Advertisement
MIRROR FOCUS

ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಅಡಿಕೆ ಪ್ರಸ್ತಾಪ | ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಬೆಳೆ ರಕ್ಷಣೆಗೆ ಒತ್ತು | ಸಭೆಯ ಗಮನಸೆಳೆದ ಅರುಣಾಚಲ ಡಿಸಿಎಂ |

Share

ಅಡಿಕೆ ಬೆಳೆಯ ಬಗ್ಗೆ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪವಾಗಿದೆ. ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ ಅವರು, ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಅರುಣಾಚಲ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿನ ಅಡಿಕೆ  ಬೆಳೆ ರಕ್ಷಣೆಗೆ ಒತ್ತು ನೀಡುವ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು.

Advertisement

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ  ಮಾತನಾಡಿದ ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ, ಇಂದು ದೇಶದಲ್ಲಿ ಅಡಿಕೆ ಬೆಳೆ ರೈತರಿಗೆ ಆದಾಯ ತರುವ ಉತ್ತಮ ಬೆಳೆಯಾಗಿದೆ. ಸಣ್ಣ ರೈತರಿಗೂ ಆದಾಯ ಗಳಿಕೆಯ ಬೆಳೆಯಾಗಿದೆ. ಇಲ್ಲಿ ದೊಡ್ಡ ಬೆಳೆಗಾರರೂ ಇದ್ದಾರೆ. ಹೀಗಾಗಿ ಅಡಿಕೆ ಬೆಳೆ ವಿಸ್ತರಣೆಗೆ ಇಲ್ಲಿ ಅವಕಾಶ ಇದೆ. ಲಭ್ಯ ಇರುವ ಭೂಮಿಯಲ್ಲಿ ಅಡಿಕೆ ಬೆಳೆ ಬೆಳೆಯಬಹುದಾಗಿದೆ. ಹೀಗಾಗಿ ಅಡಿಕೆಯ ಜಿಎಸ್‌ಟಿ ವ್ಯಾಪ್ತಿಯಿಂದ ಬರುವ ಆದಾಯದಲ್ಲಿ ಬೆಳೆ ರಕ್ಷಣೆಗೆ ಮುಂದಾಗಬೇಕು ಎಂದರು. ಇದಕ್ಕಾಗಿ  ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್‌ಟಿಎನ್) ಮಂಡಳಿಯಲ್ಲಿ ಮಂಡಳಿಯಲ್ಲಿ ರಾಜ್ಯ ಅಧಿಕಾರಿಗಳನ್ನು ಕಡ್ಡಾಯವಾಗಿ ನಾಮನಿರ್ದೇಶನ ಮಾಡಬೇಕು. ರಾಜ್ಯಮಟ್ಟದ ಅಧಿಕಾರಿಗಳು ಮಂಡಳಿಯಲ್ಲಿ ನೇಮಕ ಮಾಡಬೇಕು ಎಂದು ವಿಷಯ ಮಂಡಿಸಿದ್ದರು.

ಇದಕ್ಕಾಗಿ ರಾಜ್ಯದಲ್ಲಿ ಅಧಿಕಾರಿಗಳನ್ನು  ನಾಮನಿರ್ದೇಶನ ಮಾಡಬಹುದು  ಎಂದೂ ವಿಷಯ ಪ್ರಸ್ತಾಪಿಸಿದರು. ಜಿಎಸ್‌ಟಿ ಕೌನ್ಸಿಲ್ ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ  ಅವರ ಸಲಹೆಯನ್ನು ಒಪ್ಪಿಕೊಂಡು ಜಿಎಸ್‌ಟಿ ಕೌನ್ಸಿಲ್ ಅರುಣಾಚಲ ಪ್ರದೇಶದಿಂದ ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್‌ಟಿಎನ್) ಮಂಡಳಿಯಲ್ಲಿ ಮಧ್ಯಮ ಮಟ್ಟದ ಅಧಿಕಾರಿಗಳನ್ನು ನೇಮಿಸಲು ಒಪ್ಪಿಕೊಂಡಿದೆ ಹಾಗೂ ರಾಜ್ಯದಲ್ಲಿ ತನ್ನದೇ ಆದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಅಭಿಪ್ರಾಯಪಟ್ಟಿತು.

ಜಿಎಸ್‌ಟಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಮತ್ತು ದೇಶದ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಮಂತ್ರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

35 minutes ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

41 minutes ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

14 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

20 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago