Advertisement
MIRROR FOCUS

ಅಡಿಕೆ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡಲು ನೇಪಾಳ ಚಿಂತನೆ |

Share

ವಿವಿಧ ದೇಶಗಳಲ್ಲಿ ಅಡಿಕೆ ಹಾನಿಕಾರಕ ಸೇರಿದಂತೆ ವಿವಿಧ ಆಪಾದನೆಗಳ ಮೂಲಕ ಅಡಿಕೆ ಬೆಳೆ ನಿಯಂತ್ರಣ ಕಡೆಗೆ ಚಿಂತನೆ ಮಾಡುತ್ತಿದ್ದಾರೆ. ಆದರೆ ನೇಪಾಳವು ಅಲ್ಲಿನ ಕೃಷಿಕರ ಹಿತದೃಷ್ಟಿಯಿಂದ ಅಡಿಕೆ ಕೃಷಿಯನ್ನು ಉತ್ತೇಜನ ಮಾಡಲು ಹಾಗೂ ಅಡಿಕೆ ರಫ್ತು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.…..ಮುಂದೆ ಓದಿ….

ನೇಪಾಳದ  ಆರ್ಥಿಕ ವ್ಯವಹಾರಗಳು ಮತ್ತು ಆಡಳಿತ ಸಮಿತಿಯು  ಅಡಿಕೆ ರಫ್ತು ಹಾಗೂ ನಿರ್ವಹಣೆಯ ಬಗ್ಗೆ ವಿಶೇಷವಾದ ಸಭೆ ನಡೆಸಿ ಅಡಿಕೆ ಆಮದು ಹಾಗೂ ರಫ್ತು ಬಗ್ಗೆ ಚರ್ಚೆ ನಡೆಸಿ, ಅಡಿಕೆ ಉತ್ಪಾದನೆ ಮತ್ತು ಸರಬರಾಜು ಎರಡನ್ನೂ ಉತ್ತೇಜಿಸುವ ಅಗತ್ಯದ ಬಗ್ಗೆ ಮಾತುಕತೆ ನಡೆಸಿದೆ.

ಅಡಿಕೆ ಉತ್ಪಾದನೆ ಮತ್ತು ಆಮದು ಹೆಚ್ಚಳವು ದೇಶದ ಆದಾಯ ಸಂಗ್ರಹಕ್ಕೆ  ಕೊಡುಗೆ ನೀಡುತ್ತದೆ.ಪ್ರಸಕ್ತ ಹಣಕಾಸು ವರ್ಷದಲ್ಲಿ ಝಾಪಾದಲ್ಲಿ ಅಡಿಕೆ ಸಂಸ್ಕರಣೆಗೆ ಸಾಕಷ್ಟು ಹಣ ನಿಗದಿಪಡಿಸಲಾಗಿದೆ.ಈಗ ನೇಪಾಳವು ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತದೆ ಎಂದು ನೇಪಾಳದ ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವ ದಾಮೋದರ್ ಭಂಡಾರಿ ಸಭೆಯಲ್ಲಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಇದರ ಜೊತೆಗೇ, ದೇಶದಲ್ಲಿಯೇ ಆಹಾರ ಧಾನ್ಯಗಳ ಉತ್ಪಾದನೆಯನ್ನು ಕೂಡಾ ಹೆಚ್ಚಿಸುವ ಅಗತ್ಯವನ್ನು ಅವರು ಹೇಳಿದರು.

ಸದ್ಯ ನೇಪಾಳದ 15 ಪ್ರದೇಶಗಳು ಅಡಿಕೆ ಉತ್ಪಾದನೆಗೆ ಉತ್ತಮವಾದ ವಾತಾವರಣವನ್ನು ಹೊಂದಿದೆ. ಸದ್ಯ ಝಾಫಾ ಸೇರಿದಂತೆ 4 ಜಿಲ್ಲೆಗಳಲ್ಲಿ ಮಾತ್ರವೇ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಅಡಿಕೆ ರಫ್ತು ಹಾಗೂ ಆದಾಯ ಸಂಗ್ರಹದಲ್ಲಿ ಅಡಿಕೆಯ ಕೊಡುಗೆಯ ಜೊತೆಗೆ ಸರ್ಕಾರವು ರಫ್ತು ಮಾಡಬಹುದಾದ ದೇಶಗಳ ಬಗ್ಗೆಯೂ ಅನ್ವೇಷಣೆ ಮಾಡಬೇಕು ಎಂದೂ ಸಭೆಯಲ್ಲಿ ರೈತ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಫ್ತು ಮಾಡುವ ವೇಳೆ ನೇಪಾಳದ ಅಡಿಕೆಯನ್ನಷ್ಟೇ ರಫ್ತು ಮಾಡಲು ಸೂಕ್ತವಾದ ವ್ಯವಸ್ಥೆಯೂ ಅಗತ್ಯ ಇದೆ ಎಂದು ರೈತ ಮುಖಂಡರು ಹೇಳಿದ್ದಾರೆ.ಇಲ್ಲದಿದ್ದರೆ ಇದೇ ವಿಚಾರವೂ ಮುಂದೆ ಚರ್ಚೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

5 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

5 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

5 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

6 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago