Advertisement
MIRROR FOCUS

ಅಡಿಕೆ ಬಳಕೆ ನಿಯಂತ್ರಣಕ್ಕೆ WHO–SEARO ಆನ್‌ಲೈನ್ ವೆಬಿನಾರ್…!

Share

ದಕ್ಷಿಣ–ಪೂರ್ವ ಏಷ್ಯಾ ಪ್ರದೇಶದಲ್ಲಿ ಅಡಿಕೆ (Arecanut) ಬಳಕೆಯಿಂದ ಉಂಟಾಗುವ ಆರೋಗ್ಯ ಸವಾಲುಗಳು ಹಾಗೂ ಅವುಗಳನ್ನು ನಿಯಂತ್ರಿಸುವ ನೀತಿ ಹಾಗೂ ಕ್ರಮಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಚರ್ಚಿಸಲು, ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ ವತಿಯಿಂದ ವಿಶೇಷ ವೆಬಿನಾರ್‌ ಆಯೋಜಿಸಲಾಗಿದೆ.

“Areca Nut Challenge: Turning Policy into Impact in South-East Asia” ಎಂಬ ಶೀರ್ಷಿಕೆಯಡಿ ನಡೆಯುವ ಈ ವೆಬಿನಾರ್‌ 2026ರ ಜನವರಿ 30ರಂದು ಬೆಳಿಗ್ಗೆ 11.00 ರಿಂದ 12.30 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ (WHO-SEARO) ಯ ಆರೋಗ್ಯ ಉತ್ತೇಜನ ಹಾಗೂ ರೋಗ ತಡೆ–ನಿಯಂತ್ರಣ ಇಲಾಖೆ, ಕಿಂಗ್ಸ್‌ ಕಾಲೇಜಿನ ಓರಲ್‌ ಕ್ಯಾನ್ಸರ್‌ ಕುರಿತ WHO ಸಹಯೋಗ ಕೇಂದ್ರ ಹಾಗೂ ಲೇಡಿ ಹಾರ್ಡಿಂಜ್ ಮೆಡಿಕಲ್‌ ಕಾಲೇಜು( Lady Hardinge Medical College)ನ ದಂತ ಶಸ್ತ್ರಚಿಕಿತ್ಸೆ ಮತ್ತು OPMD ಹಬ್‌ ಸಹಯೋಗದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವೆಬಿನಾರ್‌ನ ಉದ್ದೇಶಗಳು : ಅಡಿಕೆ ಬಳಕೆಯಿಂದ ಉಂಟಾಗುವ ಆರೋಗ್ಯ ಮೇಲೆ ಉಂಟಾಗುವ ಪರಿಣಾಮ ಕಡಿಮೆ ಮಾಡಲು ಜಾರಿಯಲ್ಲಿರುವ ನೀತಿ ಹಾಗೂ ಕಾರ್ಯಕ್ರಮಗಳ ಅನುಭವ ಹಂಚಿಕೆ ಹಾಗೂ ರಾಷ್ಟ್ರೀಯ ಓರಲ್‌ ಹೆಲ್ತ್‌ ಕಾರ್ಯಕ್ರಮಗಳಲ್ಲಿ ಅಡಿಕೆ ಬಳಕೆ ತಡೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.  ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಓರಲ್‌ ಹೆಲ್ತ್‌ ಕಾರ್ಯಕ್ರಮ ನಿರ್ವಾಹಕರು, NCD ಹಾಗೂ ಕ್ಯಾನ್ಸರ್‌ ನಿಯಂತ್ರಣ ಕಾರ್ಯಕ್ರಮಗಳ ತಂಡಗಳು ,ವೃತ್ತಿಪರ ಸಂಸ್ಥೆಗಳು, ಎನ್‌ಜಿಒಗಳು ಮತ್ತು ಆಸಕ್ತ ಆರೋಗ್ಯ ವೃತ್ತಿಪರರು ಭಾಗವಹಿಸುತ್ತಾರೆ.

ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ–ಪೂರ್ವ ಏಷ್ಯಾ ಪ್ರಾದೇಶಿಕ ಕಚೇರಿ (WHO-SEARO), ಈ ಪ್ರದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಭಾರತ ಸೇರಿದಂತೆ 11 ರಾಷ್ಟ್ರಗಳನ್ನು ಒಳಗೊಂಡ ಈ ಪ್ರಾದೇಶಿಕ ಕಚೇರಿ, ರೋಗ ನಿಯಂತ್ರಣ, ಆರೋಗ್ಯ ಜಾಗೃತಿ, ತುರ್ತು ಆರೋಗ್ಯ ಪ್ರತಿಕ್ರಿಯೆ ಹಾಗೂ ಆರೋಗ್ಯ ನೀತಿ ಮಾರ್ಗದರ್ಶನದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ.

ಈ ಪ್ರಾದೇಶಿಕ ವ್ಯಾಪ್ತಿಯಲ್ಲಿ ಭಾರತ, ನೇಪಾಳ, ಬಾಂಗ್ಲಾದೇಶ, ಭೂತಾನ್, ಶ್ರೀಲಂಕಾ, ಮ್ಯಾನ್ಮಾರ್, ಥೈಲ್ಯಾಂಡ್, ಇಂಡೋನೇಷಿಯಾ, ಮಾಲ್ದೀವ್ಸ್, ಟಿಮೋರ್-ಲೆಸ್ಟೆ ಮತ್ತು ಉತ್ತರ ಕೊರಿಯಾ ಸೇರಿವೆ. ತಾಯಿ-ಮಗು ಆರೋಗ್ಯ, ಲಸಿಕೆ ಕಾರ್ಯಕ್ರಮ, ಅಸಾಂಕ್ರಾಮಿಕ ಮತ್ತು ಸಾಂಕ್ರಾಮಿಕ ರೋಗ ನಿಯಂತ್ರಣ, ಹವಾಮಾನ ಬದಲಾವಣೆ–ಆರೋಗ್ಯ ಸಂಬಂಧಿತ ಸವಾಲುಗಳು WHO-SEARO ಕಾರ್ಯಚಟುವಟಿಕೆಗಳ ಪ್ರಮುಖ ಕೇಂದ್ರೀಯ ವಿಷಯಗಳಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

5 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

12 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

23 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago