ಮಂಗಳೂರು: ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಕ್ಯಾಂಪ್ಕೊ ನೂತನ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಉಡುಪಿಯ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.ಮುಖ್ಯವಾಗಿ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವಾಅಡಿಕೆ ಹಳದಿ ಎಲೆ ರೋಗ, ಅಡಿಕೆ ಮಾರುಕಟ್ಟೆಯನ್ನು ತಲ್ಲಣಗೊಳಿಸುವ ಉದ್ದೇಶದಿಂದ ನಡೆಸುವ ಕಾನೂನುಬಾಹಿರ ಚಟುವಟಿಕೆಗಳು, ಆಮದು ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಇದೇ ವೇಳೆ ಕ್ಯಾಂಪ್ಕೋ ಸಂಸ್ಥೆಯ ಪವನ ವಿದ್ಯುತ್ ಉತ್ಪಾದನಾ ಘಟಕದ ವೀಲಿಂಗ್ ಆಂಡ್ ಬ್ಯಾಂಕಿಂಗ್ ವ್ಯವಸ್ಥೆಯ ಮುಂದುವರಿಕೆಯ ಬಗ್ಗೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೊ ಹಿರಿಯ ನಿರ್ದೇಶಕ ದಯಾನಂದ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…