ಪುತ್ತೂರಿನಲ್ಲಿ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ | ಅಡಿಕೆ ಬೆಳೆಗಾರರ ಪರವಾಗಿ ಧ್ವನಿ | ಶಾಸಕ ಸಂಜೀವ ಮಠಂದೂರು |

January 4, 2023
10:37 PM

ವಿಜಯಕರ್ನಾಟಕ ಪತ್ರಿಕೆ ವತಿಯಿಂದ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಪರವಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದೆ. ಅಡಿಕೆ ಬೇಡಿಕೆ ಹಾಗೂ ಪೂರೈಕೆಗಳನ್ನು ಗಮನಿಸಿಕೊಂಡು ಬೆಳೆಗಾರರಿಗೆ ಸಕಾಲದಲ್ಲಿ ಎಚ್ಚರಿಕೆಯನ್ನು ನೀಡುತ್ತಾ ಬಂದಿದೆ. ಉಪಬೆಳೆಗಳ ಕಡೆಗೂ ಮಾಹಿತಿ ನೀಡುತ್ತಿದೆ. ಈಗಾಗಲೇ ಕೊಕೋ, ರಬ್ಬರ್‌ , ಕಾಳುಮೆಣಸು ಖರೀದಿ ನಡೆಸುತ್ತಿದೆ. ಮುಂದೆ ಔಷಧೀಯ ಗಿಡಗಳ ಕಡೆಗೂ ಗಮನಹರಿಸಲಿದೆ ಎಂದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಅಡಿಕೆ ಬೆಳೆಗಾರರು ಸಂಘಟಿತರಾಗಬೇಕು. ಆಗ ಮಾತ್ರಾ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ. ಈಗ ಅಡಿಕೆಯ ಬಗ್ಗೆ ವಿವಿಧ ಚರ್ಚೆಗಳು ನಡೆಯುತ್ತಿದೆ, ಈ ಸಮಯದಲ್ಲಿ ಅಡಿಕೆ ಬೆಳೆಗಾರರು ಒಂದಾಗಬೇಕಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಟಂದೂರು ಮಾತನಾಡಿ, ಅಡಿಕೆ ಬೆಳೆಗಾರನಾಗಿ ಜಿಲ್ಲೆಯ ಬೆಳೆಗಾರರ ಪರವಾಗಿ ಧ್ವನಿ ಎತ್ತುವೆ. ಅಡಿಕೆ ಬೆಳೆಯ ಜೊತೆ ಇತರ ಬೆಳೆಗಳೂ ಇಂದು ಅನಿವಾರ್ಯವಾಗಿ ಬೆಳೆಯಬೇಕಿದೆ. ಅಡಿಕೆಯ ವಿವಿಧ ರೋಗಗಳ ಕಡೆಗೂ ವಿಜ್ಞಾನಿಗಳು ಗಮನಹರಿಸಬೇಕು, ಇದಕ್ಕಾಗಿ ಅಗತ್ಯ ನೆರವು ನೀಡಲು ಬದ್ಧರಾಗಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ನಾಗರಾಜ್‌ , ತೋಟಗಾರಿಕಾ ಇಲಾಖಾ ಅಧಿಕಾರಿಗಳಾದ ಪ್ರದೀಪ್‌, ರೇಖಾ , ವಿಜಯಕರ್ನಾಟಕ ಸ್ಥಾನೀಯ ಸಂಪಾದಕ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಕೃಷಿಕರು ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ
ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ
July 28, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror