ವಿಜಯಕರ್ನಾಟಕ ಪತ್ರಿಕೆ ವತಿಯಿಂದ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಪುತ್ತೂರಿನ ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಕ್ಯಾಂಪ್ಕೋ ಅಡಿಕೆ ಬೆಳೆಗಾರರ ಪರವಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದೆ. ಅಡಿಕೆ ಬೇಡಿಕೆ ಹಾಗೂ ಪೂರೈಕೆಗಳನ್ನು ಗಮನಿಸಿಕೊಂಡು ಬೆಳೆಗಾರರಿಗೆ ಸಕಾಲದಲ್ಲಿ ಎಚ್ಚರಿಕೆಯನ್ನು ನೀಡುತ್ತಾ ಬಂದಿದೆ. ಉಪಬೆಳೆಗಳ ಕಡೆಗೂ ಮಾಹಿತಿ ನೀಡುತ್ತಿದೆ. ಈಗಾಗಲೇ ಕೊಕೋ, ರಬ್ಬರ್ , ಕಾಳುಮೆಣಸು ಖರೀದಿ ನಡೆಸುತ್ತಿದೆ. ಮುಂದೆ ಔಷಧೀಯ ಗಿಡಗಳ ಕಡೆಗೂ ಗಮನಹರಿಸಲಿದೆ ಎಂದರು.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ಅಡಿಕೆ ಬೆಳೆಗಾರರು ಸಂಘಟಿತರಾಗಬೇಕು. ಆಗ ಮಾತ್ರಾ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಾಧ್ಯ. ಈಗ ಅಡಿಕೆಯ ಬಗ್ಗೆ ವಿವಿಧ ಚರ್ಚೆಗಳು ನಡೆಯುತ್ತಿದೆ, ಈ ಸಮಯದಲ್ಲಿ ಅಡಿಕೆ ಬೆಳೆಗಾರರು ಒಂದಾಗಬೇಕಿದೆ ಎಂದರು.
ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಟಂದೂರು ಮಾತನಾಡಿ, ಅಡಿಕೆ ಬೆಳೆಗಾರನಾಗಿ ಜಿಲ್ಲೆಯ ಬೆಳೆಗಾರರ ಪರವಾಗಿ ಧ್ವನಿ ಎತ್ತುವೆ. ಅಡಿಕೆ ಬೆಳೆಯ ಜೊತೆ ಇತರ ಬೆಳೆಗಳೂ ಇಂದು ಅನಿವಾರ್ಯವಾಗಿ ಬೆಳೆಯಬೇಕಿದೆ. ಅಡಿಕೆಯ ವಿವಿಧ ರೋಗಗಳ ಕಡೆಗೂ ವಿಜ್ಞಾನಿಗಳು ಗಮನಹರಿಸಬೇಕು, ಇದಕ್ಕಾಗಿ ಅಗತ್ಯ ನೆರವು ನೀಡಲು ಬದ್ಧರಾಗಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಸಿಪಿಸಿಆರ್ಐ ವಿಜ್ಞಾನಿ ಡಾ.ನಾಗರಾಜ್ , ತೋಟಗಾರಿಕಾ ಇಲಾಖಾ ಅಧಿಕಾರಿಗಳಾದ ಪ್ರದೀಪ್, ರೇಖಾ , ವಿಜಯಕರ್ನಾಟಕ ಸ್ಥಾನೀಯ ಸಂಪಾದಕ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು, ಕೃಷಿಕರು ಭಾಗವಹಿಸಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…