Advertisement
MIRROR FOCUS

ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಅಡಿಕೆ ಪ್ರಸ್ತಾಪ | ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಬೆಳೆ ರಕ್ಷಣೆಗೆ ಒತ್ತು | ಸಭೆಯ ಗಮನಸೆಳೆದ ಅರುಣಾಚಲ ಡಿಸಿಎಂ |

Share

ಅಡಿಕೆ ಬೆಳೆಯ ಬಗ್ಗೆ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪವಾಗಿದೆ. ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ ಅವರು, ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಅರುಣಾಚಲ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿನ ಅಡಿಕೆ  ಬೆಳೆ ರಕ್ಷಣೆಗೆ ಒತ್ತು ನೀಡುವ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು.

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ  ಮಾತನಾಡಿದ ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ, ಇಂದು ದೇಶದಲ್ಲಿ ಅಡಿಕೆ ಬೆಳೆ ರೈತರಿಗೆ ಆದಾಯ ತರುವ ಉತ್ತಮ ಬೆಳೆಯಾಗಿದೆ. ಸಣ್ಣ ರೈತರಿಗೂ ಆದಾಯ ಗಳಿಕೆಯ ಬೆಳೆಯಾಗಿದೆ. ಇಲ್ಲಿ ದೊಡ್ಡ ಬೆಳೆಗಾರರೂ ಇದ್ದಾರೆ. ಹೀಗಾಗಿ ಅಡಿಕೆ ಬೆಳೆ ವಿಸ್ತರಣೆಗೆ ಇಲ್ಲಿ ಅವಕಾಶ ಇದೆ. ಲಭ್ಯ ಇರುವ ಭೂಮಿಯಲ್ಲಿ ಅಡಿಕೆ ಬೆಳೆ ಬೆಳೆಯಬಹುದಾಗಿದೆ. ಹೀಗಾಗಿ ಅಡಿಕೆಯ ಜಿಎಸ್‌ಟಿ ವ್ಯಾಪ್ತಿಯಿಂದ ಬರುವ ಆದಾಯದಲ್ಲಿ ಬೆಳೆ ರಕ್ಷಣೆಗೆ ಮುಂದಾಗಬೇಕು ಎಂದರು. ಇದಕ್ಕಾಗಿ  ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್‌ಟಿಎನ್) ಮಂಡಳಿಯಲ್ಲಿ ಮಂಡಳಿಯಲ್ಲಿ ರಾಜ್ಯ ಅಧಿಕಾರಿಗಳನ್ನು ಕಡ್ಡಾಯವಾಗಿ ನಾಮನಿರ್ದೇಶನ ಮಾಡಬೇಕು. ರಾಜ್ಯಮಟ್ಟದ ಅಧಿಕಾರಿಗಳು ಮಂಡಳಿಯಲ್ಲಿ ನೇಮಕ ಮಾಡಬೇಕು ಎಂದು ವಿಷಯ ಮಂಡಿಸಿದ್ದರು.

ಇದಕ್ಕಾಗಿ ರಾಜ್ಯದಲ್ಲಿ ಅಧಿಕಾರಿಗಳನ್ನು  ನಾಮನಿರ್ದೇಶನ ಮಾಡಬಹುದು  ಎಂದೂ ವಿಷಯ ಪ್ರಸ್ತಾಪಿಸಿದರು. ಜಿಎಸ್‌ಟಿ ಕೌನ್ಸಿಲ್ ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ  ಅವರ ಸಲಹೆಯನ್ನು ಒಪ್ಪಿಕೊಂಡು ಜಿಎಸ್‌ಟಿ ಕೌನ್ಸಿಲ್ ಅರುಣಾಚಲ ಪ್ರದೇಶದಿಂದ ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್‌ಟಿಎನ್) ಮಂಡಳಿಯಲ್ಲಿ ಮಧ್ಯಮ ಮಟ್ಟದ ಅಧಿಕಾರಿಗಳನ್ನು ನೇಮಿಸಲು ಒಪ್ಪಿಕೊಂಡಿದೆ ಹಾಗೂ ರಾಜ್ಯದಲ್ಲಿ ತನ್ನದೇ ಆದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಅಭಿಪ್ರಾಯಪಟ್ಟಿತು.

ಜಿಎಸ್‌ಟಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಮತ್ತು ದೇಶದ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಮಂತ್ರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago