Opinion

ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಬ್ಬರ್(rubber),  ಕೊಕ್ಕೋ(cocoa) ಇವರುಗಳ ಮಧ್ಯೆ ಜಂಭದಲ್ಲಿ ಚರ್ಚೆ ನಡೆಯುತ್ತಿದೆ. ಏಕೆಂದರೆ ಹಳ್ಳಿ(village), ಪಟ್ಟಣಗಳ(city) ಮಾರುಕಟ್ಟೆಯಲ್ಲಿ(market) ಈಗ ಇವರದ್ದೇ ದರ್ಬಾರ್. ಕೊಕ್ಕೋ ರಬ್ಬರ್ ನ್ನು ಅಪಹಾಸ್ಯ ಮಾಡುತಿತ್ತು ಹೀಗೆ, ನಾನು ನಿನ್ನ ಬೆಲೆಯಲ್ಲಿ(price hike) ಹಿಂದಿಕ್ಕದೆ ‘ನಾ ನಿನ್ನ ಬೆನ್ನಟ್ಟದೆ ಬಿಡಲಾರೆ’ ಎಂದಿತ್ತು, ಕೊಕ್ಕೋದ ಮಾತು ಕೇಳಿ ರೋಸಿ ಹೋದ ರಬ್ಬರ್ ಎಂದಿತ್ತು ಹೀಗೆ, ‘ನೀ ನನ್ನ ಅಟ್ಟಿಸಿಕೊಂಡು ಬಂದರೂ ನೀ ನನ್ನ ಗೆಲ್ಲಲಾರೆ ‘ಎಂದಿತ್ತು.ಈಗ ಕೊಕ್ಕೋ ಬೆಲೆ 160, ರಬ್ಬರ್ ಬೆಲೆ 175, ಕಾಳುಮೆಣಸು 500, ಅಡಿಕೆ 350…!

Advertisement
Advertisement

ಇವರುಗಳ ಒಣ ಜಂಬ ಕೇಳಿಸಿಕೊಂಡ ಕರಿಮೆಣಸು(pepper) ಮತ್ತು ಅಡಿಕೆ(arecanut) ಇವರುಗಳ ಗತ್ತು ಅಹಂಕಾರವನ್ನು ಸಾಕಷ್ಟು ಬಾರಿ ಅನುಭವಿಸಿದವರು ಒಬ್ಬರೊಂದಿಗೆ ಒಬ್ಬರು ಪರಸ್ಪರ ಹೀಗೆ ಮಾತನಾಡಿಕೊಳ್ಳುತ್ತಿದ್ದರು. ಅವರುಗಳ ಈಗಿನ ಗತ್ತು ದೌಲತ್ತು ನೋಡು ಎಂದು ಕರಿಮೆಣಸು ಅಡಿಕೆಯಲ್ಲಿ ಹೇಳಿತ್ತು ಹೀಗೆ ಬೆಲೆ ಸ್ಪರ್ಧೆಯಲ್ಲಿ ನಾನು 800 ಮೈಲ್ ಓಡಿದವನು ನಾನು, ಈಗ ನೋಡು ನನಗೆ 500 ಮೈಲ್ ಓಡಲು ಸಹ ಬಿಡುವುದಿಲ್ಲ ಈಗಿನ ಬೆಲೆ ಇಲಾಖೆ ಎಂದು ದುಃಖದಿಂದ ತನ್ನ ಅಳಲು ತೋಡಿಕೊಂಡಿತ್ತು.

ಕರಿಮೆಣಸಿನ ಮಾತು ಆಲಿಸಿದ ಅಡಕೆ ಅಯ್ಯೋ ನನ್ನ ಪರಿಸ್ಥಿತಿ ಕೇಳು. ನಾನು ನಿನ್ನಷ್ಟು ಎತ್ತರಕ್ಕೆ ಏರದಿದ್ದರೂ 550 ರಷ್ಟು ಮೈಲ್ ಓಡಿದ್ದೇನೆ. ಒಂದೆರಡು ವರ್ಷ ಭಾರತ, ವಿದೇಶದಲ್ಲಿ ನನ್ನದೇ ಹವಾ, ಈಗ ನೋಡು ಇಲ್ಲಿನ ಕ್ರೀಡಾ ಇಲಾಖೆ ಗಟ್ಟಿ ಮುಟ್ಟಾಗಿದ್ದ ನನ್ನನ್ನು ದೂರ ತಳ್ಳಿ ವಿದೇಶದಿಂದ ಎರವಲು ತಂದು ನನ್ನನ್ನು ಮೂಲೆಗೆ ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೂ ನನ್ನ ಪ್ರತಿಭೆಗೆ ಕುಂದು ಬಂದಿಲ್ಲ. ಒಂದಲ್ಲ ಒಂದು ದಿನ ಈಗಿನ 350,430 ಮೈಲ್ ದಾಟಿ 500 ರ ಗಡಿ ತಲುಪುವ ವಿಶ್ವಾಸ ಇಟ್ಟು ಕೊಂಡಿರುವೆ.

ಕೊನೆಗೆ ಅಡಿಕೆ ಕರಿಮೆಣಸು ಇಬ್ಬರು ಒಂದು ಅಂದಾಜುಗೆ ಬಂದವರು ನೋಡುವ, ಕೊಕ್ಕೋ, ರಬ್ಬರ್ ಇವರ ದರ್ಬಾರ್ ಎಲ್ಲಿತನಕ ತಲುಪುತ್ತದೆ ಎಂದು ಕಾದು ನೋಡುವ. ನಾವಿಬ್ಬರು ಅವರ ಇಬ್ಬರ ಓಟದ ಬಗ್ಗೆ ನಂಜಿ ಕಕ್ಕುವುದು ಬೇಡ. ನಮ್ಮನ್ನು ಮೀರಿ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಓಡಿದರೂ ಹೊಟ್ಟೆಕಿಚ್ಚು ಪಡುವುದು ಬೇಡವೆಂದು ಪರಸ್ಪರ ಕೈ ಕುಲುಕಿ ಅಲ್ಲಿಂದ ತೆರಳಿದರು.

Advertisement

ಈ ನಾಲ್ಕು ಜನರ ಮಾತನ್ನು ಕೇಳಿಸಿಕೊಂಡ ಗೇರು ಬೀಜ ನಾಳೆ ನಾನು ನಿಮ್ಮ ಮುಂದೆ ಕಾಣಿಸಿಕೊಳ್ಳುವೆ ಎಂದು ಮರೆಯಲ್ಲಿ ಇತ್ತು. ನಾಳೆ ನೋಡುವ ಇವನ ವಿಚಾರ.ನಾಳೆ ನಮ್ಮ ಗುಡ್ಡೆಯಲ್ಲಿ ಕೆಂಪು, ಹಳದಿ ಲೈಟ್ ರೀತಿ ಕಾಣುವ ಇವನನ್ನು ಭೇಟಿ ಮಾಡುವ ಆಲೋಚನೆಯಲ್ಲಿ ಇದ್ದೇನೆ. ಇಂದು ಆ ಕಡೆ ಒಮ್ಮೆ ದೂರದಿಂದ ನೋಡಿದೆ ನಮ್ಮ ಪೂರ್ವಜರಾದ ಕೋತಿಗಳು ಮರವನ್ನು ಸುತ್ತುವರಿದು ಅಲುಗಾಡಿಸುತ್ತಿದ್ದರು.

ಬರಹ :
ಹರೀಶ್ ಪೆರಾಜೆ ಕೆ ಸಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

14 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

14 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

14 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

15 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

15 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

15 hours ago