Advertisement
MIRROR FOCUS

ಅಡಿಕೆ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡಲು ನೇಪಾಳ ಚಿಂತನೆ |

Share

ವಿವಿಧ ದೇಶಗಳಲ್ಲಿ ಅಡಿಕೆ ಹಾನಿಕಾರಕ ಸೇರಿದಂತೆ ವಿವಿಧ ಆಪಾದನೆಗಳ ಮೂಲಕ ಅಡಿಕೆ ಬೆಳೆ ನಿಯಂತ್ರಣ ಕಡೆಗೆ ಚಿಂತನೆ ಮಾಡುತ್ತಿದ್ದಾರೆ. ಆದರೆ ನೇಪಾಳವು ಅಲ್ಲಿನ ಕೃಷಿಕರ ಹಿತದೃಷ್ಟಿಯಿಂದ ಅಡಿಕೆ ಕೃಷಿಯನ್ನು ಉತ್ತೇಜನ ಮಾಡಲು ಹಾಗೂ ಅಡಿಕೆ ರಫ್ತು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.…..ಮುಂದೆ ಓದಿ….

Advertisement
Advertisement
Advertisement
Advertisement

ನೇಪಾಳದ  ಆರ್ಥಿಕ ವ್ಯವಹಾರಗಳು ಮತ್ತು ಆಡಳಿತ ಸಮಿತಿಯು  ಅಡಿಕೆ ರಫ್ತು ಹಾಗೂ ನಿರ್ವಹಣೆಯ ಬಗ್ಗೆ ವಿಶೇಷವಾದ ಸಭೆ ನಡೆಸಿ ಅಡಿಕೆ ಆಮದು ಹಾಗೂ ರಫ್ತು ಬಗ್ಗೆ ಚರ್ಚೆ ನಡೆಸಿ, ಅಡಿಕೆ ಉತ್ಪಾದನೆ ಮತ್ತು ಸರಬರಾಜು ಎರಡನ್ನೂ ಉತ್ತೇಜಿಸುವ ಅಗತ್ಯದ ಬಗ್ಗೆ ಮಾತುಕತೆ ನಡೆಸಿದೆ.

Advertisement

ಅಡಿಕೆ ಉತ್ಪಾದನೆ ಮತ್ತು ಆಮದು ಹೆಚ್ಚಳವು ದೇಶದ ಆದಾಯ ಸಂಗ್ರಹಕ್ಕೆ  ಕೊಡುಗೆ ನೀಡುತ್ತದೆ.ಪ್ರಸಕ್ತ ಹಣಕಾಸು ವರ್ಷದಲ್ಲಿ ಝಾಪಾದಲ್ಲಿ ಅಡಿಕೆ ಸಂಸ್ಕರಣೆಗೆ ಸಾಕಷ್ಟು ಹಣ ನಿಗದಿಪಡಿಸಲಾಗಿದೆ.ಈಗ ನೇಪಾಳವು ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತದೆ ಎಂದು ನೇಪಾಳದ ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವ ದಾಮೋದರ್ ಭಂಡಾರಿ ಸಭೆಯಲ್ಲಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಇದರ ಜೊತೆಗೇ, ದೇಶದಲ್ಲಿಯೇ ಆಹಾರ ಧಾನ್ಯಗಳ ಉತ್ಪಾದನೆಯನ್ನು ಕೂಡಾ ಹೆಚ್ಚಿಸುವ ಅಗತ್ಯವನ್ನು ಅವರು ಹೇಳಿದರು.

ಸದ್ಯ ನೇಪಾಳದ 15 ಪ್ರದೇಶಗಳು ಅಡಿಕೆ ಉತ್ಪಾದನೆಗೆ ಉತ್ತಮವಾದ ವಾತಾವರಣವನ್ನು ಹೊಂದಿದೆ. ಸದ್ಯ ಝಾಫಾ ಸೇರಿದಂತೆ 4 ಜಿಲ್ಲೆಗಳಲ್ಲಿ ಮಾತ್ರವೇ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಅಡಿಕೆ ರಫ್ತು ಹಾಗೂ ಆದಾಯ ಸಂಗ್ರಹದಲ್ಲಿ ಅಡಿಕೆಯ ಕೊಡುಗೆಯ ಜೊತೆಗೆ ಸರ್ಕಾರವು ರಫ್ತು ಮಾಡಬಹುದಾದ ದೇಶಗಳ ಬಗ್ಗೆಯೂ ಅನ್ವೇಷಣೆ ಮಾಡಬೇಕು ಎಂದೂ ಸಭೆಯಲ್ಲಿ ರೈತ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಫ್ತು ಮಾಡುವ ವೇಳೆ ನೇಪಾಳದ ಅಡಿಕೆಯನ್ನಷ್ಟೇ ರಫ್ತು ಮಾಡಲು ಸೂಕ್ತವಾದ ವ್ಯವಸ್ಥೆಯೂ ಅಗತ್ಯ ಇದೆ ಎಂದು ರೈತ ಮುಖಂಡರು ಹೇಳಿದ್ದಾರೆ.ಇಲ್ಲದಿದ್ದರೆ ಇದೇ ವಿಚಾರವೂ ಮುಂದೆ ಚರ್ಚೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

8 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

8 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

8 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

1 day ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

1 day ago