Advertisement
MIRROR FOCUS

ಪುತ್ತೂರು ಮುತ್ತು ಹೆಸರಲ್ಲಿ ಅಡಿಕೆ ಬ್ರಾಂಡಿಂಗ್‌ ಚಿಂತನೆ | ಅಡಿಕೆ ಕಲಬೆರಕೆ ತಡೆಯಲು ಹೊಸ ಪ್ಲಾನ್‌ | ಅಡಿಕೆ ಬೆಳಗಾರರಿಂದ ನಡೆಯುತ್ತಿದೆ ಚಿಂತನೆ |

Share

ಅಡಿಕೆಗೆ ಬೆಲೆ(Arecanut price) ಏನೋ ಇದೆ. ಆದರೆ ಅದು ಅತಂತ್ರದ್ದು.ಅಡಿಕೆ ಕಳ್ಳ ಸಾಗಾಣಿಕೆ(Arecanut smuggling) ಮಲೆನಾಡು(Malenadu) ಹಾಗೂ ಕರಾವಳಿ(Coastal) ರೈತರ(Farmer) ಮೇಲೆ ದೊಡ್ಡ ಹೊಡೆತ ಕೊಟ್ಟಿದೆ. ವಿದೇಶದಿಂದ(Foreign) ಬರುವ ಅಕ್ರಮ ಅಡಿಕೆಗಳಿಂದ(Illegal Arecanut) ಇಲ್ಲಿನ ಅಡಿಕೆ ಬೆಲೆ ಕಳೆದುಕೊಳ್ಳುವ ಭೀತಿ ಸದಾ ಬೆಳೆಗಾರರಿಗೆ ಎದುರಾಗುತ್ತಲೇ ಇದೆ.ಅಲ್ಲದೆ ಕರ್ನಾಟಕದಲ್ಲಿ(Karnataka) ಬೆಳೆಯುವ ಉತ್ತಮ ಗುಣಮಟ್ಟದ ಅಡಿಕೆಗೆ ಕಲಬೆರಕೆಯ(mixing) ಸಮಸ್ಯೆ ಎದುರಾಗುತ್ತಿದೆ.ಇದನ್ನು ತಡೆಯಲು ದಕ್ಷಿಣ ಕನ್ನಡದ (Dakshina Kannada) ಪುತ್ತೂರು(Puttur) ಭಾಗದಲ್ಲಿ ಹೊಸ ಯೋಜನೆ ರೂಪಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆಯುವ ಅಡಿಕೆಗೆ ಕಲಬೆರಕೆಯ ಮಾಡುವುದನ್ನು ತಡೆಯಲು ವಿಟ್ಲ, ಪುತ್ತೂರು ಹಾಗೂ ಇತರ ಭಾಗದಲ್ಲಿ ಬೆಳೆಯುವ ಉತ್ತಮ ಗುಣಮಟ್ಟದ ಅಡಿಕೆಯನ್ನು ಪುತ್ತೂರು ಮುತ್ತು ಎಂಬ ಹೆಸರಲ್ಲಿ ಬ್ರಾಂಡಿಂಗ್ ಮಾಡಲು ಚಿಂತನೆ ನಡೆಸಲಾಗಿದೆ.

ದಕ್ಷಿಣ ಕನ್ನಡದ ಅಡಿಕೆಗೆ ಉತ್ತರ ಭಾರತದಲ್ಲಿ ಬೇಡಿಕೆ  : ವಿದೇಶ ಹಾಗೂ ದೇಶದ ಇತರ ಭಾಗದಲ್ಲಿ ಬೆಳೆಯುವ ಅಡಿಕೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಂಪ್ ಮಾಡಲಾಗುತ್ತಿದೆ. ಇದರ ಪ್ರಯೋಜನವನ್ನು ಪಡೆದು ಕಳಪೆ ಗುಣಮಟ್ಟದ ಅಡಿಕೆಯನ್ನು ಜಿಲ್ಲೆಯ ಅಡಿಕೆಯಲ್ಲಿ ಕೆಲವರು ಬೆರಕೆ ಮಾಡುತ್ತಿದ್ದಾರೆ. ಉತ್ತರ ಭಾರತದಲ್ಲಿ ಅತೀ ಹೆಚ್ಚು ಬೇಡಿಕೆ ಪಡೆದು ಮಾರುಕಟ್ಟೆಯಲ್ಲಿ ಉತ್ತಮ ಧಾರಣೆ ಕಾಯ್ದುಕೊಂಡಿರುವ ದಕ್ಷಿಣ ಕನ್ನಡದ ಅಡಿಕೆ ಕಳಪೆ ಗುಣಮಟ್ಟದ ಅಡಿಕೆ ಮಿಶ್ರಣದಿಂದ ಗುಣಮಟ್ಟ ಕುಸಿಯುವ ಭೀತಿ ಎದುರಿಸುತ್ತಿದೆ.

ಪುತ್ತೂರು ಮುತ್ತು ಹೆಸರಲ್ಲಿ ಬ್ರಾಂಡ್  : ಹೀಗಾಗಿ ಅಡಿಕೆಯ ಗುಣಮಟ್ಟ ಕಾಯ್ದುಕೊಳ್ಳಲು ರೈತ ಸಂಘಟನೆಗಳ ಒಕ್ಕೂಟ ಮಾಸ್ಟರ್‌ಪ್ಲಾನ್ ಮಾಡಲು ತೀರ್ಮಾನಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆಯನ್ನು ಪುತ್ತೂರು ಮುತ್ತು ಎನ್ನುವ ಹೆಸರಿನಲ್ಲಿ‌ ಬ್ರಾಂಡ್‌ ಮಾಡಲು ಉದ್ದೇಶಿಸಲಾಗಿದೆ.

ಟೀ, ಮಾವಿಗಿದೆ, ಅಡಿಕೆಗೆ ಏಕಿಲ್ಲ? :ಈಗಾಗಲೇ ಈ ವಿಚಾರವನ್ನು ಅಡಿಕೆ ಬೆಳೆಗಾರರ ಹಿತ‌ ಕಾಯುವ ಕ್ಯಾಂಪ್ಕೋ ಗಮನಕ್ಕೆ‌ ಬೆಳೆಗಾರರು ತಂದಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಕ್ಯಾಂಪ್ಕೋ ಜೊತೆಗೆ ಚರ್ಚೆ ನಡೆಸಿ, ಒಂದು ವೇಳೆ ಕ್ಯಾಂಪ್ಕೋ ಈ ವಿಚಾರದಲ್ಲಿ ಅನಾಸಕ್ತಿ ವಹಿಸಿದರೆ ರೈತ ಒಕ್ಕೂಟದಿಂದಲೇ ಬ್ರಾಂಡ್ ಮಾಡಲು ಉದ್ದೇಶಿಸಲಾಗಿದೆ. ಟೀ, ಮಾವು ಹಾಗೂ ಇತರ ಉತ್ಪನ್ನಗಳಿಗಿರುವಂತೆ ಅಡಿಕೆಗೂ ಬ್ರಾಂಡ್ ಮಾಡುವ ಮೂಲಕ ಅಡಿಕೆ ಬೆಳೆಗಾರರ ಹಿತ ಕಾಯುವ ಯೋಜನೆ ಇದೀಗ ಬಲಗೊಳ್ಳುತ್ತಿದೆ ಎನ್ನುತ್ತಾರೆ ರೈತ ಸಂಘ ಸಂಘಟನೆಗಳು ತಿಳಿಸಿವೆ.

– ಅಂತರ್ಜಾಲ ಮಾಹಿತಿ

It has been decided to brand the high quality arecanuts grown in Vitla, Puttur and other parts under the name Puttur Muthu to prevent adulteration of the arecanuts grown in Dakshina Kannada district.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 minute ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

9 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

10 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

10 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

17 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

22 hours ago