ನೈಸರ್ಗಿಕ ಬಣ್ಣದ ಕೈ ಮಗ್ಗ ಸೀರೆಗಳು ಈಗ ಟ್ರೆಂಡಿಂಗ್ ಸಾಲಿಗೆ ಸೇರುತ್ತಿದೆ. ಸಹಜ ಬಣ್ಣದ ಸೀರೆಯು ನಾರಿಯರ ಗಮನ ಸೆಳೆಯುತ್ತಿದ್ದು, ಅಡಿಕೆ ಚೊಗರಿನಿಂದ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೀರೆ ತಯಾರಾಗುತ್ತಿದೆ. ಉಡುಪಿ ಸೀರೆಯು ಹೊಸ ರೀತಿಯಲ್ಲಿ ಕಂಗೊಳಿಸುತ್ತಿದೆ. ಕೈ ಮಗ್ಗದ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ನೀಡಿರುವ ಕದಿಕೆ ಟ್ರಸ್ಟ್ ,ತಾಳಿಪಾಡಿ ನೇಕಾರರ ಸಹಕಾರ ಸಂಘದ ಸಹಯೋಗದೊಂದಿಗೆ ಈ ಸಹಜ ಬಣ್ಣದ ಉಡುಪಿ ಸೀರೆಗಳು ಈಚೆಗೆ ಬಿಡುಗಡೆಗೊಂಡಿತು.
2018 ರಲ್ಲಿ ಚರಕ ಸಂಸ್ಥೆಯ ಮಾರ್ಗದರ್ಶನದೊಂದಿಗೆ ತಾಳಿಪಾಡಿ ನೇಕಾರರ ಸಂಘದ ಸಹಯೋಗದೊಂದಿಗೆ ಆರಂಭಗೊಂಡ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ಕಾರ್ಯ ಇದೀಗ ಸಹಜ ಬಣ್ಣದ ಹಂತಕ್ಕೆ ಬಂದಿದೆ. ಸೆಲ್ಕೋ ನೆರವಿನಿಂದ ದೊರಕಿದ ಉಪಕರಣಗಳಿಂದ ಹಾಗೂ ಮಾಮಿ ಸ್ಕೂಲ್ ಆಫ್ ನ್ಯಾಚುರಲ್ ಡೈಯಿಂಗ್ ಸ್ಲಾಲರ್ಶಿಪ್ ಗೈಡ್ಲೈನ್ಸ್ನಲ್ಲಿ ಕದಿಕೆ ಟ್ರಸ್ಟ್ ಅಧ್ಯಕ್ಷೆ ಮಮತಾ ರೈ ಅವರು ಅಡಿಕೆ ಚೊಗರಿನಿಂದ ಪರಿಸರ ಸ್ನೇಹಿ ಬಣ್ಣ ತಯಾರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ತಾಳಿಪಾಡಿ ನೇಕಾರರ ಸಹಕಾರ ಸಂಘದ ನೇಕಾರರ ಮೂಲಕ ಸೀರೆಯನ್ನೂ ತಯಾರಿಸಿ ಗಮನಸೆಳೆದಿದ್ದಾರೆ.
ಮುಂದಿನ ದಿನಗಳಲ್ಲಿ ಕಾಡು ಬಾದಾಮಿ ಎಲೆ, ದಾಳಿಂಬೆ ಸಿಪ್ಪೆ, ಮಂಜಿಷ್ಟ, ನೀಲಿ ಗೊಂಡೆ ಹೂ ಮುಂತಾದ ಸಸ್ಯ ಮೂಲದ ಬಣ್ಣಗಳಿಂದ ನೈಜ ಬಣ್ಣದ ಉಡುಪಿ ಸೀರೆಗಳನ್ನು ಸಿದ್ಧಪಡಿಸುವ ಗುರಿಯಿದೆ. ಅಡಿಕೆ ಬಣ್ಣದ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಲಿದೆ ಎಂದು ಹೇಳುತ್ತಾರೆ ಕದಿಕೆ ಟ್ರಸ್ಟ್ನ ಮಮತಾ ರೈ.
ರಾಸಾಯನಿಕ ಬಣ್ಣಗಳಿಂದ ಸಿದ್ಧಪಡಿಸಿದ ಸೀರೆಗಳಿಗಿಂತ ಪರಿಸರ ಸ್ನೇಹಿಯಾಗಿರುವ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಾದ ಸೀರೆಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಬುಕಿಂಗ್ ಬಂದಿದೆ ಎಂದು ಹೇಳುತ್ತಾರೆ ನೇಕಾರಿಕೆಯನ್ನು ಮಾಡುತ್ತಿರುವ ಸಾಧನಾ ಅವರು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…