Advertisement
The Rural Mirror ವಾರದ ವಿಶೇಷ

#Arecanut | ಅಡಿಕೆಯ ಬಣ್ಣದ ಸೀರೆ | ನೈಸರ್ಗಿಕ ಬಣ್ಣದೊಂದಿಗೆ ಮೆರುಗು ನೀಡಿದ ಉಡುಪಿ ಸೀರೆ |

Share

ನೈಸರ್ಗಿಕ ಬಣ್ಣದ ಕೈ ಮಗ್ಗ ಸೀರೆಗಳು ಈಗ ಟ್ರೆಂಡಿಂಗ್‌ ಸಾಲಿಗೆ ಸೇರುತ್ತಿದೆ. ಸಹಜ ಬಣ್ಣದ ಸೀರೆಯು ನಾರಿಯರ ಗಮನ ಸೆಳೆಯುತ್ತಿದ್ದು, ಅಡಿಕೆ ಚೊಗರಿನಿಂದ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸೀರೆ ತಯಾರಾಗುತ್ತಿದೆ. ಉಡುಪಿ ಸೀರೆಯು ಹೊಸ ರೀತಿಯಲ್ಲಿ ಕಂಗೊಳಿಸುತ್ತಿದೆ. ಕೈ ಮಗ್ಗದ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ನೀಡಿರುವ ಕದಿಕೆ ಟ್ರಸ್ಟ್‌ ,ತಾಳಿಪಾಡಿ ನೇಕಾರರ ಸಹಕಾರ ಸಂಘದ ಸಹಯೋಗದೊಂದಿಗೆ ಈ ಸಹಜ ಬಣ್ಣದ ಉಡುಪಿ ಸೀರೆಗಳು ಈಚೆಗೆ ಬಿಡುಗಡೆಗೊಂಡಿತು.

ಸೀರೆ ತಯಾರಿಕೆಯಲ್ಲಿ

2018 ರಲ್ಲಿ ಚರಕ ಸಂಸ್ಥೆಯ ಮಾರ್ಗದರ್ಶನದೊಂದಿಗೆ ತಾಳಿಪಾಡಿ ನೇಕಾರರ ಸಂಘದ ಸಹಯೋಗದೊಂದಿಗೆ ಆರಂಭಗೊಂಡ ಉಡುಪಿ ಸೀರೆ ಗುಡಿ ಕೈಗಾರಿಕೆಗೆ ಪುನಶ್ಚೇತನ ಕಾರ್ಯ ಇದೀಗ ಸಹಜ ಬಣ್ಣದ ಹಂತಕ್ಕೆ ಬಂದಿದೆ.  ಸೆಲ್ಕೋ ನೆರವಿನಿಂದ ದೊರಕಿದ ಉಪಕರಣಗಳಿಂದ ಹಾಗೂ ಮಾಮಿ ಸ್ಕೂಲ್‌ ಆಫ್‌ ನ್ಯಾಚುರಲ್‌ ಡೈಯಿಂಗ್‌ ಸ್ಲಾಲರ್‌ಶಿಪ್‌ ಗೈಡ್‌ಲೈನ್ಸ್‌ನಲ್ಲಿ ಕದಿಕೆ ಟ್ರಸ್ಟ್‌ ಅಧ್ಯಕ್ಷೆ ಮಮತಾ ರೈ ಅವರು  ಅಡಿಕೆ ಚೊಗರಿನಿಂದ ಪರಿಸರ ಸ್ನೇಹಿ ಬಣ್ಣ ತಯಾರಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ತಾಳಿಪಾಡಿ ನೇಕಾರರ ಸಹಕಾರ ಸಂಘದ ನೇಕಾರರ ಮೂಲಕ ಸೀರೆಯನ್ನೂ ತಯಾರಿಸಿ ಗಮನಸೆಳೆದಿದ್ದಾರೆ.

ಮುಂದಿನ ದಿನಗಳಲ್ಲಿ ಕಾಡು ಬಾದಾಮಿ ಎಲೆ, ದಾಳಿಂಬೆ ಸಿಪ್ಪೆ, ಮಂಜಿಷ್ಟ, ನೀಲಿ ಗೊಂಡೆ ಹೂ ಮುಂತಾದ ಸಸ್ಯ ಮೂಲದ ಬಣ್ಣಗಳಿಂದ ನೈಜ ಬಣ್ಣದ ಉಡುಪಿ ಸೀರೆಗಳನ್ನು ಸಿದ್ಧಪಡಿಸುವ ಗುರಿಯಿದೆ. ಅಡಿಕೆ ಬಣ್ಣದ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಲಿದೆ  ಎಂದು ಹೇಳುತ್ತಾರೆ ಕದಿಕೆ ಟ್ರಸ್ಟ್‌ನ ಮಮತಾ ರೈ.

ರಾಸಾಯನಿಕ ಬಣ್ಣಗಳಿಂದ ಸಿದ್ಧಪಡಿಸಿದ ಸೀರೆಗಳಿಗಿಂತ ಪರಿಸರ ಸ್ನೇಹಿಯಾಗಿರುವ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಾದ ಸೀರೆಗಳಿಗೆ ಈಗ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಬುಕಿಂಗ್‌ ಬಂದಿದೆ ಎಂದು ಹೇಳುತ್ತಾರೆ ನೇಕಾರಿಕೆಯನ್ನು ಮಾಡುತ್ತಿರುವ ಸಾಧನಾ ಅವರು.

ಸಹಜ ಬಣ್ಣಗಳು
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 hour ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

18 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago