Advertisement
MIRROR FOCUS

ಅಡಿಕೆ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡಲು ನೇಪಾಳ ಚಿಂತನೆ |

Share

ವಿವಿಧ ದೇಶಗಳಲ್ಲಿ ಅಡಿಕೆ ಹಾನಿಕಾರಕ ಸೇರಿದಂತೆ ವಿವಿಧ ಆಪಾದನೆಗಳ ಮೂಲಕ ಅಡಿಕೆ ಬೆಳೆ ನಿಯಂತ್ರಣ ಕಡೆಗೆ ಚಿಂತನೆ ಮಾಡುತ್ತಿದ್ದಾರೆ. ಆದರೆ ನೇಪಾಳವು ಅಲ್ಲಿನ ಕೃಷಿಕರ ಹಿತದೃಷ್ಟಿಯಿಂದ ಅಡಿಕೆ ಕೃಷಿಯನ್ನು ಉತ್ತೇಜನ ಮಾಡಲು ಹಾಗೂ ಅಡಿಕೆ ರಫ್ತು ಹೆಚ್ಚಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.…..ಮುಂದೆ ಓದಿ….

ನೇಪಾಳದ  ಆರ್ಥಿಕ ವ್ಯವಹಾರಗಳು ಮತ್ತು ಆಡಳಿತ ಸಮಿತಿಯು  ಅಡಿಕೆ ರಫ್ತು ಹಾಗೂ ನಿರ್ವಹಣೆಯ ಬಗ್ಗೆ ವಿಶೇಷವಾದ ಸಭೆ ನಡೆಸಿ ಅಡಿಕೆ ಆಮದು ಹಾಗೂ ರಫ್ತು ಬಗ್ಗೆ ಚರ್ಚೆ ನಡೆಸಿ, ಅಡಿಕೆ ಉತ್ಪಾದನೆ ಮತ್ತು ಸರಬರಾಜು ಎರಡನ್ನೂ ಉತ್ತೇಜಿಸುವ ಅಗತ್ಯದ ಬಗ್ಗೆ ಮಾತುಕತೆ ನಡೆಸಿದೆ.

ಅಡಿಕೆ ಉತ್ಪಾದನೆ ಮತ್ತು ಆಮದು ಹೆಚ್ಚಳವು ದೇಶದ ಆದಾಯ ಸಂಗ್ರಹಕ್ಕೆ  ಕೊಡುಗೆ ನೀಡುತ್ತದೆ.ಪ್ರಸಕ್ತ ಹಣಕಾಸು ವರ್ಷದಲ್ಲಿ ಝಾಪಾದಲ್ಲಿ ಅಡಿಕೆ ಸಂಸ್ಕರಣೆಗೆ ಸಾಕಷ್ಟು ಹಣ ನಿಗದಿಪಡಿಸಲಾಗಿದೆ.ಈಗ ನೇಪಾಳವು ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತದೆ ಎಂದು ನೇಪಾಳದ ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವ ದಾಮೋದರ್ ಭಂಡಾರಿ ಸಭೆಯಲ್ಲಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಇದರ ಜೊತೆಗೇ, ದೇಶದಲ್ಲಿಯೇ ಆಹಾರ ಧಾನ್ಯಗಳ ಉತ್ಪಾದನೆಯನ್ನು ಕೂಡಾ ಹೆಚ್ಚಿಸುವ ಅಗತ್ಯವನ್ನು ಅವರು ಹೇಳಿದರು.

ಸದ್ಯ ನೇಪಾಳದ 15 ಪ್ರದೇಶಗಳು ಅಡಿಕೆ ಉತ್ಪಾದನೆಗೆ ಉತ್ತಮವಾದ ವಾತಾವರಣವನ್ನು ಹೊಂದಿದೆ. ಸದ್ಯ ಝಾಫಾ ಸೇರಿದಂತೆ 4 ಜಿಲ್ಲೆಗಳಲ್ಲಿ ಮಾತ್ರವೇ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಅಡಿಕೆ ರಫ್ತು ಹಾಗೂ ಆದಾಯ ಸಂಗ್ರಹದಲ್ಲಿ ಅಡಿಕೆಯ ಕೊಡುಗೆಯ ಜೊತೆಗೆ ಸರ್ಕಾರವು ರಫ್ತು ಮಾಡಬಹುದಾದ ದೇಶಗಳ ಬಗ್ಗೆಯೂ ಅನ್ವೇಷಣೆ ಮಾಡಬೇಕು ಎಂದೂ ಸಭೆಯಲ್ಲಿ ರೈತ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಫ್ತು ಮಾಡುವ ವೇಳೆ ನೇಪಾಳದ ಅಡಿಕೆಯನ್ನಷ್ಟೇ ರಫ್ತು ಮಾಡಲು ಸೂಕ್ತವಾದ ವ್ಯವಸ್ಥೆಯೂ ಅಗತ್ಯ ಇದೆ ಎಂದು ರೈತ ಮುಖಂಡರು ಹೇಳಿದ್ದಾರೆ.ಇಲ್ಲದಿದ್ದರೆ ಇದೇ ವಿಚಾರವೂ ಮುಂದೆ ಚರ್ಚೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

6 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

6 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

8 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

9 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

10 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

10 hours ago