Advertisement
MIRROR FOCUS

ಅಡಿಕೆ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡಲು ನೇಪಾಳ ಚಿಂತನೆ |

Share

ವಿವಿಧ ದೇಶಗಳಲ್ಲಿ ಅಡಿಕೆ ಹಾನಿಕಾರಕ ಸೇರಿದಂತೆ ವಿವಿಧ ಆಪಾದನೆಗಳ ಮೂಲಕ ಅಡಿಕೆ ಬೆಳೆ ನಿಯಂತ್ರಣ ಕಡೆಗೆ ಚಿಂತನೆ ಮಾಡುತ್ತಿದ್ದಾರೆ. ಆದರೆ ನೇಪಾಳವು ಅಲ್ಲಿನ ಕೃಷಿಕರ ಹಿತದೃಷ್ಟಿಯಿಂದ ಅಡಿಕೆ ಕೃಷಿಯನ್ನು ಉತ್ತೇಜನ ಮಾಡಲು ಹಾಗೂ ಅಡಿಕೆ ರಫ್ತು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.…..ಮುಂದೆ ಓದಿ….

ನೇಪಾಳದ  ಆರ್ಥಿಕ ವ್ಯವಹಾರಗಳು ಮತ್ತು ಆಡಳಿತ ಸಮಿತಿಯು  ಅಡಿಕೆ ರಫ್ತು ಹಾಗೂ ನಿರ್ವಹಣೆಯ ಬಗ್ಗೆ ವಿಶೇಷವಾದ ಸಭೆ ನಡೆಸಿ ಅಡಿಕೆ ಆಮದು ಹಾಗೂ ರಫ್ತು ಬಗ್ಗೆ ಚರ್ಚೆ ನಡೆಸಿ, ಅಡಿಕೆ ಉತ್ಪಾದನೆ ಮತ್ತು ಸರಬರಾಜು ಎರಡನ್ನೂ ಉತ್ತೇಜಿಸುವ ಅಗತ್ಯದ ಬಗ್ಗೆ ಮಾತುಕತೆ ನಡೆಸಿದೆ.

ಅಡಿಕೆ ಉತ್ಪಾದನೆ ಮತ್ತು ಆಮದು ಹೆಚ್ಚಳವು ದೇಶದ ಆದಾಯ ಸಂಗ್ರಹಕ್ಕೆ  ಕೊಡುಗೆ ನೀಡುತ್ತದೆ.ಪ್ರಸಕ್ತ ಹಣಕಾಸು ವರ್ಷದಲ್ಲಿ ಝಾಪಾದಲ್ಲಿ ಅಡಿಕೆ ಸಂಸ್ಕರಣೆಗೆ ಸಾಕಷ್ಟು ಹಣ ನಿಗದಿಪಡಿಸಲಾಗಿದೆ.ಈಗ ನೇಪಾಳವು ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತದೆ ಎಂದು ನೇಪಾಳದ ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವ ದಾಮೋದರ್ ಭಂಡಾರಿ ಸಭೆಯಲ್ಲಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಇದರ ಜೊತೆಗೇ, ದೇಶದಲ್ಲಿಯೇ ಆಹಾರ ಧಾನ್ಯಗಳ ಉತ್ಪಾದನೆಯನ್ನು ಕೂಡಾ ಹೆಚ್ಚಿಸುವ ಅಗತ್ಯವನ್ನು ಅವರು ಹೇಳಿದರು.

ಸದ್ಯ ನೇಪಾಳದ 15 ಪ್ರದೇಶಗಳು ಅಡಿಕೆ ಉತ್ಪಾದನೆಗೆ ಉತ್ತಮವಾದ ವಾತಾವರಣವನ್ನು ಹೊಂದಿದೆ. ಸದ್ಯ ಝಾಫಾ ಸೇರಿದಂತೆ 4 ಜಿಲ್ಲೆಗಳಲ್ಲಿ ಮಾತ್ರವೇ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಅಡಿಕೆ ರಫ್ತು ಹಾಗೂ ಆದಾಯ ಸಂಗ್ರಹದಲ್ಲಿ ಅಡಿಕೆಯ ಕೊಡುಗೆಯ ಜೊತೆಗೆ ಸರ್ಕಾರವು ರಫ್ತು ಮಾಡಬಹುದಾದ ದೇಶಗಳ ಬಗ್ಗೆಯೂ ಅನ್ವೇಷಣೆ ಮಾಡಬೇಕು ಎಂದೂ ಸಭೆಯಲ್ಲಿ ರೈತ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಫ್ತು ಮಾಡುವ ವೇಳೆ ನೇಪಾಳದ ಅಡಿಕೆಯನ್ನಷ್ಟೇ ರಫ್ತು ಮಾಡಲು ಸೂಕ್ತವಾದ ವ್ಯವಸ್ಥೆಯೂ ಅಗತ್ಯ ಇದೆ ಎಂದು ರೈತ ಮುಖಂಡರು ಹೇಳಿದ್ದಾರೆ.ಇಲ್ಲದಿದ್ದರೆ ಇದೇ ವಿಚಾರವೂ ಮುಂದೆ ಚರ್ಚೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

36 minutes ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

1 hour ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

14 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

23 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago