ಅಡಿಕೆ ಬೆಳೆಗಾರರ ವಿವಿಧ ಸಮಸ್ಯೆ | ಕ್ಯಾಂಪ್ಕೋದಿಂದ ಮುಖ್ಯಮಂತ್ರಿಗಳಿಗೆ ಮನವಿ

January 18, 2021
8:38 PM

ಮಂಗಳೂರು: ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಕ್ಯಾಂಪ್ಕೊ ನೂತನ ಅಧ್ಯಕ್ಷ  ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಉಡುಪಿಯ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.ಮುಖ್ಯವಾಗಿ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವಾಅಡಿಕೆ ಹಳದಿ ಎಲೆ ರೋಗ, ಅಡಿಕೆ ಮಾರುಕಟ್ಟೆಯನ್ನು ತಲ್ಲಣಗೊಳಿಸುವ ಉದ್ದೇಶದಿಂದ ನಡೆಸುವ ಕಾನೂನುಬಾಹಿರ ಚಟುವಟಿಕೆಗಳು, ಆಮದು ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಕ್ಯಾಂಪ್ಕೋ ಸಂಸ್ಥೆಯ ಪವನ ವಿದ್ಯುತ್ ಉತ್ಪಾದನಾ ಘಟಕದ ವೀಲಿಂಗ್ ಆಂಡ್ ಬ್ಯಾಂಕಿಂಗ್ ವ್ಯವಸ್ಥೆಯ ಮುಂದುವರಿಕೆಯ ಬಗ್ಗೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಹಿರಿಯ ನಿರ್ದೇಶಕ ದಯಾನಂದ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror