ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?

March 16, 2024
11:20 AM
ಅಡಿಕೆ, ರಬ್ಬರ್‌, ಕೊಕೊ , ಕಾಳುಮೆಣಸು ಬಗ್ಗೆ ಈಗ ಕೃಷಿಕರಲ್ಲಿ ಚರ್ಚೆ ನಡೆಯುತ್ತಿದೆ. ಕೃಷಿಕ ಕೆ ಸಿ ಹರೀಶ್‌ ಪೆರಾಜೆ ಅವರು ಪೇಸ್‌ಬುಕ್ ಮೂಲಕ ವ್ಯಕ್ತಪಡಿಸಿದ ಅಭಿಪ್ರಾಯ ಇಲ್ಿದೆ...

ರಬ್ಬರ್(rubber),  ಕೊಕ್ಕೋ(cocoa) ಇವರುಗಳ ಮಧ್ಯೆ ಜಂಭದಲ್ಲಿ ಚರ್ಚೆ ನಡೆಯುತ್ತಿದೆ. ಏಕೆಂದರೆ ಹಳ್ಳಿ(village), ಪಟ್ಟಣಗಳ(city) ಮಾರುಕಟ್ಟೆಯಲ್ಲಿ(market) ಈಗ ಇವರದ್ದೇ ದರ್ಬಾರ್. ಕೊಕ್ಕೋ ರಬ್ಬರ್ ನ್ನು ಅಪಹಾಸ್ಯ ಮಾಡುತಿತ್ತು ಹೀಗೆ, ನಾನು ನಿನ್ನ ಬೆಲೆಯಲ್ಲಿ(price hike) ಹಿಂದಿಕ್ಕದೆ ‘ನಾ ನಿನ್ನ ಬೆನ್ನಟ್ಟದೆ ಬಿಡಲಾರೆ’ ಎಂದಿತ್ತು, ಕೊಕ್ಕೋದ ಮಾತು ಕೇಳಿ ರೋಸಿ ಹೋದ ರಬ್ಬರ್ ಎಂದಿತ್ತು ಹೀಗೆ, ‘ನೀ ನನ್ನ ಅಟ್ಟಿಸಿಕೊಂಡು ಬಂದರೂ ನೀ ನನ್ನ ಗೆಲ್ಲಲಾರೆ ‘ಎಂದಿತ್ತು.ಈಗ ಕೊಕ್ಕೋ ಬೆಲೆ 160, ರಬ್ಬರ್ ಬೆಲೆ 175, ಕಾಳುಮೆಣಸು 500, ಅಡಿಕೆ 350…!

ಇವರುಗಳ ಒಣ ಜಂಬ ಕೇಳಿಸಿಕೊಂಡ ಕರಿಮೆಣಸು(pepper) ಮತ್ತು ಅಡಿಕೆ(arecanut) ಇವರುಗಳ ಗತ್ತು ಅಹಂಕಾರವನ್ನು ಸಾಕಷ್ಟು ಬಾರಿ ಅನುಭವಿಸಿದವರು ಒಬ್ಬರೊಂದಿಗೆ ಒಬ್ಬರು ಪರಸ್ಪರ ಹೀಗೆ ಮಾತನಾಡಿಕೊಳ್ಳುತ್ತಿದ್ದರು. ಅವರುಗಳ ಈಗಿನ ಗತ್ತು ದೌಲತ್ತು ನೋಡು ಎಂದು ಕರಿಮೆಣಸು ಅಡಿಕೆಯಲ್ಲಿ ಹೇಳಿತ್ತು ಹೀಗೆ ಬೆಲೆ ಸ್ಪರ್ಧೆಯಲ್ಲಿ ನಾನು 800 ಮೈಲ್ ಓಡಿದವನು ನಾನು, ಈಗ ನೋಡು ನನಗೆ 500 ಮೈಲ್ ಓಡಲು ಸಹ ಬಿಡುವುದಿಲ್ಲ ಈಗಿನ ಬೆಲೆ ಇಲಾಖೆ ಎಂದು ದುಃಖದಿಂದ ತನ್ನ ಅಳಲು ತೋಡಿಕೊಂಡಿತ್ತು.

Advertisement

ಕರಿಮೆಣಸಿನ ಮಾತು ಆಲಿಸಿದ ಅಡಕೆ ಅಯ್ಯೋ ನನ್ನ ಪರಿಸ್ಥಿತಿ ಕೇಳು. ನಾನು ನಿನ್ನಷ್ಟು ಎತ್ತರಕ್ಕೆ ಏರದಿದ್ದರೂ 550 ರಷ್ಟು ಮೈಲ್ ಓಡಿದ್ದೇನೆ. ಒಂದೆರಡು ವರ್ಷ ಭಾರತ, ವಿದೇಶದಲ್ಲಿ ನನ್ನದೇ ಹವಾ, ಈಗ ನೋಡು ಇಲ್ಲಿನ ಕ್ರೀಡಾ ಇಲಾಖೆ ಗಟ್ಟಿ ಮುಟ್ಟಾಗಿದ್ದ ನನ್ನನ್ನು ದೂರ ತಳ್ಳಿ ವಿದೇಶದಿಂದ ಎರವಲು ತಂದು ನನ್ನನ್ನು ಮೂಲೆಗೆ ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೂ ನನ್ನ ಪ್ರತಿಭೆಗೆ ಕುಂದು ಬಂದಿಲ್ಲ. ಒಂದಲ್ಲ ಒಂದು ದಿನ ಈಗಿನ 350,430 ಮೈಲ್ ದಾಟಿ 500 ರ ಗಡಿ ತಲುಪುವ ವಿಶ್ವಾಸ ಇಟ್ಟು ಕೊಂಡಿರುವೆ.

Advertisement

ಕೊನೆಗೆ ಅಡಿಕೆ ಕರಿಮೆಣಸು ಇಬ್ಬರು ಒಂದು ಅಂದಾಜುಗೆ ಬಂದವರು ನೋಡುವ, ಕೊಕ್ಕೋ, ರಬ್ಬರ್ ಇವರ ದರ್ಬಾರ್ ಎಲ್ಲಿತನಕ ತಲುಪುತ್ತದೆ ಎಂದು ಕಾದು ನೋಡುವ. ನಾವಿಬ್ಬರು ಅವರ ಇಬ್ಬರ ಓಟದ ಬಗ್ಗೆ ನಂಜಿ ಕಕ್ಕುವುದು ಬೇಡ. ನಮ್ಮನ್ನು ಮೀರಿ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಓಡಿದರೂ ಹೊಟ್ಟೆಕಿಚ್ಚು ಪಡುವುದು ಬೇಡವೆಂದು ಪರಸ್ಪರ ಕೈ ಕುಲುಕಿ ಅಲ್ಲಿಂದ ತೆರಳಿದರು.

ಈ ನಾಲ್ಕು ಜನರ ಮಾತನ್ನು ಕೇಳಿಸಿಕೊಂಡ ಗೇರು ಬೀಜ ನಾಳೆ ನಾನು ನಿಮ್ಮ ಮುಂದೆ ಕಾಣಿಸಿಕೊಳ್ಳುವೆ ಎಂದು ಮರೆಯಲ್ಲಿ ಇತ್ತು. ನಾಳೆ ನೋಡುವ ಇವನ ವಿಚಾರ.ನಾಳೆ ನಮ್ಮ ಗುಡ್ಡೆಯಲ್ಲಿ ಕೆಂಪು, ಹಳದಿ ಲೈಟ್ ರೀತಿ ಕಾಣುವ ಇವನನ್ನು ಭೇಟಿ ಮಾಡುವ ಆಲೋಚನೆಯಲ್ಲಿ ಇದ್ದೇನೆ. ಇಂದು ಆ ಕಡೆ ಒಮ್ಮೆ ದೂರದಿಂದ ನೋಡಿದೆ ನಮ್ಮ ಪೂರ್ವಜರಾದ ಕೋತಿಗಳು ಮರವನ್ನು ಸುತ್ತುವರಿದು ಅಲುಗಾಡಿಸುತ್ತಿದ್ದರು.

Advertisement
ಬರಹ :
ಹರೀಶ್ ಪೆರಾಜೆ ಕೆ ಸಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror