Advertisement
MIRROR FOCUS

ಶ್ರೀಲಂಕಾ ಅಡಿಕೆ ಆಮದು ಗೊಂದಲ | ಅಡಿಕೆ ಆಮದು ಸಾಧ್ಯವಿಲ್ಲ- ಇದು ಸುಳ್ಳು ಮಾಹಿತಿ | ಅಡಿಕೆ ಬೆಳೆಗಾರರಿಗೆ ಧೈರ್ಯ ತುಂಬಿದ ಕ್ಯಾಂಪ್ಕೋ ಹಾಗೂ ಕೃಷಿ ಸಚಿವೆ | ಅಡಿಕೆ ಧಾರಣೆ 5 ರೂಪಾಯಿ ಏರಿಕೆ ಮಾಡಿದ ಕ್ಯಾಂಪ್ಕೋ |

Share

ಕಳೆದ ಎರಡು ದಿನಗಳಿಂದ ಶ್ರೀಲಂಕಾದಿಂದ 5 ಲಕ್ಷ ಟನ್‌  ಅಡಿಕೆ ಆಮದು ಮಾಡಿಕೊಳ್ಳುವ ಎರಡು ಕಂಪನಿಗಳ ಒಪ್ಪಂದವು ಚರ್ಚೆಯಾಗುತ್ತಿದೆ. ಈ ನಡುವೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು  ಅಡಿಕೆ ಬೆಳೆಗಾರರಿಗೆ ಧೈರ್ಯ ತುಂಬಿದ್ದಾರೆ. ಅಡಿಕೆ ಆಮದು ಆಗುವುದಿಲ್ಲ, ಇದೆಲ್ಲಾ ಸುಳ್ಳು ಸುದ್ದಿಗಳು ಎಂದು ಹೇಳಿದ್ದಾರೆ.

ಬಿಳಿನೆಲೆ ಬಳಿಯ ಸಿಪಿಸಿಆರ್‌ಐ ಕಿದುವಿನಲ್ಲಿ ನಡೆದ ಕೃಷಿಕರ ಸಮಾವೇಶದಲ್ಲಿ ಮಾತನಾಡಿದ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ, ಈ ಬಾರಿ ಅಡಿಕೆ ಆಮದು ಆಗಿದೆ. ಸ್ವಲ್ಪ ಹೆಚ್ಚು ಪ್ರಮಾಣದಲ್ಲಿ ಕಳ್ಳದಾರಿಯ ಮೂಲಕವೇ ಆಗಿದೆ. ಆದರೆ ಕಾನೂನು ಮಾರ್ಗದಲ್ಲಿಯೇ ಅಡಿಕೆ ಆಮದು ಆದರೆ ಜಿಎಸ್ಟಿ ಸಹಿತ ಆಮದಾಗುತ್ತದೆ, ಆಗ ಆಮದು ದರ ನಿಗದಿಯಾದ  351 ದರಕ್ಕಿಂತ ಹೆಚ್ಚಿನ ದರದಲ್ಲಿ ಆಮದಾಗುವ ಕಾರಣದಿಂದ ಇಲ್ಲಿನ ಮಾರುಕಟ್ಟೆ ಮೇಲೆ ಪರಿಣಾಮವಾಗದು. ಜಿಎಸ್ಟಿ ಇಲ್ಲದೆ ನಡೆಯುವ ಅಡಿಕೆ ವ್ಯವಹಾರದಿಂದ ಸಹಕಾರಿ ಸಂಸ್ಥೆಗಳಿಗೆ ಸಂಕಷ್ಟವಾಗುತ್ತದೆ, ಈ ಬಗ್ಗೆ ಪ್ರಧಾನಿಗಳ ಗಮನಕ್ಕೂ ಮಾಹಿತಿಯನ್ನು ಕ್ಯಾಂಪ್ಕೋ ತಲಪಿಸಿದೆಎಂದ ಕಿಶೋರ್‌ ಕುಮಾರ್ ಕೊಡ್ಗಿ,ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಿಕೆ ಆಮದು ಎಂಬ ಸುದ್ದಿಯಾಗಿದೆ. ಇದು ಸ್ವಲ್ಪ ಗೊಂದಲವೂ ಆಗಿದೆ. ಆದರೆ ಇದು ಸುಳ್ಳಾಗಿದೆ. ಈ ಸುದ್ದಿಗಳ ನಡುವೆಯೇ ಕ್ಯಾಂಪ್ಕೋ 5 ರೂಪಾಯಿ ಧಾರಣೆಯನ್ನು ಏರಿಕೆ ಮಾಡಿದೆ. ಆಮದು ಸಂಕಷ್ಟ ಇದ್ದರೆ ಏರಿಕೆ ಹೇಗೆ ಸಾಧ್ಯ ಎನ್ನುವುದು ಪ್ರಶ್ನೆಯಾಗಿದೆ. ಯಾವುದೇ ಕಾರಣಕ್ಕೂ ಬೆಳೆಗಾರರು ಭಯಗೊಳ್ಳಬೇಡಿ ಎಂದರು. ರೈತರಿಗೆ ಗೊಂದಲ ಬೇಡ ಎಂದರು. ಮಾರುಕಟ್ಟೆ ದರ ಹಿತವಾಗಿರುವ ಬೆಳೆಗಾರರ ನೆರವೂ ಅಗತ್ಯವಾಗಿದೆ. ಅಡಿಕೆಯನ್ನು ಒಮ್ಮೆಲೇ ಮಾರುಕಟ್ಟೆಗೆ ಬಿಡಬೇಡಿ, ಅಗತ್ಯಕ್ಕೆ ತಕ್ಕಂತೆ ಮಾತ್ರವೇ ಮಾರಾಟ ಮಾಡುವ ಮೂಲಕ ಅಡಿಕೆ ಮಾರುಕಟ್ಟೆಯನ್ನೂ ಸ್ಥಿರಗೊಳಿಸಲು ಸಾಧ್ಯ ಎಂದರು.ದರದ ಸ್ಥಿರತೆ ವ್ಯತ್ಯಾಸ ಇರುತ್ತದೆ. ಇದು ಮಾರುಕಟ್ಟೆ ಸಹಜ ಪ್ರಕ್ರಿಯೆ.

ಇಂದು  ತಮಿಳುನಾಡು, ಆಂಧ್ರಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಬಯಲು ಸೀಮೆಗೂ ಅಡಿಕೆ ವಿಸ್ತರಣೆಯಾಗಿದೆ. ನೂರಾರು ಅಡಿಕೆ ಕೊಳವೆ ಬಾವಿ ಕೊರೆದು ಅಡಿಕೆ ಬೆಳೆಸಲಾಗುತ್ತದೆ. ಇದು ದುರಂತಕ್ಕೆ ಸಾಕ್ಷಿಯಾಗಿದೆ. ಭತ್ತ, ಕಬ್ಬು ಪ್ರದೇಶದಲ್ಲೂ ಅಡಿಕೆಯಾಗುತ್ತಿದೆ. ಕುಡಿಯಲು ನೀರಿಲ್ಲದೇ ಇರುವ ಜಾಗದಲ್ಲೂ ಟ್ಯಾಂಕರ್‌  ನೀರು ತಂದು ಅಡಿಕೆ ಬೆಳೆಯಲಾಗುತ್ತದೆ. ಅಡಿಕೆ ಬೆಳೆ ಧಾರಣೆ ಕಡಿಮೆಯಾಗುತ್ತದೆ ಎನ್ನುವ ಗೊಂದಲದ ನಡುವೆ ಪರ್ಯಾಯ ಬೆಳೆಯತ್ತಲೂ ಕೃಷಿಕರು ಮನಸ್ಸು ಮಾಡಬೇಕು. ಅಡಿಕೆಯಲ್ಲಿ ಮಿಶ್ರ ಬೆಳೆಯೂ ಅಗತ್ಯ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಎಚ್ಚರಿಸಿದರು.

ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಅಡಿಕೆ ಧಾರಣೆ ಇಳಿಕೆಯಾಗದಂತೆ ಸರ್ಕಾರ ಎಚ್ಚರ ವಹಿಸಿದೆ. ಅಡಿಕೆ ಆಮದು ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಈಗ ಬೇರೆ ದೇಶದಿಂದ ಅಡಿಕೆ ಆಮದಾಗಲು ಸಾಧ್ಯವೇ ಇಲ್ಲ.‌ ಭೂತಾನ್‌ನಿಂದ ಅಡಿಕೆ ಆಮದು ಮಾಡಲು ಅಂದು ಒಪ್ಪಿತ್ತು. ಭೂತಾನ್ ದೇಶ ಸಂಕಷ್ಟದಲ್ಲಿದೆ ಎಂದು ಅಲ್ಲಿನ ಸರ್ಕಾರ ಮನವಿ ಮಾಡಿತ್ತು, ಹೀಗಾಗಿ ಒಂದು ವರ್ಷಕ್ಕೆ ಸೀಮಿತವಾಗಿ ಆಮದಾಗಿತ್ತು. ಈ ದೇಶಕ್ಕೆ ಹೋಲಿಸಿದರೆ ಅತೀ ಕಡಿಮೆ ಹಸಿ ಅಡಿಕೆ  ಆಮದಾಗಿತ್ತು. ಈ ವರ್ಷ ಮತ್ತೆ ಬೇಡಿಕೆ ಇಟ್ಟಾಗ ತಿರಸ್ಕರಿಸಲಾಗಿತ್ತು. ಈಗ ಭೂತಾನ್‌ ಅಡಿಕೆ ಆಮದು ಮಾಡಲಾಗುತ್ತಿಲ್ಲ.  ಶ್ರೀಲಂಕಾದಿಂದ ಕೂಡಾ ಅಡಿಕೆ ಆಮದು ಆಗುವುದು ಇಲ್ಲ. ಈಗ ಈ ಸುದ್ದಿ ಹರಡಿರುವುದು ಯಾವುದೇ ವ್ಯಾಪಾರಿಗಳ ತಂತ್ರವಾಗಿದೆ. ಆಮದು ಸುದ್ದಿ ಹರಡಿಸಿ ಧಾರಣೆ ಕುಸಿತ ಮಾಡಿ ಅಡಿಕೆ ಖರೀದಿ ಮಾಡುವ ತಂತ್ರವಾಗಿದೆ.ಅನಾವಶ್ಯಕವಾದ ಗೊಂದಲ ಉಂಟಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

CAMPCO President Kishore Kumar Kodgi and Union Minister Shobha Karandlaje said that Arecanut cannot be imported, this is all false information.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

3 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

12 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

13 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

17 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

17 hours ago