ಸುದ್ದಿಗಳು

ಪುತ್ತೂರಿನಲ್ಲಿ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ | ಅಡಿಕೆ ಬೆಳೆಗಾರರ ಪರವಾಗಿ ಧ್ವನಿ | ಶಾಸಕ ಸಂಜೀವ ಮಠಂದೂರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಜಯಕರ್ನಾಟಕ ಪತ್ರಿಕೆ ವತಿಯಿಂದ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಉದ್ಘಾಟಿಸಿದರು.

Advertisement

ಕಾರ್ಯಕ್ರಮ ಉದ್ಘಾಟಿಸಿದ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಪರವಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದೆ. ಅಡಿಕೆ ಬೇಡಿಕೆ ಹಾಗೂ ಪೂರೈಕೆಗಳನ್ನು ಗಮನಿಸಿಕೊಂಡು ಬೆಳೆಗಾರರಿಗೆ ಸಕಾಲದಲ್ಲಿ ಎಚ್ಚರಿಕೆಯನ್ನು ನೀಡುತ್ತಾ ಬಂದಿದೆ. ಉಪಬೆಳೆಗಳ ಕಡೆಗೂ ಮಾಹಿತಿ ನೀಡುತ್ತಿದೆ. ಈಗಾಗಲೇ ಕೊಕೋ, ರಬ್ಬರ್‌ , ಕಾಳುಮೆಣಸು ಖರೀದಿ ನಡೆಸುತ್ತಿದೆ. ಮುಂದೆ ಔಷಧೀಯ ಗಿಡಗಳ ಕಡೆಗೂ ಗಮನಹರಿಸಲಿದೆ ಎಂದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಅಡಿಕೆ ಬೆಳೆಗಾರರು ಸಂಘಟಿತರಾಗಬೇಕು. ಆಗ ಮಾತ್ರಾ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ. ಈಗ ಅಡಿಕೆಯ ಬಗ್ಗೆ ವಿವಿಧ ಚರ್ಚೆಗಳು ನಡೆಯುತ್ತಿದೆ, ಈ ಸಮಯದಲ್ಲಿ ಅಡಿಕೆ ಬೆಳೆಗಾರರು ಒಂದಾಗಬೇಕಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಟಂದೂರು ಮಾತನಾಡಿ, ಅಡಿಕೆ ಬೆಳೆಗಾರನಾಗಿ ಜಿಲ್ಲೆಯ ಬೆಳೆಗಾರರ ಪರವಾಗಿ ಧ್ವನಿ ಎತ್ತುವೆ. ಅಡಿಕೆ ಬೆಳೆಯ ಜೊತೆ ಇತರ ಬೆಳೆಗಳೂ ಇಂದು ಅನಿವಾರ್ಯವಾಗಿ ಬೆಳೆಯಬೇಕಿದೆ. ಅಡಿಕೆಯ ವಿವಿಧ ರೋಗಗಳ ಕಡೆಗೂ ವಿಜ್ಞಾನಿಗಳು ಗಮನಹರಿಸಬೇಕು, ಇದಕ್ಕಾಗಿ ಅಗತ್ಯ ನೆರವು ನೀಡಲು ಬದ್ಧರಾಗಿದ್ದೇವೆ ಎಂದರು.

Advertisement

ಕಾರ್ಯಕ್ರಮದಲ್ಲಿ ಸಿಪಿಸಿಆರ್‌ಐ ವಿಜ್ಞಾನಿ ಡಾ.ನಾಗರಾಜ್‌ , ತೋಟಗಾರಿಕಾ ಇಲಾಖಾ ಅಧಿಕಾರಿಗಳಾದ ಪ್ರದೀಪ್‌, ರೇಖಾ , ವಿಜಯಕರ್ನಾಟಕ ಸ್ಥಾನೀಯ ಸಂಪಾದಕ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಕೃಷಿಕರು ಭಾಗವಹಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

2 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

3 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

3 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

3 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

17 hours ago