Advertisement
MIRROR FOCUS

ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಅಡಿಕೆ ಪ್ರಸ್ತಾಪ | ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಬೆಳೆ ರಕ್ಷಣೆಗೆ ಒತ್ತು | ಸಭೆಯ ಗಮನಸೆಳೆದ ಅರುಣಾಚಲ ಡಿಸಿಎಂ |

Share

ಅಡಿಕೆ ಬೆಳೆಯ ಬಗ್ಗೆ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪವಾಗಿದೆ. ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ ಅವರು, ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಅರುಣಾಚಲ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿನ ಅಡಿಕೆ  ಬೆಳೆ ರಕ್ಷಣೆಗೆ ಒತ್ತು ನೀಡುವ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು.

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 45 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ  ಮಾತನಾಡಿದ ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ, ಇಂದು ದೇಶದಲ್ಲಿ ಅಡಿಕೆ ಬೆಳೆ ರೈತರಿಗೆ ಆದಾಯ ತರುವ ಉತ್ತಮ ಬೆಳೆಯಾಗಿದೆ. ಸಣ್ಣ ರೈತರಿಗೂ ಆದಾಯ ಗಳಿಕೆಯ ಬೆಳೆಯಾಗಿದೆ. ಇಲ್ಲಿ ದೊಡ್ಡ ಬೆಳೆಗಾರರೂ ಇದ್ದಾರೆ. ಹೀಗಾಗಿ ಅಡಿಕೆ ಬೆಳೆ ವಿಸ್ತರಣೆಗೆ ಇಲ್ಲಿ ಅವಕಾಶ ಇದೆ. ಲಭ್ಯ ಇರುವ ಭೂಮಿಯಲ್ಲಿ ಅಡಿಕೆ ಬೆಳೆ ಬೆಳೆಯಬಹುದಾಗಿದೆ. ಹೀಗಾಗಿ ಅಡಿಕೆಯ ಜಿಎಸ್‌ಟಿ ವ್ಯಾಪ್ತಿಯಿಂದ ಬರುವ ಆದಾಯದಲ್ಲಿ ಬೆಳೆ ರಕ್ಷಣೆಗೆ ಮುಂದಾಗಬೇಕು ಎಂದರು. ಇದಕ್ಕಾಗಿ  ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್‌ಟಿಎನ್) ಮಂಡಳಿಯಲ್ಲಿ ಮಂಡಳಿಯಲ್ಲಿ ರಾಜ್ಯ ಅಧಿಕಾರಿಗಳನ್ನು ಕಡ್ಡಾಯವಾಗಿ ನಾಮನಿರ್ದೇಶನ ಮಾಡಬೇಕು. ರಾಜ್ಯಮಟ್ಟದ ಅಧಿಕಾರಿಗಳು ಮಂಡಳಿಯಲ್ಲಿ ನೇಮಕ ಮಾಡಬೇಕು ಎಂದು ವಿಷಯ ಮಂಡಿಸಿದ್ದರು.

ಇದಕ್ಕಾಗಿ ರಾಜ್ಯದಲ್ಲಿ ಅಧಿಕಾರಿಗಳನ್ನು  ನಾಮನಿರ್ದೇಶನ ಮಾಡಬಹುದು  ಎಂದೂ ವಿಷಯ ಪ್ರಸ್ತಾಪಿಸಿದರು. ಜಿಎಸ್‌ಟಿ ಕೌನ್ಸಿಲ್ ಅರುಣಾಚಲ ಪ್ರದೇಶ ಉಪಮುಖ್ಯಮಂತ್ರಿ ಚೌನಾ ಮೇ  ಅವರ ಸಲಹೆಯನ್ನು ಒಪ್ಪಿಕೊಂಡು ಜಿಎಸ್‌ಟಿ ಕೌನ್ಸಿಲ್ ಅರುಣಾಚಲ ಪ್ರದೇಶದಿಂದ ಸರಕು ಮತ್ತು ಸೇವಾ ತೆರಿಗೆ ಜಾಲ (ಜಿಎಸ್‌ಟಿಎನ್) ಮಂಡಳಿಯಲ್ಲಿ ಮಧ್ಯಮ ಮಟ್ಟದ ಅಧಿಕಾರಿಗಳನ್ನು ನೇಮಿಸಲು ಒಪ್ಪಿಕೊಂಡಿದೆ ಹಾಗೂ ರಾಜ್ಯದಲ್ಲಿ ತನ್ನದೇ ಆದ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಅಭಿಪ್ರಾಯಪಟ್ಟಿತು.

ಜಿಎಸ್‌ಟಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಮತ್ತು ದೇಶದ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಮಂತ್ರಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

7 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

7 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

8 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

10 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

22 hours ago