Advertisement
Uncategorized

ಅಡಿಕೆ ಬೆಳೆ ವಿಸ್ತರಣೆಗೆ ಮುನ್ನ ಯೋಚಿಸಿ | ಅಂತರಾಷ್ಟ್ರೀಯ ಮಟ್ಟದಲ್ಲಿ ಅಡಿಕೆಯನ್ನು “ಸಾವಿನ ಹಣ್ಣು” ಎಂದು ಬಿಂಬಿಸಲಾಗುತ್ತಿದೆ..! |

Share

ಅಡಿಕೆ ತಿಂದು ಉಗುಳುವ ವಸ್ತು. ಭಾರತದ ಹಲವು ಕಡೆಗಳಲ್ಲಿ ಪಾರಂಪರಿಕವಾಗಿ ಬೆಳೆಯುವ, ಬೆಳೆದಿರುವ ಅಡಿಕೆ ಇಂದಿಗೂ ಅದೇ ಮಾದರಿಯಲ್ಲಿ ಬೆಳೆಯಲಾಗುತ್ತಿದೆ. ಆದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಇಂದು ಅಡಿಕೆಯ ಬಗ್ಗೆ ಋಣಾತ್ಮಕ ಭಾವನೆ ಹೆಚ್ಚುತ್ತಿದೆ. ಭಾರತದಲ್ಲಿ ಸದ್ಯ ಅಡಿಕೆ ಮಾರುಕಟ್ಟೆಗೆ ಯಾವುದೇ ಆತಂಕ ಇಲ್ಲದಿದ್ದರೂ, ಅಂತರಾಷ್ಟ್ರೀಯ ಮಟ್ಟದಲ್ಲಿ ಅಡಿಕೆಯ ಬಗ್ಗೆ ವ್ಯಾಪಕವಾದ ತಪ್ಪು ಸಂದೇಶ ನೀಡಲಾಗುತ್ತಿದೆ. ಚೀನಾದಲ್ಲಿ ಅಡಿಕೆಯನ್ನು “ಸಾವಿನ ಹಣ್ಣು” ಎಂದು ಕರೆಯಲಾಗಿದೆ.

ಇದೇ ವೇಳೆ ಭಾರತದಲ್ಲಿ ಅಡಿಕೆ ಬೆಳೆ ವಿಸ್ತರಣೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಕ್ಯಾಂಪ್ಕೋ ಮಹಾಸಭೆಯಲ್ಲಿ ಸದಸ್ಯ ರಾಜಾರಾಮ ಭಟ್‌ ಅವರೂ ಇದೇ ಆತಂಕವನ್ನು ವ್ಯಕ್ತಪಡಿಸಿದ್ದರು. ತಮಿಳುನಾಡು, ಆಂದ್ರಪ್ರದೇಶದ ಕಡೆಗೆ ಲಕ್ಷಾಂತರ ಗಿಡಗಳು ರವಾನೆಯಾಗಿರುವುದು  ಆತಂಕ ಎಂದು ಹೇಳಿದ್ದರು. ಈ ಆತಂಕದ ನಡುವೆಯೇ ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಅಡಿಕೆಯ ಬಗ್ಗೆ ಋಣಾತ್ಮಕ ಭಾವನೆ ಬಿತ್ತಲಾಗುತ್ತಿದೆ.

ಚೀನಾದಲ್ಲಿ ಇತ್ತೀಚೆಗೆ ಬಾಯಿಯ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ ಚೀನಾದ ಗಾಯಕಿಯೊಬ್ಬರು ಸಾಯುವ ಕೆಲ ಸಮಯದ ಮೊದಲು ಅಡಿಕೆ ತಿನ್ನಬೇಡಿ ಎಂದು ಹೇಳಿದ್ದರು. ಅಡಿಕೆಯಿಂದಲೇ ಕ್ಯಾನ್ಸರ್‌ ಹರಡಿದೆ ಎನ್ನುವುದು ಅಧ್ಯಯನದ ವಿಷಯವಾದರೂ ಕ್ಯಾನ್ಸರ್‌ ರೋಗಿಯೇ ಹೀಗೆ ಹೇಳಿರುವುದು ಭಾರೀ ಚರ್ಚೆಯ ವಿಷಯವಾಗಿದೆ. ಕಾರ್ಸಿನೋಜೆನ್  ಒಳಗೊಂಡಿರುವ ಕಾರಣ ಇದನ್ನು “ಸಾವಿನ ಹಣ್ಣು” ಎಂದು ಚೀನಾದಲ್ಲಿ ಕರೆಯಲಾಗಿದ್ದರೂ, ಚೀನಾದಲ್ಲಿ ಅಡಿಕೆ ಸೇವನೆಯು ಸ್ವಲ್ಪ ಹೆಚ್ಚೇ ಇದೆ. ಆದರೆ ದೊಡ್ಡ ಪ್ರಮಾಣದ ಮಾರಾಟ ನಿಯಂತ್ರಣವು ಇತ್ತೀಚೆಗೆ ಪ್ರಾರಂಭವಾಗಿದೆ. ಅಡಿಕೆ ತಿನ್ನುವುದು ಉತ್ತೇಜಕ ಮತ್ತು ಜೀರ್ಣಕಾರಿ ಪರಿಣಾಮವನ್ನು ಹೊಂದಿದೆ. ಆದರೆ ಕೆಲವು ಕಾರಣಗಳಿಂದ  ಚೀನಾ ಸರ್ಕಾರವು ಇತ್ತೀಚೆಗೆ ಅಡಿಕೆ ಉತ್ಪನ್ನದ ಮೇಲೆ ವ್ಯಾಪಕವಾದ ಮಾರಾಟ ನಿರ್ಬಂಧಗಳನ್ನು ವಿಧಿಸಿದೆ. ಅಡಿಕೆಯಲ್ಲಿ ಒಳಗೊಂಡಿರುವ ಕಾರ್ಸಿನೋಜೆನ್‌ ಇದಕ್ಕೆ ಕಾರಣ. ಅಡಿಕೆಯಲ್ಲಿನ ಅರೆಕೋಲಿನ್ ವಿಶ್ವ ಆರೋಗ್ಯ ಸಂಸ್ಥೆಯಿಂದ ಗುರುತಿಸಲ್ಪಟ್ಟ ವರ್ಗ 1 ಕಾರ್ಸಿನೋಜೆನ್ ಆಗಿದೆ ಎಂದು ಚೀನಾ ಹೇಳಿಕೊಂಡಿದೆ. ಚೀನಾದ  ಹುನಾನ್ ಪ್ರಾಂತ್ಯದಲ್ಲಿ 8,000 ಬಾಯಿ ಕ್ಯಾನ್ಸರ್ ರೋಗಿಗಳ ಸಮೀಕ್ಷೆಯು 90% ರಷ್ಟು ಅಡಿಕೆಯನ್ನು ಸೇವಿಸಿದೆ ಎಂದು ಕಂಡುಹಿಡಿದಿದೆ. ಹೀಗಾಗಿ ಚೀನಾ ಈಗ ಅಡಿಕೆಯ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನ ಮಾಡುತ್ತಿರುವುದು ಗಮನಿಸಬೇಕಾದ ಅಂಶ.ಈ ಹಿಂದೆ ಚೀನಾ ಸರ್ಕಾರ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅಡಿಕೆಯ ಜಾಹೀರಾತನ್ನು ನಿಷೇಧಿಸಿತ್ತು.

ಇದೆಲ್ಲದರ ನಡುವೆಯೂ ಅಡಿಕೆಯನ್ನು ಆರೋಗ್ಯವರ್ಧಕವಾಗಿಯೂ ಬಳಕೆ ಮಾಡಲಾಗುತ್ತಿದೆ. ಕೊರಿಯಾದಲ್ಲಿ  ಅಡಿಕೆಯನ್ನು ಗಿಡಮೂಲಿಕೆ ಔಷಧಿ ಎಂದು ವರ್ಗೀಕರಿಸಲಾಗಿದೆ.  ಹೀಗಾಗಿ 2018 ರಿಂದ ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ನಿರ್ದಿಷ್ಟ ನಿರ್ಬಂಧಗಳಿಲ್ಲದೆ 67 ಟನ್‌ ಗಳಷ್ಟು ಅಡಿಕೆಯನ್ನೂ ಆಮದು ಮಾಡಿಕೊಂಡಿದೆ.

ಭಾರತದಲ್ಲೂ ಅಡಿಕೆಯನ್ನು ವಿವಿಧ ಕಡೆಗಳಲ್ಲಿ ಬಳಕೆ ಮಾಡಲಾಗುತ್ತಿದೆ. ಆದರೆ ಬೇಡಿಕೆ ಹಾಗೂ ಸರಬರಾಜಿನಲ್ಲಿ ವ್ಯತ್ಯಾಸ ಇರುವುದರಿಂದ ಸದ್ಯ ಧಾರಣೆ ಉತ್ತಮವಾಗಿ. ಇನ್ನಷ್ಟು ವ್ಯಾಪಕವಾಗಿ ಅಡಿಕೆ ವಿಸ್ತರಣೆಯಾದರೆ ಅಡಿಕೆ ಮಾರುಕಟ್ಟೆಯಲ್ಲೂ ಆತಂಕ ಇದೆ. ಇದಕ್ಕಾಗಿ ಅಡಿಕೆ ಬೆಳೆ ವಿಸ್ತರಣೆ ಕಡಿಮೆಯಾಗಬೇಕು ಎನ್ನುವ ಅಭಿಪ್ರಾಯವೊಂದು ಆರಂಭವಾಗಿದೆ. ಕ್ಯಾಂಪ್ಕೋ ಮಹಾಸಭೆಯಲ್ಲೂ ಸದಸ್ಯ ರಾಜಾರಾಮ ಭಟ್‌ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಅಲ್ಲಿಯೂ ಅಡಿಕೆ ಖರೀದಿ ಕೇಂದ್ರ ತೆರೆಯಬೇಕಾದೀತು, ಆದರೆ ಪಾರಂಪರಿಕವಾಗಿ ಅಡಿಕೆ ಬೆಳೆಯುವ ನಾಡಿನ ಕತೆ ಏನು ಎಂಬುದು ಆತಂಕ ಎಂದು ರಾಜಾರಾಮ ಭಟ್‌ ಕ್ಯಾಂಪ್ಕೋ ಮಹಾಸಭೆಯಲ್ಲಿ ಉಲ್ಲೇಖಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago