MIRROR FOCUS

ಅಡಿಕೆ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡಲು ನೇಪಾಳ ಚಿಂತನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿವಿಧ ದೇಶಗಳಲ್ಲಿ ಅಡಿಕೆ ಹಾನಿಕಾರಕ ಸೇರಿದಂತೆ ವಿವಿಧ ಆಪಾದನೆಗಳ ಮೂಲಕ ಅಡಿಕೆ ಬೆಳೆ ನಿಯಂತ್ರಣ ಕಡೆಗೆ ಚಿಂತನೆ ಮಾಡುತ್ತಿದ್ದಾರೆ. ಆದರೆ ನೇಪಾಳವು ಅಲ್ಲಿನ ಕೃಷಿಕರ ಹಿತದೃಷ್ಟಿಯಿಂದ ಅಡಿಕೆ ಕೃಷಿಯನ್ನು ಉತ್ತೇಜನ ಮಾಡಲು ಹಾಗೂ ಅಡಿಕೆ ರಫ್ತು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.…..ಮುಂದೆ ಓದಿ….

Advertisement
Advertisement

ನೇಪಾಳದ  ಆರ್ಥಿಕ ವ್ಯವಹಾರಗಳು ಮತ್ತು ಆಡಳಿತ ಸಮಿತಿಯು  ಅಡಿಕೆ ರಫ್ತು ಹಾಗೂ ನಿರ್ವಹಣೆಯ ಬಗ್ಗೆ ವಿಶೇಷವಾದ ಸಭೆ ನಡೆಸಿ ಅಡಿಕೆ ಆಮದು ಹಾಗೂ ರಫ್ತು ಬಗ್ಗೆ ಚರ್ಚೆ ನಡೆಸಿ, ಅಡಿಕೆ ಉತ್ಪಾದನೆ ಮತ್ತು ಸರಬರಾಜು ಎರಡನ್ನೂ ಉತ್ತೇಜಿಸುವ ಅಗತ್ಯದ ಬಗ್ಗೆ ಮಾತುಕತೆ ನಡೆಸಿದೆ.

ಅಡಿಕೆ ಉತ್ಪಾದನೆ ಮತ್ತು ಆಮದು ಹೆಚ್ಚಳವು ದೇಶದ ಆದಾಯ ಸಂಗ್ರಹಕ್ಕೆ  ಕೊಡುಗೆ ನೀಡುತ್ತದೆ.ಪ್ರಸಕ್ತ ಹಣಕಾಸು ವರ್ಷದಲ್ಲಿ ಝಾಪಾದಲ್ಲಿ ಅಡಿಕೆ ಸಂಸ್ಕರಣೆಗೆ ಸಾಕಷ್ಟು ಹಣ ನಿಗದಿಪಡಿಸಲಾಗಿದೆ.ಈಗ ನೇಪಾಳವು ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತದೆ ಎಂದು ನೇಪಾಳದ ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವ ದಾಮೋದರ್ ಭಂಡಾರಿ ಸಭೆಯಲ್ಲಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಇದರ ಜೊತೆಗೇ, ದೇಶದಲ್ಲಿಯೇ ಆಹಾರ ಧಾನ್ಯಗಳ ಉತ್ಪಾದನೆಯನ್ನು ಕೂಡಾ ಹೆಚ್ಚಿಸುವ ಅಗತ್ಯವನ್ನು ಅವರು ಹೇಳಿದರು.

ಸದ್ಯ ನೇಪಾಳದ 15 ಪ್ರದೇಶಗಳು ಅಡಿಕೆ ಉತ್ಪಾದನೆಗೆ ಉತ್ತಮವಾದ ವಾತಾವರಣವನ್ನು ಹೊಂದಿದೆ. ಸದ್ಯ ಝಾಫಾ ಸೇರಿದಂತೆ 4 ಜಿಲ್ಲೆಗಳಲ್ಲಿ ಮಾತ್ರವೇ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಅಡಿಕೆ ರಫ್ತು ಹಾಗೂ ಆದಾಯ ಸಂಗ್ರಹದಲ್ಲಿ ಅಡಿಕೆಯ ಕೊಡುಗೆಯ ಜೊತೆಗೆ ಸರ್ಕಾರವು ರಫ್ತು ಮಾಡಬಹುದಾದ ದೇಶಗಳ ಬಗ್ಗೆಯೂ ಅನ್ವೇಷಣೆ ಮಾಡಬೇಕು ಎಂದೂ ಸಭೆಯಲ್ಲಿ ರೈತ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಫ್ತು ಮಾಡುವ ವೇಳೆ ನೇಪಾಳದ ಅಡಿಕೆಯನ್ನಷ್ಟೇ ರಫ್ತು ಮಾಡಲು ಸೂಕ್ತವಾದ ವ್ಯವಸ್ಥೆಯೂ ಅಗತ್ಯ ಇದೆ ಎಂದು ರೈತ ಮುಖಂಡರು ಹೇಳಿದ್ದಾರೆ.ಇಲ್ಲದಿದ್ದರೆ ಇದೇ ವಿಚಾರವೂ ಮುಂದೆ ಚರ್ಚೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?

ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…

17 minutes ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

26 minutes ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

2 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

2 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

2 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

2 hours ago