MIRROR FOCUS

#Arecanut | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬಣ್ಣದ ಸೀರೆ | ಕಿನ್ನಿಗೋಳಿಯಲ್ಲಿ ಬಿಡುಗಡೆಗೊಂಡ ನೈಸರ್ಗಿಕ ಬಣ್ಣದ ಸೀರೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಚೊಗರಿನ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರು ಮಾಡಿದ ಸೀರೆಯ ಕಿನ್ನಿಗೋಳಿಯಲ್ಲಿ ಬಿಡುಗಡೆಗೊಂಡಿತು. ತಾಳಿಪಾಡಿ ನೇಕಾರರ ಸೊಸೈಟಿಯಲ್ಲಿ ಅಡಿಕೆಯ ಚೊಗರು ಮತ್ತು ಇತರ ನೈಸರ್ಗಿಕ ಬಣ್ಣಗಳಿಂದ  ಜಿಐ ಟ್ಯಾಗ್‌  ಹೊಂದಿರುವ ಉಡುಪಿ ಸೀರೆಯು ಬಿಡುಗಡೆಯಾಯಿತು.

Advertisement
ನೈಸರ್ಗಿಕ ಬಣ್ಣದ ನೂಲು

ಕಿನ್ನಿಗೋಳಿಯ ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಕದಿಕೆ ಟ್ರಸ್ಟ್ ಮಾರ್ಗದರ್ಶನದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಅಡಿಕೆ ಚೊಗರು ಇತರ ನೈಸರ್ಗಿಕ ಬಣ್ಣಗಳಿಂದ ತಯಾರಾದ ಉಡುಪಿ ಸೀರೆ ಬಿಡುಗಡೆ ನಡೆಯಿತು.

ನೈಸರ್ಗಿಕ ಬಣ್ಣದ ಉಡುಪಿ ಸೀರೆ ಬಿಡುಗಡೆ

ಕಾರ್ಯಕ್ರಮದಲ್ಲಿ ಮಾತನಾಡಿದ ಅಡಿಕೆ ಪತ್ರಿಕೆ ಕಾರ್ಯನಿರ್ವಾಹಕ ಸಂಪಾದಕ ಶ್ರೀಪಡ್ರೆ ಮಾತನಾಡಿ, ಅಡಿಕೆಯ ಬಣ್ಣ ಹಾಗೂ ನೈಸರ್ಗಿಕ ಬಣ್ಣದಿಂದ ತಯಾರು ಮಾಡಿದ ಬಟ್ಟೆಗಳ ಅನಿವಾರ್ಯತೆ ಬಗ್ಗೆ ಮಾತನಾಡಿದರು. ಜಪಾನ್‌ನ ರಾಜಮನೆತನಗಳು 1,200 ವರ್ಷಗಳ ಹಿಂದೆ ಅಡಿಕೆ ಬಣ್ಣವನ್ನು ಬಳಸುತ್ತಿದ್ದರು. ಅಂದರೆ ಅಂದು ಅಡಿಕೆಯ ಬಣ್ಣ ಪ್ರತಿಷ್ಟೆಯ ಪ್ರತೀಕವಾಗಿತ್ತು. ಜಪಾನಿನ ರಾಜಮನೆತನದವರು ಇಂಡೋನೇಷ್ಯಾದಿಂದ ಅಡಿಕೆಯನ್ನು ಆಮದು ಮಾಡಿಕೊಳ್ಳುತ್ತಿದ್ದರು  ಶ್ರೀ ಪಡ್ರೆ ಹೇಳಿದರು. ಇಂದು ರಾಸಾಯನಿಕ ರಹಿತವಾದ ಬಣ್ಣಗಳ ಅನಿವಾರ್ಯತೆ ಇದೆ. ರಾಸಾಯನಿಕ ಬಣ್ಣಗಳ ಕಾರಣದಿಂದ ಮಾಲಿನ್ಯಗಳು ಹೆಚ್ಚಾಗುತ್ತಿವೆ, ಈ ಕಾರಣದಿಂದ ನೈಸರ್ಗಿಕ ಬಣ್ಣಗಳ ಬಳಕೆ ಅಗತ್ಯವಿದೆ ಎಂದರು.

ಅಡಿಕೆ ಪತ್ರಿಕೆ ಸಂಪಾದಕ ಶ್ರೀ ಪಡ್ರೆ ಮಾತನಾಡಿದರು

ಕದಿಕೆ ಟ್ರಸ್ಟ್‌ನ ಅಧ್ಯಕ್ಷೆ ಮಮತಾ ರೈ ಮಾತನಾಡಿ, ನೈಸರ್ಗಿಕ ಬಣ್ಣಗಳಿಂದ ಕೂಡಿದ ಸೀರೆಗಳು ಪರಿಸರ ಸ್ನೇಹಿಯಾಗಿದ್ದು, ನೇಕಾರರಿಕೆ ಹಾಗೂ ನೇಕಾರರಿಗೂ ಗೌರವ ಸಿಗುವ ಕೆಲಸ ಆಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಸೆಲ್ಕೊ ಇಂಡಿಯಾದ ಡಿಜಿಎಂ ಗುರುಪ್ರಕಾಶ್ ಶೆಟ್ಟಿ ,ಶಿರ್ವಾದ ಇಕೋ ಗ್ರೋಫಾರ್ಮ್‌ನ ಎಂ ಆರ್‌ ಪೈ, ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ ಉಪಸ್ಥಿತರಿದ್ದರು. ಕದಿಕೆ ಟ್ರಸ್ಟ್‌ ನ ಬಿ ಸಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಬಣ್ಣ ಹಾಗೂ ನೈಸರ್ಗಿಕ ಬಣ್ಣದ ಮೂಲವಸ್ತುಗಳು

2018 ರಲ್ಲಿ ಉಡುಪಿ ಸೀರೆ ಚರಿತ್ರೆಯಲ್ಲೇ ಮೊದಲ ಬಾರಿ ಸಹಜ ಬಣ್ಣದ ಸೀರೆಗಳನ್ನು ತಾಳಿಪಾಡಿ ಸಂಘದಲ್ಲಿ ಚರಕ ಸಂಸ್ಥೆಯ ನೆರವಿನೊಂದಿಗೆ ಕದಿಕೆ ಟ್ರಸ್ಟ್ ಸಹಯೋಗದಲ್ಲಿ ತಯಾರಿಸಲಾಗಿತ್ತು. ಈಗ ಸೆಲ್ಕೋ ಇಂಡಿಯಾ ಗ್ರಾಂಟ್ ನಿಂದ ದೊರಕಿದ ಸಹಜ ಬಣ್ಣ ತಯಾರಿಯ ಉಪಕರಣಗಳಿಂದ , ಮಾಮಿ ಸ್ಕೂಲ್ ಹೌಸ್ ಆಫ್ ನ್ಯಾಚುರಲ್ ಡಯಿಂಗ್ ಕೆನಡಾ ಇವರು ಕದಿಕೆ ಟ್ರಸ್ಟ್ ಅಧ್ಯಕ್ಷೆ ಮಮತಾ ರೈ ಗೆ ಕೊಡಮಾಡಿದ ಆನ್ಲೈನ್ ಸ್ಕಾಲರ್ಸ್ ಶಿಪ್ ಮಾರ್ಗದರ್ಶನದಲ್ಲಿ ಸಹಜ ಬಣ್ಣ ಸೀರೆಗಳನ್ನು ತಾಳಿಪಾಡಿ ಸಂಘದ ಬಣ್ಣಗಾರರು ಮತ್ತು ನೇಕಾರರು ತಯಾರಿಸಿದ್ದಾರೆ.

ಅಡಿಕೆ ಚೊಗರು , ಮಂಜಿಷ್ಟ , ನೀಲಿ, ಗೊಂಡೇಹೂ , ದಾಳಿಂಬೆ ಸಿಪ್ಪೆ, ಕಾಡು ಬಾದಾಮಿ ಇತ್ಯಾದಿ ಸಸ್ಯ ಮೂಲ ಬಣ್ಣಗಳನ್ನು ಇದಕ್ಕೆ ಬಳಸಲಾಗಿದೆ. ಸಹಜ ಬಣ್ಣದ ಸೀರೆಗಳು ಪರಿಸರ ಸ್ನೇಹಿಯಾಗಿವೆ. ಉತ್ತಮ ಬೇಡಿಕೆ ಇದೆ. ನೇಕಾರರು ಮತ್ತು ಬಣ್ಣ ಮಾಡುವರಿಗೆ ಹೆಚ್ಚುವರಿ ವೇತನ ದೊರೆಯುತ್ತದೆ. ತಯಾರಿಸುವವರು ಮತ್ತು ತೊಡುವವರ ಆರೋಗ್ಯಕ್ಕೂ ಒಳ್ಳೆಯದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

10 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

11 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

20 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

20 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

23 hours ago