Advertisement
MIRROR FOCUS

ಅಡಿಕೆ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡಲು ನೇಪಾಳ ಚಿಂತನೆ |

Share

ವಿವಿಧ ದೇಶಗಳಲ್ಲಿ ಅಡಿಕೆ ಹಾನಿಕಾರಕ ಸೇರಿದಂತೆ ವಿವಿಧ ಆಪಾದನೆಗಳ ಮೂಲಕ ಅಡಿಕೆ ಬೆಳೆ ನಿಯಂತ್ರಣ ಕಡೆಗೆ ಚಿಂತನೆ ಮಾಡುತ್ತಿದ್ದಾರೆ. ಆದರೆ ನೇಪಾಳವು ಅಲ್ಲಿನ ಕೃಷಿಕರ ಹಿತದೃಷ್ಟಿಯಿಂದ ಅಡಿಕೆ ಕೃಷಿಯನ್ನು ಉತ್ತೇಜನ ಮಾಡಲು ಹಾಗೂ ಅಡಿಕೆ ರಫ್ತು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.…..ಮುಂದೆ ಓದಿ….

ನೇಪಾಳದ  ಆರ್ಥಿಕ ವ್ಯವಹಾರಗಳು ಮತ್ತು ಆಡಳಿತ ಸಮಿತಿಯು  ಅಡಿಕೆ ರಫ್ತು ಹಾಗೂ ನಿರ್ವಹಣೆಯ ಬಗ್ಗೆ ವಿಶೇಷವಾದ ಸಭೆ ನಡೆಸಿ ಅಡಿಕೆ ಆಮದು ಹಾಗೂ ರಫ್ತು ಬಗ್ಗೆ ಚರ್ಚೆ ನಡೆಸಿ, ಅಡಿಕೆ ಉತ್ಪಾದನೆ ಮತ್ತು ಸರಬರಾಜು ಎರಡನ್ನೂ ಉತ್ತೇಜಿಸುವ ಅಗತ್ಯದ ಬಗ್ಗೆ ಮಾತುಕತೆ ನಡೆಸಿದೆ.

ಅಡಿಕೆ ಉತ್ಪಾದನೆ ಮತ್ತು ಆಮದು ಹೆಚ್ಚಳವು ದೇಶದ ಆದಾಯ ಸಂಗ್ರಹಕ್ಕೆ  ಕೊಡುಗೆ ನೀಡುತ್ತದೆ.ಪ್ರಸಕ್ತ ಹಣಕಾಸು ವರ್ಷದಲ್ಲಿ ಝಾಪಾದಲ್ಲಿ ಅಡಿಕೆ ಸಂಸ್ಕರಣೆಗೆ ಸಾಕಷ್ಟು ಹಣ ನಿಗದಿಪಡಿಸಲಾಗಿದೆ.ಈಗ ನೇಪಾಳವು ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತದೆ ಎಂದು ನೇಪಾಳದ ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವ ದಾಮೋದರ್ ಭಂಡಾರಿ ಸಭೆಯಲ್ಲಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಇದರ ಜೊತೆಗೇ, ದೇಶದಲ್ಲಿಯೇ ಆಹಾರ ಧಾನ್ಯಗಳ ಉತ್ಪಾದನೆಯನ್ನು ಕೂಡಾ ಹೆಚ್ಚಿಸುವ ಅಗತ್ಯವನ್ನು ಅವರು ಹೇಳಿದರು.

ಸದ್ಯ ನೇಪಾಳದ 15 ಪ್ರದೇಶಗಳು ಅಡಿಕೆ ಉತ್ಪಾದನೆಗೆ ಉತ್ತಮವಾದ ವಾತಾವರಣವನ್ನು ಹೊಂದಿದೆ. ಸದ್ಯ ಝಾಫಾ ಸೇರಿದಂತೆ 4 ಜಿಲ್ಲೆಗಳಲ್ಲಿ ಮಾತ್ರವೇ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಅಡಿಕೆ ರಫ್ತು ಹಾಗೂ ಆದಾಯ ಸಂಗ್ರಹದಲ್ಲಿ ಅಡಿಕೆಯ ಕೊಡುಗೆಯ ಜೊತೆಗೆ ಸರ್ಕಾರವು ರಫ್ತು ಮಾಡಬಹುದಾದ ದೇಶಗಳ ಬಗ್ಗೆಯೂ ಅನ್ವೇಷಣೆ ಮಾಡಬೇಕು ಎಂದೂ ಸಭೆಯಲ್ಲಿ ರೈತ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಫ್ತು ಮಾಡುವ ವೇಳೆ ನೇಪಾಳದ ಅಡಿಕೆಯನ್ನಷ್ಟೇ ರಫ್ತು ಮಾಡಲು ಸೂಕ್ತವಾದ ವ್ಯವಸ್ಥೆಯೂ ಅಗತ್ಯ ಇದೆ ಎಂದು ರೈತ ಮುಖಂಡರು ಹೇಳಿದ್ದಾರೆ.ಇಲ್ಲದಿದ್ದರೆ ಇದೇ ವಿಚಾರವೂ ಮುಂದೆ ಚರ್ಚೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

18 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

24 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago