ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

July 31, 2026
9:45 AM
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು ರಾತ್ರಿ ತೋಟಗಳಿಗೆ ಕಾವಲು ಕಾಯುವ ಪರಿಸ್ಥಿತಿ ಎದುರಾಗಿದೆ.

ಅಡಿಕೆಗೆ ಉತ್ತಮ ಬೆಲೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸುತ್ತಮುತ್ತ ಅಡಿಕೆ ತೋಟಗಳಲ್ಲಿ ಹೊಂಬಾಳೆ (ಅಡಿಕೆ ಸಿಂಗಾರ) ಕಳ್ಳತನ ಹೆಚ್ಚಾಗಿದೆ. ಇಳುವರಿಗೆ ಸಿದ್ಧವಾಗಿರುವ ಹಿಂಗಾರವನ್ನು ರಾತ್ರಿ ವೇಳೆ ಕಳ್ಳರು ಕತ್ತರಿಸಿ ಕೊಂಡೊಯ್ಯುತ್ತಿರುವುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ರೈತರು ಹಲವು ತಿಂಗಳುಗಳ ಶ್ರಮದಿಂದ ಬೆಳೆದ ಬೆಳೆಯನ್ನು ಕೆಲವೇ ನಿಮಿಷಗಳಲ್ಲಿ ಕಳ್ಳರು ದೋಚಿಕೊಂಡು ಹೋಗುತ್ತಿರುವುದರಿಂದ ಆರ್ಥಿಕ ನಷ್ಟ ಮಾತ್ರವಲ್ಲ, ಮಾನಸಿಕ ಆತಂಕವೂ ಹೆಚ್ಚುತ್ತಿದೆ. ಹಲವು ತೋಟಗಳಲ್ಲಿ ಒಂದೇ ರಾತ್ರಿ ನೂರಾರು ಅಡಿಕೆ ಗೊನೆಗಳು ಕಳ್ಳತನವಾಗಿರುವ ಪ್ರಕರಣಗಳು ವರದಿಯಾಗಿದ್ದು, ರೈತರು ರಾತ್ರಿ ಪಾಳಿಯಲ್ಲಿ ತೋಟಗಳಿಗೆ ಕಾವಲು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಸ್ಥಳೀಯ ರೈತರು ಪೊಲೀಸ್ ಇಲಾಖೆ ರಾತ್ರಿ ಗಸ್ತು ಹೆಚ್ಚಿಸಬೇಕು ಹಾಗೂ ಕಳ್ಳತನದ ಜಾಲವನ್ನು ಪತ್ತೆಹಚ್ಚಲು ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಕಳ್ಳತನದಿಂದ ಉಂಟಾಗುತ್ತಿರುವ ನಷ್ಟವನ್ನು ತಡೆಯಲು ಗ್ರಾಮ ಮಟ್ಟದಲ್ಲಿ ನಿಗಾ ವ್ಯವಸ್ಥೆ ರೂಪಿಸುವ ಅಗತ್ಯವೂ ಎದುರಾಗಿದೆ.

Arecanut bunch thefts have become a serious concern for growers in the Doddaballapur region of Karnataka. Farmers say thieves are targeting mature arecanut bunches ready for harvest, forcing them to guard their plantations at night and demanding stronger police surveillance.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ
ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ
July 31, 2026
7:23 AM
by: ದ ರೂರಲ್ ಮಿರರ್.ಕಾಂ
ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror