Advertisement
MIRROR FOCUS

ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಅಡಿಕೆ ಪ್ರಸ್ತಾಪ | ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಬೆಳೆ ರಕ್ಷಣೆಗೆ ಒತ್ತು | ಸಭೆಯ ಗಮನಸೆಳೆದ ಅರುಣಾಚಲ ಡಿಸಿಎಂ |

Share

ಅಡಿಕೆ ಬೆಳೆಯ ಬಗ್ಗೆ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪವಾಗಿದೆ. ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ ಅವರು, ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಅರುಣಾಚಲ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿನ ಅಡಿಕೆ  ಬೆಳೆ ರಕ್ಷಣೆಗೆ ಒತ್ತು ನೀಡುವ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು.

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ  ಮಾತನಾಡಿದ ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ, ಇಂದು ದೇಶದಲ್ಲಿ ಅಡಿಕೆ ಬೆಳೆ ರೈತರಿಗೆ ಆದಾಯ ತರುವ ಉತ್ತಮ ಬೆಳೆಯಾಗಿದೆ. ಸಣ್ಣ ರೈತರಿಗೂ ಆದಾಯ ಗಳಿಕೆಯ ಬೆಳೆಯಾಗಿದೆ. ಇಲ್ಲಿ ದೊಡ್ಡ ಬೆಳೆಗಾರರೂ ಇದ್ದಾರೆ. ಹೀಗಾಗಿ ಅಡಿಕೆ ಬೆಳೆ ವಿಸ್ತರಣೆಗೆ ಇಲ್ಲಿ ಅವಕಾಶ ಇದೆ. ಲಭ್ಯ ಇರುವ ಭೂಮಿಯಲ್ಲಿ ಅಡಿಕೆ ಬೆಳೆ ಬೆಳೆಯಬಹುದಾಗಿದೆ. ಹೀಗಾಗಿ ಅಡಿಕೆಯ ಜಿಎಸ್‌ಟಿ ವ್ಯಾಪ್ತಿಯಿಂದ ಬರುವ ಆದಾಯದಲ್ಲಿ ಬೆಳೆ ರಕ್ಷಣೆಗೆ ಮುಂದಾಗಬೇಕು ಎಂದರು. ಇದಕ್ಕಾಗಿ  ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್‌ಟಿಎನ್) ಮಂಡಳಿಯಲ್ಲಿ ಮಂಡಳಿಯಲ್ಲಿ ರಾಜ್ಯ ಅಧಿಕಾರಿಗಳನ್ನು ಕಡ್ಡಾಯವಾಗಿ ನಾಮನಿರ್ದೇಶನ ಮಾಡಬೇಕು. ರಾಜ್ಯಮಟ್ಟದ ಅಧಿಕಾರಿಗಳು ಮಂಡಳಿಯಲ್ಲಿ ನೇಮಕ ಮಾಡಬೇಕು ಎಂದು ವಿಷಯ ಮಂಡಿಸಿದ್ದರು.

ಇದಕ್ಕಾಗಿ ರಾಜ್ಯದಲ್ಲಿ ಅಧಿಕಾರಿಗಳನ್ನು  ನಾಮನಿರ್ದೇಶನ ಮಾಡಬಹುದು  ಎಂದೂ ವಿಷಯ ಪ್ರಸ್ತಾಪಿಸಿದರು. ಜಿಎಸ್‌ಟಿ ಕೌನ್ಸಿಲ್ ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ  ಅವರ ಸಲಹೆಯನ್ನು ಒಪ್ಪಿಕೊಂಡು ಜಿಎಸ್‌ಟಿ ಕೌನ್ಸಿಲ್ ಅರುಣಾಚಲ ಪ್ರದೇಶದಿಂದ ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್‌ಟಿಎನ್) ಮಂಡಳಿಯಲ್ಲಿ ಮಧ್ಯಮ ಮಟ್ಟದ ಅಧಿಕಾರಿಗಳನ್ನು ನೇಮಿಸಲು ಒಪ್ಪಿಕೊಂಡಿದೆ ಹಾಗೂ ರಾಜ್ಯದಲ್ಲಿ ತನ್ನದೇ ಆದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಅಭಿಪ್ರಾಯಪಟ್ಟಿತು.

ಜಿಎಸ್‌ಟಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಮತ್ತು ದೇಶದ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಮಂತ್ರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

4 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

20 hours ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

2 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

3 days ago