Advertisement
The Rural Mirror ವಾರದ ವಿಶೇಷ

#Arecanut | ಅಡಿಕೆಯ ಬಣ್ಣದ ಸೀರೆ | ನೈಸರ್ಗಿಕ ಬಣ್ಣದೊಂದಿಗೆ ಮೆರುಗು ನೀಡಿದ ಉಡುಪಿ ಸೀರೆ |

Share

ನೈಸರ್ಗಿಕ ಬಣ್ಣದ ಕೈ ಮಗ್ಗ ಸೀರೆಗಳು ಈಗ ಟ್ರೆಂಡಿಂಗ್‌ ಸಾಲಿಗೆ ಸೇರುತ್ತಿದೆ. ಸಹಜ ಬಣ್ಣದ ಸೀರೆಯು ನಾರಿಯರ ಗಮನ ಸೆಳೆಯುತ್ತಿದ್ದು, ಅಡಿಕೆ ಚೊಗರಿನಿಂದ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೀರೆ ತಯಾರಾಗುತ್ತಿದೆ. ಉಡುಪಿ ಸೀರೆಯು ಹೊಸ ರೀತಿಯಲ್ಲಿ ಕಂಗೊಳಿಸುತ್ತಿದೆ. ಕೈ ಮಗ್ಗದ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ನೀಡಿರುವ ಕದಿಕೆ ಟ್ರಸ್ಟ್‌ ,ತಾಳಿಪಾಡಿ ನೇಕಾರರ ಸಹಕಾರ ಸಂಘದ ಸಹಯೋಗದೊಂದಿಗೆ ಈ ಸಹಜ ಬಣ್ಣದ ಉಡುಪಿ ಸೀರೆಗಳು ಈಚೆಗೆ ಬಿಡುಗಡೆಗೊಂಡಿತು.

ಸೀರೆ ತಯಾರಿಕೆಯಲ್ಲಿ

2018 ರಲ್ಲಿ ಚರಕ ಸಂಸ್ಥೆಯ ಮಾರ್ಗದರ್ಶನದೊಂದಿಗೆ ತಾಳಿಪಾಡಿ ನೇಕಾರರ ಸಂಘದ ಸಹಯೋಗದೊಂದಿಗೆ ಆರಂಭಗೊಂಡ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ಕಾರ್ಯ ಇದೀಗ ಸಹಜ ಬಣ್ಣದ ಹಂತಕ್ಕೆ ಬಂದಿದೆ.  ಸೆಲ್ಕೋ ನೆರವಿನಿಂದ ದೊರಕಿದ ಉಪಕರಣಗಳಿಂದ ಹಾಗೂ ಮಾಮಿ ಸ್ಕೂಲ್‌ ಆಫ್‌ ನ್ಯಾಚುರಲ್‌ ಡೈಯಿಂಗ್‌ ಸ್ಲಾಲರ್‌ಶಿಪ್‌ ಗೈಡ್‌ಲೈನ್ಸ್‌ನಲ್ಲಿ ಕದಿಕೆ ಟ್ರಸ್ಟ್‌ ಅಧ್ಯಕ್ಷೆ ಮಮತಾ ರೈ ಅವರು  ಅಡಿಕೆ ಚೊಗರಿನಿಂದ ಪರಿಸರ ಸ್ನೇಹಿ ಬಣ್ಣ ತಯಾರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ತಾಳಿಪಾಡಿ ನೇಕಾರರ ಸಹಕಾರ ಸಂಘದ ನೇಕಾರರ ಮೂಲಕ ಸೀರೆಯನ್ನೂ ತಯಾರಿಸಿ ಗಮನಸೆಳೆದಿದ್ದಾರೆ.

ಮುಂದಿನ ದಿನಗಳಲ್ಲಿ ಕಾಡು ಬಾದಾಮಿ ಎಲೆ, ದಾಳಿಂಬೆ ಸಿಪ್ಪೆ, ಮಂಜಿಷ್ಟ, ನೀಲಿ ಗೊಂಡೆ ಹೂ ಮುಂತಾದ ಸಸ್ಯ ಮೂಲದ ಬಣ್ಣಗಳಿಂದ ನೈಜ ಬಣ್ಣದ ಉಡುಪಿ ಸೀರೆಗಳನ್ನು ಸಿದ್ಧಪಡಿಸುವ ಗುರಿಯಿದೆ. ಅಡಿಕೆ ಬಣ್ಣದ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಲಿದೆ  ಎಂದು ಹೇಳುತ್ತಾರೆ ಕದಿಕೆ ಟ್ರಸ್ಟ್‌ನ ಮಮತಾ ರೈ.

ರಾಸಾಯನಿಕ ಬಣ್ಣಗಳಿಂದ ಸಿದ್ಧಪಡಿಸಿದ ಸೀರೆಗಳಿಗಿಂತ ಪರಿಸರ ಸ್ನೇಹಿಯಾಗಿರುವ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಾದ ಸೀರೆಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಬುಕಿಂಗ್‌ ಬಂದಿದೆ ಎಂದು ಹೇಳುತ್ತಾರೆ ನೇಕಾರಿಕೆಯನ್ನು ಮಾಡುತ್ತಿರುವ ಸಾಧನಾ ಅವರು.

ಸಹಜ ಬಣ್ಣಗಳು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

4 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

12 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

13 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

14 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago