Advertisement
Opinion

ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?

Share

ರಬ್ಬರ್(rubber),  ಕೊಕ್ಕೋ(cocoa) ಇವರುಗಳ ಮಧ್ಯೆ ಜಂಭದಲ್ಲಿ ಚರ್ಚೆ ನಡೆಯುತ್ತಿದೆ. ಏಕೆಂದರೆ ಹಳ್ಳಿ(village), ಪಟ್ಟಣಗಳ(city) ಮಾರುಕಟ್ಟೆಯಲ್ಲಿ(market) ಈಗ ಇವರದ್ದೇ ದರ್ಬಾರ್. ಕೊಕ್ಕೋ ರಬ್ಬರ್ ನ್ನು ಅಪಹಾಸ್ಯ ಮಾಡುತಿತ್ತು ಹೀಗೆ, ನಾನು ನಿನ್ನ ಬೆಲೆಯಲ್ಲಿ(price hike) ಹಿಂದಿಕ್ಕದೆ ‘ನಾ ನಿನ್ನ ಬೆನ್ನಟ್ಟದೆ ಬಿಡಲಾರೆ’ ಎಂದಿತ್ತು, ಕೊಕ್ಕೋದ ಮಾತು ಕೇಳಿ ರೋಸಿ ಹೋದ ರಬ್ಬರ್ ಎಂದಿತ್ತು ಹೀಗೆ, ‘ನೀ ನನ್ನ ಅಟ್ಟಿಸಿಕೊಂಡು ಬಂದರೂ ನೀ ನನ್ನ ಗೆಲ್ಲಲಾರೆ ‘ಎಂದಿತ್ತು.ಈಗ ಕೊಕ್ಕೋ ಬೆಲೆ 160, ರಬ್ಬರ್ ಬೆಲೆ 175, ಕಾಳುಮೆಣಸು 500, ಅಡಿಕೆ 350…!

Advertisement
Advertisement

ಇವರುಗಳ ಒಣ ಜಂಬ ಕೇಳಿಸಿಕೊಂಡ ಕರಿಮೆಣಸು(pepper) ಮತ್ತು ಅಡಿಕೆ(arecanut) ಇವರುಗಳ ಗತ್ತು ಅಹಂಕಾರವನ್ನು ಸಾಕಷ್ಟು ಬಾರಿ ಅನುಭವಿಸಿದವರು ಒಬ್ಬರೊಂದಿಗೆ ಒಬ್ಬರು ಪರಸ್ಪರ ಹೀಗೆ ಮಾತನಾಡಿಕೊಳ್ಳುತ್ತಿದ್ದರು. ಅವರುಗಳ ಈಗಿನ ಗತ್ತು ದೌಲತ್ತು ನೋಡು ಎಂದು ಕರಿಮೆಣಸು ಅಡಿಕೆಯಲ್ಲಿ ಹೇಳಿತ್ತು ಹೀಗೆ ಬೆಲೆ ಸ್ಪರ್ಧೆಯಲ್ಲಿ ನಾನು 800 ಮೈಲ್ ಓಡಿದವನು ನಾನು, ಈಗ ನೋಡು ನನಗೆ 500 ಮೈಲ್ ಓಡಲು ಸಹ ಬಿಡುವುದಿಲ್ಲ ಈಗಿನ ಬೆಲೆ ಇಲಾಖೆ ಎಂದು ದುಃಖದಿಂದ ತನ್ನ ಅಳಲು ತೋಡಿಕೊಂಡಿತ್ತು.

Advertisement

ಕರಿಮೆಣಸಿನ ಮಾತು ಆಲಿಸಿದ ಅಡಕೆ ಅಯ್ಯೋ ನನ್ನ ಪರಿಸ್ಥಿತಿ ಕೇಳು. ನಾನು ನಿನ್ನಷ್ಟು ಎತ್ತರಕ್ಕೆ ಏರದಿದ್ದರೂ 550 ರಷ್ಟು ಮೈಲ್ ಓಡಿದ್ದೇನೆ. ಒಂದೆರಡು ವರ್ಷ ಭಾರತ, ವಿದೇಶದಲ್ಲಿ ನನ್ನದೇ ಹವಾ, ಈಗ ನೋಡು ಇಲ್ಲಿನ ಕ್ರೀಡಾ ಇಲಾಖೆ ಗಟ್ಟಿ ಮುಟ್ಟಾಗಿದ್ದ ನನ್ನನ್ನು ದೂರ ತಳ್ಳಿ ವಿದೇಶದಿಂದ ಎರವಲು ತಂದು ನನ್ನನ್ನು ಮೂಲೆಗೆ ಹಾಕುವ ಪ್ರಯತ್ನ ನಡೆಯುತ್ತಿದೆ. ಆದರೂ ನನ್ನ ಪ್ರತಿಭೆಗೆ ಕುಂದು ಬಂದಿಲ್ಲ. ಒಂದಲ್ಲ ಒಂದು ದಿನ ಈಗಿನ 350,430 ಮೈಲ್ ದಾಟಿ 500 ರ ಗಡಿ ತಲುಪುವ ವಿಶ್ವಾಸ ಇಟ್ಟು ಕೊಂಡಿರುವೆ.

Advertisement

ಕೊನೆಗೆ ಅಡಿಕೆ ಕರಿಮೆಣಸು ಇಬ್ಬರು ಒಂದು ಅಂದಾಜುಗೆ ಬಂದವರು ನೋಡುವ, ಕೊಕ್ಕೋ, ರಬ್ಬರ್ ಇವರ ದರ್ಬಾರ್ ಎಲ್ಲಿತನಕ ತಲುಪುತ್ತದೆ ಎಂದು ಕಾದು ನೋಡುವ. ನಾವಿಬ್ಬರು ಅವರ ಇಬ್ಬರ ಓಟದ ಬಗ್ಗೆ ನಂಜಿ ಕಕ್ಕುವುದು ಬೇಡ. ನಮ್ಮನ್ನು ಮೀರಿ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಓಡಿದರೂ ಹೊಟ್ಟೆಕಿಚ್ಚು ಪಡುವುದು ಬೇಡವೆಂದು ಪರಸ್ಪರ ಕೈ ಕುಲುಕಿ ಅಲ್ಲಿಂದ ತೆರಳಿದರು.

ಈ ನಾಲ್ಕು ಜನರ ಮಾತನ್ನು ಕೇಳಿಸಿಕೊಂಡ ಗೇರು ಬೀಜ ನಾಳೆ ನಾನು ನಿಮ್ಮ ಮುಂದೆ ಕಾಣಿಸಿಕೊಳ್ಳುವೆ ಎಂದು ಮರೆಯಲ್ಲಿ ಇತ್ತು. ನಾಳೆ ನೋಡುವ ಇವನ ವಿಚಾರ.ನಾಳೆ ನಮ್ಮ ಗುಡ್ಡೆಯಲ್ಲಿ ಕೆಂಪು, ಹಳದಿ ಲೈಟ್ ರೀತಿ ಕಾಣುವ ಇವನನ್ನು ಭೇಟಿ ಮಾಡುವ ಆಲೋಚನೆಯಲ್ಲಿ ಇದ್ದೇನೆ. ಇಂದು ಆ ಕಡೆ ಒಮ್ಮೆ ದೂರದಿಂದ ನೋಡಿದೆ ನಮ್ಮ ಪೂರ್ವಜರಾದ ಕೋತಿಗಳು ಮರವನ್ನು ಸುತ್ತುವರಿದು ಅಲುಗಾಡಿಸುತ್ತಿದ್ದರು.

Advertisement
ಬರಹ :
ಹರೀಶ್ ಪೆರಾಜೆ ಕೆ ಸಿ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

3 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

11 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

14 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago