ಅಡಿಕೆ ಬಳಕೆ ನಿಯಂತ್ರಣಕ್ಕೆ WHO–SEARO ಆನ್‌ಲೈನ್ ವೆಬಿನಾರ್…!

January 19, 2026
6:42 AM

ದಕ್ಷಿಣ–ಪೂರ್ವ ಏಷ್ಯಾ ಪ್ರದೇಶದಲ್ಲಿ ಅಡಿಕೆ (Arecanut) ಬಳಕೆಯಿಂದ ಉಂಟಾಗುವ ಆರೋಗ್ಯ ಸವಾಲುಗಳು ಹಾಗೂ ಅವುಗಳನ್ನು ನಿಯಂತ್ರಿಸುವ ನೀತಿ ಹಾಗೂ ಕ್ರಮಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಚರ್ಚಿಸಲು, ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ ವತಿಯಿಂದ ವಿಶೇಷ ವೆಬಿನಾರ್‌ ಆಯೋಜಿಸಲಾಗಿದೆ.

Advertisement

“Areca Nut Challenge: Turning Policy into Impact in South-East Asia” ಎಂಬ ಶೀರ್ಷಿಕೆಯಡಿ ನಡೆಯುವ ಈ ವೆಬಿನಾರ್‌ 2026ರ ಜನವರಿ 30ರಂದು ಬೆಳಿಗ್ಗೆ 11.00 ರಿಂದ 12.30 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ (WHO-SEARO) ಯ ಆರೋಗ್ಯ ಉತ್ತೇಜನ ಹಾಗೂ ರೋಗ ತಡೆ–ನಿಯಂತ್ರಣ ಇಲಾಖೆ, ಕಿಂಗ್ಸ್‌ ಕಾಲೇಜಿನ ಓರಲ್‌ ಕ್ಯಾನ್ಸರ್‌ ಕುರಿತ WHO ಸಹಯೋಗ ಕೇಂದ್ರ ಹಾಗೂ ಲೇಡಿ ಹಾರ್ಡಿಂಜ್ ಮೆಡಿಕಲ್‌ ಕಾಲೇಜು( Lady Hardinge Medical College)ನ ದಂತ ಶಸ್ತ್ರಚಿಕಿತ್ಸೆ ಮತ್ತು OPMD ಹಬ್‌ ಸಹಯೋಗದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವೆಬಿನಾರ್‌ನ ಉದ್ದೇಶಗಳು : ಅಡಿಕೆ ಬಳಕೆಯಿಂದ ಉಂಟಾಗುವ ಆರೋಗ್ಯ ಮೇಲೆ ಉಂಟಾಗುವ ಪರಿಣಾಮ ಕಡಿಮೆ ಮಾಡಲು ಜಾರಿಯಲ್ಲಿರುವ ನೀತಿ ಹಾಗೂ ಕಾರ್ಯಕ್ರಮಗಳ ಅನುಭವ ಹಂಚಿಕೆ ಹಾಗೂ ರಾಷ್ಟ್ರೀಯ ಓರಲ್‌ ಹೆಲ್ತ್‌ ಕಾರ್ಯಕ್ರಮಗಳಲ್ಲಿ ಅಡಿಕೆ ಬಳಕೆ ತಡೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.  ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಓರಲ್‌ ಹೆಲ್ತ್‌ ಕಾರ್ಯಕ್ರಮ ನಿರ್ವಾಹಕರು, NCD ಹಾಗೂ ಕ್ಯಾನ್ಸರ್‌ ನಿಯಂತ್ರಣ ಕಾರ್ಯಕ್ರಮಗಳ ತಂಡಗಳು ,ವೃತ್ತಿಪರ ಸಂಸ್ಥೆಗಳು, ಎನ್‌ಜಿಒಗಳು ಮತ್ತು ಆಸಕ್ತ ಆರೋಗ್ಯ ವೃತ್ತಿಪರರು ಭಾಗವಹಿಸುತ್ತಾರೆ.

ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ (WHO-SEARO), ಈ ಪ್ರದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಭಾರತ ಸೇರಿದಂತೆ 11 ರಾಷ್ಟ್ರಗಳನ್ನು ಒಳಗೊಂಡ ಈ ಪ್ರಾದೇಶಿಕ ಕಚೇರಿ, ರೋಗ ನಿಯಂತ್ರಣ, ಆರೋಗ್ಯ ಜಾಗೃತಿ, ತುರ್ತು ಆರೋಗ್ಯ ಪ್ರತಿಕ್ರಿಯೆ ಹಾಗೂ ಆರೋಗ್ಯ ನೀತಿ ಮಾರ್ಗದರ್ಶನದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಈ ಪ್ರಾದೇಶಿಕ ವ್ಯಾಪ್ತಿಯಲ್ಲಿ ಭಾರತ, ನೇಪಾಳ, ಬಾಂಗ್ಲಾದೇಶ, ಭೂತಾನ್, ಶ್ರೀಲಂಕಾ, ಮ್ಯಾನ್ಮಾರ್, ಥೈಲ್ಯಾಂಡ್, ಇಂಡೋನೇಷಿಯಾ, ಮಾಲ್ದೀವ್ಸ್, ಟಿಮೋರ್-ಲೆಸ್ಟೆ ಮತ್ತು ಉತ್ತರ ಕೊರಿಯಾ ಸೇರಿವೆ. ತಾಯಿ-ಮಗು ಆರೋಗ್ಯ, ಲಸಿಕೆ ಕಾರ್ಯಕ್ರಮ, ಅಸಾಂಕ್ರಾಮಿಕ ಮತ್ತು ಸಾಂಕ್ರಾಮಿಕ ರೋಗ ನಿಯಂತ್ರಣ, ಹವಾಮಾನ ಬದಲಾವಣೆ–ಆರೋಗ್ಯ ಸಂಬಂಧಿತ ಸವಾಲುಗಳು WHO-SEARO ಕಾರ್ಯಚಟುವಟಿಕೆಗಳ ಪ್ರಮುಖ ಕೇಂದ್ರೀಯ ವಿಷಯಗಳಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ
ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ
February 20, 2026
7:13 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror