Advertisement
Opinion

ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?

Share

ರಬ್ಬರ್(rubber),  ಕೊಕ್ಕೋ(cocoa) ಇವರುಗಳ ಮಧ್ಯೆ ಜಂಭದಲ್ಲಿ ಚರ್ಚೆ ನಡೆಯುತ್ತಿದೆ. ಏಕೆಂದರೆ ಹಳ್ಳಿ(village), ಪಟ್ಟಣಗಳ(city) ಮಾರುಕಟ್ಟೆಯಲ್ಲಿ(market) ಈಗ ಇವರದ್ದೇ ದರ್ಬಾರ್. ಕೊಕ್ಕೋ ರಬ್ಬರ್ ನ್ನು ಅಪಹಾಸ್ಯ ಮಾಡುತಿತ್ತು ಹೀಗೆ, ನಾನು ನಿನ್ನ ಬೆಲೆಯಲ್ಲಿ(price hike) ಹಿಂದಿಕ್ಕದೆ ‘ನಾ ನಿನ್ನ ಬೆನ್ನಟ್ಟದೆ ಬಿಡಲಾರೆ’ ಎಂದಿತ್ತು, ಕೊಕ್ಕೋದ ಮಾತು ಕೇಳಿ ರೋಸಿ ಹೋದ ರಬ್ಬರ್ ಎಂದಿತ್ತು ಹೀಗೆ, ‘ನೀ ನನ್ನ ಅಟ್ಟಿಸಿಕೊಂಡು ಬಂದರೂ ನೀ ನನ್ನ ಗೆಲ್ಲಲಾರೆ ‘ಎಂದಿತ್ತು.ಈಗ ಕೊಕ್ಕೋ ಬೆಲೆ 160, ರಬ್ಬರ್ ಬೆಲೆ 175, ಕಾಳುಮೆಣಸು 500, ಅಡಿಕೆ 350…!

ಇವರುಗಳ ಒಣ ಜಂಬ ಕೇಳಿಸಿಕೊಂಡ ಕರಿಮೆಣಸು(pepper) ಮತ್ತು ಅಡಿಕೆ(arecanut) ಇವರುಗಳ ಗತ್ತು ಅಹಂಕಾರವನ್ನು ಸಾಕಷ್ಟು ಬಾರಿ ಅನುಭವಿಸಿದವರು ಒಬ್ಬರೊಂದಿಗೆ ಒಬ್ಬರು ಪರಸ್ಪರ ಹೀಗೆ ಮಾತನಾಡಿಕೊಳ್ಳುತ್ತಿದ್ದರು. ಅವರುಗಳ ಈಗಿನ ಗತ್ತು ದೌಲತ್ತು ನೋಡು ಎಂದು ಕರಿಮೆಣಸು ಅಡಿಕೆಯಲ್ಲಿ ಹೇಳಿತ್ತು ಹೀಗೆ ಬೆಲೆ ಸ್ಪರ್ಧೆಯಲ್ಲಿ ನಾನು 800 ಮೈಲ್ ಓಡಿದವನು ನಾನು, ಈಗ ನೋಡು ನನಗೆ 500 ಮೈಲ್ ಓಡಲು ಸಹ ಬಿಡುವುದಿಲ್ಲ ಈಗಿನ ಬೆಲೆ ಇಲಾಖೆ ಎಂದು ದುಃಖದಿಂದ ತನ್ನ ಅಳಲು ತೋಡಿಕೊಂಡಿತ್ತು.

ಕರಿಮೆಣಸಿನ ಮಾತು ಆಲಿಸಿದ ಅಡಕೆ ಅಯ್ಯೋ ನನ್ನ ಪರಿಸ್ಥಿತಿ ಕೇಳು. ನಾನು ನಿನ್ನಷ್ಟು ಎತ್ತರಕ್ಕೆ ಏರದಿದ್ದರೂ 550 ರಷ್ಟು ಮೈಲ್ ಓಡಿದ್ದೇನೆ. ಒಂದೆರಡು ವರ್ಷ ಭಾರತ, ವಿದೇಶದಲ್ಲಿ ನನ್ನದೇ ಹವಾ, ಈಗ ನೋಡು ಇಲ್ಲಿನ ಕ್ರೀಡಾ ಇಲಾಖೆ ಗಟ್ಟಿ ಮುಟ್ಟಾಗಿದ್ದ ನನ್ನನ್ನು ದೂರ ತಳ್ಳಿ ವಿದೇಶದಿಂದ ಎರವಲು ತಂದು ನನ್ನನ್ನು ಮೂಲೆಗೆ ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೂ ನನ್ನ ಪ್ರತಿಭೆಗೆ ಕುಂದು ಬಂದಿಲ್ಲ. ಒಂದಲ್ಲ ಒಂದು ದಿನ ಈಗಿನ 350,430 ಮೈಲ್ ದಾಟಿ 500 ರ ಗಡಿ ತಲುಪುವ ವಿಶ್ವಾಸ ಇಟ್ಟು ಕೊಂಡಿರುವೆ.

ಕೊನೆಗೆ ಅಡಿಕೆ ಕರಿಮೆಣಸು ಇಬ್ಬರು ಒಂದು ಅಂದಾಜುಗೆ ಬಂದವರು ನೋಡುವ, ಕೊಕ್ಕೋ, ರಬ್ಬರ್ ಇವರ ದರ್ಬಾರ್ ಎಲ್ಲಿತನಕ ತಲುಪುತ್ತದೆ ಎಂದು ಕಾದು ನೋಡುವ. ನಾವಿಬ್ಬರು ಅವರ ಇಬ್ಬರ ಓಟದ ಬಗ್ಗೆ ನಂಜಿ ಕಕ್ಕುವುದು ಬೇಡ. ನಮ್ಮನ್ನು ಮೀರಿ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಓಡಿದರೂ ಹೊಟ್ಟೆಕಿಚ್ಚು ಪಡುವುದು ಬೇಡವೆಂದು ಪರಸ್ಪರ ಕೈ ಕುಲುಕಿ ಅಲ್ಲಿಂದ ತೆರಳಿದರು.

ಈ ನಾಲ್ಕು ಜನರ ಮಾತನ್ನು ಕೇಳಿಸಿಕೊಂಡ ಗೇರು ಬೀಜ ನಾಳೆ ನಾನು ನಿಮ್ಮ ಮುಂದೆ ಕಾಣಿಸಿಕೊಳ್ಳುವೆ ಎಂದು ಮರೆಯಲ್ಲಿ ಇತ್ತು. ನಾಳೆ ನೋಡುವ ಇವನ ವಿಚಾರ.ನಾಳೆ ನಮ್ಮ ಗುಡ್ಡೆಯಲ್ಲಿ ಕೆಂಪು, ಹಳದಿ ಲೈಟ್ ರೀತಿ ಕಾಣುವ ಇವನನ್ನು ಭೇಟಿ ಮಾಡುವ ಆಲೋಚನೆಯಲ್ಲಿ ಇದ್ದೇನೆ. ಇಂದು ಆ ಕಡೆ ಒಮ್ಮೆ ದೂರದಿಂದ ನೋಡಿದೆ ನಮ್ಮ ಪೂರ್ವಜರಾದ ಕೋತಿಗಳು ಮರವನ್ನು ಸುತ್ತುವರಿದು ಅಲುಗಾಡಿಸುತ್ತಿದ್ದರು.

ಬರಹ :
ಹರೀಶ್ ಪೆರಾಜೆ ಕೆ ಸಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago