Advertisement
The Rural Mirror ವಾರದ ವಿಶೇಷ

#Arecanut | ಅಡಿಕೆಯ ಬಣ್ಣದ ಸೀರೆ | ನೈಸರ್ಗಿಕ ಬಣ್ಣದೊಂದಿಗೆ ಮೆರುಗು ನೀಡಿದ ಉಡುಪಿ ಸೀರೆ |

Share

ನೈಸರ್ಗಿಕ ಬಣ್ಣದ ಕೈ ಮಗ್ಗ ಸೀರೆಗಳು ಈಗ ಟ್ರೆಂಡಿಂಗ್‌ ಸಾಲಿಗೆ ಸೇರುತ್ತಿದೆ. ಸಹಜ ಬಣ್ಣದ ಸೀರೆಯು ನಾರಿಯರ ಗಮನ ಸೆಳೆಯುತ್ತಿದ್ದು, ಅಡಿಕೆ ಚೊಗರಿನಿಂದ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೀರೆ ತಯಾರಾಗುತ್ತಿದೆ. ಉಡುಪಿ ಸೀರೆಯು ಹೊಸ ರೀತಿಯಲ್ಲಿ ಕಂಗೊಳಿಸುತ್ತಿದೆ. ಕೈ ಮಗ್ಗದ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ನೀಡಿರುವ ಕದಿಕೆ ಟ್ರಸ್ಟ್‌ ,ತಾಳಿಪಾಡಿ ನೇಕಾರರ ಸಹಕಾರ ಸಂಘದ ಸಹಯೋಗದೊಂದಿಗೆ ಈ ಸಹಜ ಬಣ್ಣದ ಉಡುಪಿ ಸೀರೆಗಳು ಈಚೆಗೆ ಬಿಡುಗಡೆಗೊಂಡಿತು.

Advertisement
Advertisement
Advertisement
Advertisement
ಸೀರೆ ತಯಾರಿಕೆಯಲ್ಲಿ

2018 ರಲ್ಲಿ ಚರಕ ಸಂಸ್ಥೆಯ ಮಾರ್ಗದರ್ಶನದೊಂದಿಗೆ ತಾಳಿಪಾಡಿ ನೇಕಾರರ ಸಂಘದ ಸಹಯೋಗದೊಂದಿಗೆ ಆರಂಭಗೊಂಡ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ಕಾರ್ಯ ಇದೀಗ ಸಹಜ ಬಣ್ಣದ ಹಂತಕ್ಕೆ ಬಂದಿದೆ.  ಸೆಲ್ಕೋ ನೆರವಿನಿಂದ ದೊರಕಿದ ಉಪಕರಣಗಳಿಂದ ಹಾಗೂ ಮಾಮಿ ಸ್ಕೂಲ್‌ ಆಫ್‌ ನ್ಯಾಚುರಲ್‌ ಡೈಯಿಂಗ್‌ ಸ್ಲಾಲರ್‌ಶಿಪ್‌ ಗೈಡ್‌ಲೈನ್ಸ್‌ನಲ್ಲಿ ಕದಿಕೆ ಟ್ರಸ್ಟ್‌ ಅಧ್ಯಕ್ಷೆ ಮಮತಾ ರೈ ಅವರು  ಅಡಿಕೆ ಚೊಗರಿನಿಂದ ಪರಿಸರ ಸ್ನೇಹಿ ಬಣ್ಣ ತಯಾರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ತಾಳಿಪಾಡಿ ನೇಕಾರರ ಸಹಕಾರ ಸಂಘದ ನೇಕಾರರ ಮೂಲಕ ಸೀರೆಯನ್ನೂ ತಯಾರಿಸಿ ಗಮನಸೆಳೆದಿದ್ದಾರೆ.

Advertisement

ಮುಂದಿನ ದಿನಗಳಲ್ಲಿ ಕಾಡು ಬಾದಾಮಿ ಎಲೆ, ದಾಳಿಂಬೆ ಸಿಪ್ಪೆ, ಮಂಜಿಷ್ಟ, ನೀಲಿ ಗೊಂಡೆ ಹೂ ಮುಂತಾದ ಸಸ್ಯ ಮೂಲದ ಬಣ್ಣಗಳಿಂದ ನೈಜ ಬಣ್ಣದ ಉಡುಪಿ ಸೀರೆಗಳನ್ನು ಸಿದ್ಧಪಡಿಸುವ ಗುರಿಯಿದೆ. ಅಡಿಕೆ ಬಣ್ಣದ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಲಿದೆ  ಎಂದು ಹೇಳುತ್ತಾರೆ ಕದಿಕೆ ಟ್ರಸ್ಟ್‌ನ ಮಮತಾ ರೈ.

Advertisement

ರಾಸಾಯನಿಕ ಬಣ್ಣಗಳಿಂದ ಸಿದ್ಧಪಡಿಸಿದ ಸೀರೆಗಳಿಗಿಂತ ಪರಿಸರ ಸ್ನೇಹಿಯಾಗಿರುವ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಾದ ಸೀರೆಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಬುಕಿಂಗ್‌ ಬಂದಿದೆ ಎಂದು ಹೇಳುತ್ತಾರೆ ನೇಕಾರಿಕೆಯನ್ನು ಮಾಡುತ್ತಿರುವ ಸಾಧನಾ ಅವರು.

ಸಹಜ ಬಣ್ಣಗಳು
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

17 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

1 day ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago