ಆಮದು ಮಾಡಿಕೊಂಡು ಅಕ್ರಮವಾಗಿ ಭಾರತದ ಮಾರುಕಟ್ಟೆಗೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಇದರಿಂದ ನೇಪಾಳಕ್ಕೂ ಯಾವುದೇ ಲಾಭವೂ ಇದ್ದಿರಲಿಲ್ಲ. ಹೀಗಾಗಿ ಸುಂಕ ಹೆಚ್ಚು ಮಾಡಿತ್ತು, ಭಾರತಕ್ಕೆ ಕಳ್ಳಸಾಗಾಣಿಕೆ ತಡೆಯೂ ಆಗಿತ್ತು. ನೇಪಾಳ ಹೊರತುಪಡಿಸಿ ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ಭಾರತ ನಿಷೇಧಿಸಿರುವ ಅಡಿಕೆಯನ್ನು ನೇಪಾಳದೊಂದಿಗಿನ ಮುಕ್ತ ಗಡಿಯ ಲಾಭ ಪಡೆದು ಇಂಡೋನೇಷ್ಯಾ, ಥಾಯ್ಲೆಂಡ್ ಮತ್ತು ಮಲೇಷ್ಯಾದಿಂದ ನೇಪಾಳ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ಈ ವ್ಯವಹಾರದಲ್ಲಿ ರಾಜಕೀಯ ಪ್ರಮುಖರ ಕೈವಾಡವೂ ಇದ್ದಿರುವುದು ಬಹಿರಂಗ ಸತ್ಯವಾಗಿತ್ತು ಕೂಡಾ.ಅಡಿಕೆ ಮಾತ್ರವಲ್ಲ ಮೆಕ್ಕೆಜೋಳ ಮತ್ತು ಕರಿಮೆಣಸಿನ ಮೇಲಿನ ಅಬಕಾರಿ ಸುಂಕವನ್ನೂ ಸರ್ಕಾರ ಹೆಚ್ಚಿಸಿದೆ. ಭಾರತಕ್ಕೆ ಕಳ್ಳಸಾಗಣೆಯಾಗುವ ಪ್ರಮುಖ ವಸ್ತುಗಳ ಪೈಕಿ ಶೇಂಗಾ ಮತ್ತು ಕರಿಮೆಣಸು ಕೂಡ ಸೇರಿತ್ತು.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಅಸ್ಸಾಂ ಮೂಲಕ ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಆದರೆ ಅಸ್ಸಾಂ ಗಡಿ ಭದ್ರತಾ ಪಡೆ ಹಾಗೂ ತೆರಿಗೆ ಇಲಾಖೆ ಆಗಾಗ ಅಡಿಕೆಯನ್ನು ವಶಪಡಿಸಿಕೊಂಡು ಅಡಿಕೆ ಆಮದಿಗೆ ಸಾಕಷ್ಟು ಬ್ರೇಕ್‌ ಹಾಕಿತ್ತು. ಕೊರೋನಾ ನಂತರ ಈಲ್ಲಿನ ಗಡಿಯನ್ನೂ ಹೆಚ್ಚು ನಿಗಾ ಇರಿಸಲಾಗಿತ್ತು. ಆದರೆ ಇದೀಗ ದೇಶದ ಹಿತಾಸಕ್ತಿ ನೆಲೆಯಲ್ಲಿ ನೆರೆಯ ದೇಶಗಳ ಜತೆ ಗಡಿಗಳಲ್ಲಿ ವ್ಯಾಪಾರ ಪುನರಾರಂಭಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಮ್ಯಾನ್ಮಾರ್‌ ಗಡಿಯಲ್ಲಿನ ಮಣಿಪುರ ಗೇಟುಗಳ ಮೂಲಕ ಅಡಿಕೆ ಸಹಿತ ಕಾಳುಮೆಣಸು ಸಾಕಷ್ಟು ಪ್ರಮಾಣದಲ್ಲಿ ಬರುತ್ತಿದೆ. ಆದರೆ ಸಾಂಬಾರ ವಸ್ತುಗಳು ಎಂಬ ಹೆಸರಿನಲ್ಲಿ ಅಡಿಕೆ ಆಮದಾಗುತ್ತಿದೆ. ಇದಕ್ಕೆ ತಡೆಯಾಗಬೇಕು ಎನ್ನುವ ಒತ್ತಾಯ ಈಗ ಕೇಳಿಬಂದಿದೆ.

Advertisement

ಈಗಾಗಲೇ ಮ್ಯಾನ್ಮಾರ್‌ ಗಡಿ ಮೂಲಕ ಭಾರತದೊಳಕ್ಕೆ ಆಗಮಿಸಿದ ಅಡಿಕೆಯು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಕೆಲವು ಕಡೆ ತಲುಪಿದೆ. ಈ ಅಡಿಕೆಯನ್ನು ಇಲ್ಲಿನ ಅಡಿಕೆ ಜೊತೆ ಸೇರಿಸಲಾಗುತ್ತಿದೆ ಎಂಬ ಅನುಮಾನ ಹೆಚ್ಚಾಗಿದೆ. ಆದರೆ ಧಾರಣೆಯಲ್ಲಿ ಸದ್ಯಕ್ಕೆ ಭಾರೀ ಇಳಿಕೆ ಕಾಣದು ಎಂಬ ನಿರೀಕ್ಷೆ ಇದೆ.

ಅಡಿಕೆ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿಯಾಗಿದೆ. ಅಲ್ಲದೆ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಕೃಷಿ ವಿಸ್ತರಣೆಯೂ ಆಗಿದೆ. ಈ ಕಾರಣದಿಂದ ಅಡಿಕೆ ಆಮದು ಇಲ್ಲಿ ಅಗತ್ಯವಿಲ್ಲ. ಭಾರತದಲ್ಲಿ ಕಾಳುಮೆಣಸು ಉತ್ಪಾದನೆಯೂ ಭಾರತೀಯ ಮಾರುಕಟ್ಟೆಯ ಅಗತ್ಯಗಳನ್ನು ಪೂರೈಸುತ್ತದೆ. ಈ ಸನ್ನಿವೇಶದಲ್ಲಿ ಅಡಿಕೆ ಮತ್ತು ಕಾಳುಮೆಣಸು ಆಮದು ಅವಶ್ಯಕತೆ ಇಲ್ಲ. ಇವೆರಡೂ ಕೃಷಿ ವಸ್ತುಗಳ ಆಗಮನದಿಂದ ಭವಿಷ್ಯದಲ್ಲಿ ದೇಶದ ಕೆಲ ಪ್ರದೇಶ ಕೃಷಿಕರ ಮೇಲೆ, ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ.

Advertisement
ಏನು ಮಾಡಬೇಕು ಈಗ ?

ಈಗ ಅಡಿಕೆ ಆಮದು ಸುಂಕ ಹೆಚ್ಚು ಮಾಡಬೇಕಾದ ಅಗತ್ಯ ಇದೆ. ಈಗಾಗಲೇ ಧಾರಣೆ ಏರಿಕೆಯ ಜೊತೆಗೆ ಅಡಿಕೆಯ ಉತ್ಪಾದನಾ ವೆಚ್ಚವೂ ಏರಿಕೆಯಾಗಿದೆ. ಈ ಹಿಂದೆ ಕ್ಯಾಂಪ್ಕೋ ನೇತೃತ್ವದಲ್ಲಿ ಸಿಪಿಸಿಆರ್‌ಐ ಹಾಗೂ ಅಖಿಲ ಅಡಿಕೆ ಬೆಳೆಗಾರರ ಸಂಘ ಮತ್ತು ಇತರ ಅಡಿಕೆ ಬೆಳೆಗಾರರ ಸಂಘದ ಜಂಟಿ ಸಭೆ ನಡೆದು ಅಡಿಕೆ ಉತ್ಪಾದನಾ ವೆಚ್ಚವನ್ನು 160 ರೂಪಾಯಿಂದ 251 ರೂಪಾಯಿಗೆ ಏರಿಕೆ ಮಾಡಲಾಗಿತ್ತು.

Advertisement

ಇದೀಗ ಮತ್ತೆ ಕ್ಯಾಂಪ್ಕೋ ಹಾಗೂ ಇತರ ಸಂಸ್ಥೆಗಳ ಸಭೆ ನಡೆದು ಅಡಿಕೆಯ ಉತ್ಪಾದನಾ ವೆಚ್ಚದಲ್ಲಿ ಏರಿಕೆ ಮಾಡಬೇಕಾಗಿದೆ. ಸದ್ಯ 350-400 ರೂಪಾಯಿ ಉತ್ಪಾದನಾ ವೆಚ್ಚದ ಬಗ್ಗೆ ಕೃಷಿಕರು ಮಾತನಾಡುತ್ತಿರುವಾಗ ಈ ಬಗ್ಗೆ ಅಧಿಕೃತವಾದ ನಿಗದಿ ಆಗಬೇಕಿದೆ. ಈ ಮೂಲಕ ಸರ್ಕಾರವನ್ನೂ ಆಮದು ಸುಂಕ ಏರಿಕೆಗೆ ಒತ್ತಾಯ ಮಾಡುವುದು ಹಾಗೂ ಆಮದು ಕನಿಷ್ಟ ದರವಾಗಿ ಅಡಿಕೆ ಉತ್ಪಾದನಾ ವೆಚ್ಚವನ್ನೇ ನಿಗದಿ ಮಾಡಬೇಕಿದೆ. ಹೀಗಾದರೆ ಅಡಿಕೆ ಆಮದು ತಡೆ ಹಾಗೂ ಅಡಿಕೆ ಬೆಳೆಗಾರರಿಗೂ ಉತ್ತಮ ಧಾರಣೆ ಲಭ್ಯವಾಗಲಿದೆ.

ಭಾರತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಡಿಕೆ ಉತ್ಪಾದನೆಯಾಗುತ್ತದೆ. ಹೀಗಾಗಿ ಅಡಿಕೆ ಆಮದು ಅಗತ್ಯವಿಲ್ಲ. ಈ ಕಾರಣದಿಂದ ತಕ್ಷಣವೇ ಸರ್ಕಾರವು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ವಿದೇಶಾಂಗ ಸಚಿವರಿಗೆ ಬರೆದು ಮನವಿ ಮಾಡಲಾಗಿದೆ. ಅಡಿಕೆ ಉತ್ಪಾದನಾ ವೆಚ್ಚ  ಏರಿಕೆಯಾಗಿದೆ. ಆದ್ದರಿಂದ ಗರಿಷ್ಠ ಮೊತ್ತವನ್ನು ಆಮದು ಮೇಲೆ ನಿಗದಿಪಡಿಸಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

Advertisement

ಪ್ರತಿಕ್ರಿಯಿಸಿ :
@ruralmirror

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

1 min ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

8 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

11 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago