ಜ.29 | ‘ಅಡಿಕೆ ಚೊಗರು; ಹೊಸ ನಿರೀಕ್ಷೆಗಳ ಚಿಗುರು’ ಪುಸ್ತಕ ಬಿಡುಗಡೆ

January 19, 2023
10:52 PM

ಕಳೆದ ನಾಲ್ಕೈದು ತಿಂಗಳಿಂದ ಅಡಿಕೆ ಪತ್ರಿಕೆ ನಡೆಸುತ್ತಿರುವ ಅಡಿಕೆ ಚೊಗರು ಅಭಿಯಾನ ಇದೀಗ ಪುಸ್ತಕ ರೂಪದಲ್ಲಿ ದಾಖಲಾಗುತ್ತಿದೆ. ಪತ್ರಿಕೋದ್ಯಮ ರಂಗದ ಅಪರೂಪದ, ವಿಶೇಷ ಪ್ರಯತ್ನವಿದು.

ಒಂದು ಬೆಳೆಯ ಪರ್ಯಾಯ ಬಳಕೆ ಹೆಚ್ಚಿದಷ್ಟೂ ಅದರ ವಾಣಿಜ್ಯಿಕ ಮಹತ್ವ ಹೆಚ್ಚುತ್ತದೆ. ಈ ಹಿನ್ನೆಲೆಯಲ್ಲಿ ಅಡಿಕೆ ಬಣ್ಣದ ಬಹೂಪಯೋಗಿ ಸಾಧ್ಯತೆ ಮೇಲೆ ಕೃತಿಯ ಲೇಖಕ, ಅಪ ಸಂಪಾದಕ ಶ್ರೀ ಪಡ್ರೆ ಅವರು ಬೆಳಕು ಚೆಲ್ಲಿದ್ದಾರೆ. ಅನೇಕ ಉತ್ಸಾಹಿಗಳಿಗೆ ಇದು ಖಂಡಿತ ಸ್ಪೂರ್ತಿ ನೀಡಲಿದೆ ಎಂಬ ಆಶಯ ನಮ್ಮದು.

ಪುತ್ತೂರಿನಿಂದ ಸುಳ್ಯ ಮಾರ್ಗದಲ್ಲಿ ಆರು ಕಿ.ಮೀ. ದೂರದಲ್ಲಿ ಪರ್ಪುಂಜ ಎಂಬಲ್ಲಿ ಹೆದ್ದಾರಿಗೆ ತಾಗಿಕೊಂಡಿರುವ ‘ಸೌಗಂಧಿಕ’ ಒಂದು ವಿಶಿಷ್ಟ ಹಸಿರುತಾಣ. ಕೆಫೆಟೇರಿಯ ಮತ್ತು ನರ್ಸರಿ ಕೂಡ. ಅಲ್ಲಿ ಇದೇ 29, ಭಾನುವಾರ ಬೆಳಿಗ್ಗೆ 11 ಗಂಟೆಗೆ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ಕೃಷಿ ಲೇಖಕ ಡಾ. ನರೇಂದ್ರ ರೈ ದೇರ್ಲ ಅವರು ‘ಅಡಿಕೆ ಚೊಗರು; ಹೊಸ ನಿರೀಕ್ಷೆಗಳ ಚಿಗುರು’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಲಿದ್ದಾರೆ ಎಂದು ಶಿವರಾಂ ಪೈಲೂರು ತಿಳಿಸಿದ್ದಾರೆ.

ಅಡಿಕೆ ಬಣ್ಣ ಬಳಸಿ ತಯಾರಿಸಿದ ಬಟ್ಟೆಗಳು, ಬುಗುರಿಗಳು ಹಾಗೂ ತೊಗರಿಗೆ ಸಂಬಂಧಿಸಿದ ಪೋಸ್ಟರ್ ಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಫಾರ್ಮರ್ ಫಸ್ಟ್ ಟ್ರಸ್ಟ್ ಮತ್ತು ಕೃಷಿ ಮಾಧ್ಯಮ ಕೇಂದ್ರ ಜಂಟಿಯಾಗಿ ಪುಸ್ತಕವನ್ನು ಪ್ರಕಟಿಸಿವೆ. ತೊಗರಿಗೆ ಸಂಬಂಧಿಸಿದ ಸಮೃದ್ಧ ಮಾಹಿತಿ, ಆಕರ್ಷಕ ವಿನ್ಯಾಸ, ಎಂಟು ವರ್ಣಪುಟ ಈ ಪುಸ್ತಕದ ವಿಶೇಷ.29ರ ಕಾರ್ಯಕ್ರಮ ನಮ್ಮೆಲ್ಲರಿಗೂ ಹೆಮ್ಮೆ, ಅಭಿಮಾನದ ಸಂದರ್ಭ ಇದು. ಹೀಗಾಗಿ ಕೃಷಿಕರೆಲ್ಲರಿಗೂ ಸ್ವಾಗತ ಎಂದು ಶಿವರಾಂ ಪೈಲೂರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror