The Rural Mirror ವಾರದ ವಿಶೇಷ

#Arecanut | ಅಡಿಕೆಯ ಬಣ್ಣದ ಸೀರೆ | ನೈಸರ್ಗಿಕ ಬಣ್ಣದೊಂದಿಗೆ ಮೆರುಗು ನೀಡಿದ ಉಡುಪಿ ಸೀರೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೈಸರ್ಗಿಕ ಬಣ್ಣದ ಕೈ ಮಗ್ಗ ಸೀರೆಗಳು ಈಗ ಟ್ರೆಂಡಿಂಗ್‌ ಸಾಲಿಗೆ ಸೇರುತ್ತಿದೆ. ಸಹಜ ಬಣ್ಣದ ಸೀರೆಯು ನಾರಿಯರ ಗಮನ ಸೆಳೆಯುತ್ತಿದ್ದು, ಅಡಿಕೆ ಚೊಗರಿನಿಂದ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೀರೆ ತಯಾರಾಗುತ್ತಿದೆ. ಉಡುಪಿ ಸೀರೆಯು ಹೊಸ ರೀತಿಯಲ್ಲಿ ಕಂಗೊಳಿಸುತ್ತಿದೆ. ಕೈ ಮಗ್ಗದ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ನೀಡಿರುವ ಕದಿಕೆ ಟ್ರಸ್ಟ್‌ ,ತಾಳಿಪಾಡಿ ನೇಕಾರರ ಸಹಕಾರ ಸಂಘದ ಸಹಯೋಗದೊಂದಿಗೆ ಈ ಸಹಜ ಬಣ್ಣದ ಉಡುಪಿ ಸೀರೆಗಳು ಈಚೆಗೆ ಬಿಡುಗಡೆಗೊಂಡಿತು.

Advertisement
ಸೀರೆ ತಯಾರಿಕೆಯಲ್ಲಿ

2018 ರಲ್ಲಿ ಚರಕ ಸಂಸ್ಥೆಯ ಮಾರ್ಗದರ್ಶನದೊಂದಿಗೆ ತಾಳಿಪಾಡಿ ನೇಕಾರರ ಸಂಘದ ಸಹಯೋಗದೊಂದಿಗೆ ಆರಂಭಗೊಂಡ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ಕಾರ್ಯ ಇದೀಗ ಸಹಜ ಬಣ್ಣದ ಹಂತಕ್ಕೆ ಬಂದಿದೆ.  ಸೆಲ್ಕೋ ನೆರವಿನಿಂದ ದೊರಕಿದ ಉಪಕರಣಗಳಿಂದ ಹಾಗೂ ಮಾಮಿ ಸ್ಕೂಲ್‌ ಆಫ್‌ ನ್ಯಾಚುರಲ್‌ ಡೈಯಿಂಗ್‌ ಸ್ಲಾಲರ್‌ಶಿಪ್‌ ಗೈಡ್‌ಲೈನ್ಸ್‌ನಲ್ಲಿ ಕದಿಕೆ ಟ್ರಸ್ಟ್‌ ಅಧ್ಯಕ್ಷೆ ಮಮತಾ ರೈ ಅವರು  ಅಡಿಕೆ ಚೊಗರಿನಿಂದ ಪರಿಸರ ಸ್ನೇಹಿ ಬಣ್ಣ ತಯಾರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ತಾಳಿಪಾಡಿ ನೇಕಾರರ ಸಹಕಾರ ಸಂಘದ ನೇಕಾರರ ಮೂಲಕ ಸೀರೆಯನ್ನೂ ತಯಾರಿಸಿ ಗಮನಸೆಳೆದಿದ್ದಾರೆ.

ಮುಂದಿನ ದಿನಗಳಲ್ಲಿ ಕಾಡು ಬಾದಾಮಿ ಎಲೆ, ದಾಳಿಂಬೆ ಸಿಪ್ಪೆ, ಮಂಜಿಷ್ಟ, ನೀಲಿ ಗೊಂಡೆ ಹೂ ಮುಂತಾದ ಸಸ್ಯ ಮೂಲದ ಬಣ್ಣಗಳಿಂದ ನೈಜ ಬಣ್ಣದ ಉಡುಪಿ ಸೀರೆಗಳನ್ನು ಸಿದ್ಧಪಡಿಸುವ ಗುರಿಯಿದೆ. ಅಡಿಕೆ ಬಣ್ಣದ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಲಿದೆ  ಎಂದು ಹೇಳುತ್ತಾರೆ ಕದಿಕೆ ಟ್ರಸ್ಟ್‌ನ ಮಮತಾ ರೈ.

Advertisement

ರಾಸಾಯನಿಕ ಬಣ್ಣಗಳಿಂದ ಸಿದ್ಧಪಡಿಸಿದ ಸೀರೆಗಳಿಗಿಂತ ಪರಿಸರ ಸ್ನೇಹಿಯಾಗಿರುವ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಾದ ಸೀರೆಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಬುಕಿಂಗ್‌ ಬಂದಿದೆ ಎಂದು ಹೇಳುತ್ತಾರೆ ನೇಕಾರಿಕೆಯನ್ನು ಮಾಡುತ್ತಿರುವ ಸಾಧನಾ ಅವರು.

Advertisement
ಸಹಜ ಬಣ್ಣಗಳು
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…

4 hours ago

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

8 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

8 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

9 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

1 day ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

2 days ago