Advertisement
Opinion

Arecanut | ಅಡಿಕೆ ಗಿಡದ ಕಾಂಡದ ಬುಡಕ್ಕೆ ಗಾಯವಾದರೆ ಹೀಗಾಗುತ್ತದೆ…!, ಇರಲಿ ಎಚ್ಚರ |

Share

ಅಡಿಕೆ ಚಿಕ್ಕ ಸಸಿಮರಗಳ ಬುಡದಲ್ಲಿ ಕಳೆ ಮಿಷನ್ ನಲ್ಲಿ ಕಳೆ ಹೊಡೆಯುವಾಗ ರೋಪ್ ತಾಗಿದ ಪರಿಣಾಮವಾಗಿ ಅಡಿಕೆ ಮರದ ಕಾಂಡದ ಬುಡಕ್ಕೆ ಗಾಯವಾದಲ್ಲಿ ಅದು ಮುಂದಿನ ದಿನಗಳಲ್ಲಿ ಹೀಗೆ ಸುಟ್ಟು ಹೋಗುತ್ತದೆ. ಈ ತರಹ ಸುಟ್ಟು ಕರಕಲಾಗಲು ಇನ್ನೂ ಎರಡು ಕಾರಣಗಳಿವೆ. ಈ ಬಗ್ಗೆ ಮಾಹಿತಿ ಇಲ್ಲಿದೆ……

ಅಡಿಕೆ ಮರದ ಬುಡದಲ್ಲಿ ಗುದ್ದಲಿಯಲ್ಲಿ ಕಡಿದು ಬೇಸಾಯ ಮಾಡುವಾಗ ಗುದ್ದಲಿ ತಾಗಿದರೆ ನಂತರದ ದಿನಗಳಲ್ಲಿ ಆ ಗಾಯ ದೊಡ್ಡ ಆಗಿ ಹೀಗೆ ಸುಟ್ಟುಹೋದಂತಾಗುತ್ತದೆ‌. ಇದು ಅಡಿಕೆ ಸಸಿ ಮರ ಮಾತ್ರವಲ್ಲದೇ ದೊಡ್ಡ ಮರದ ವಿಚಾರದಲ್ಲೂ ಅಷ್ಟೇ ಗುದ್ದಲಿ ಪೆಟ್ಟು ಬುಡದ ಕಾಂಡದ ಆರಂಭಕ್ಕೆ ಬಿದ್ದರೆ ಒಂದು ವರ್ಷದಲ್ಲಿ ಮರವೇ ಸತ್ತು ಹೋಗುವ ಅಪಾಯವಿರುತ್ತದೆ. ಆಕಸ್ಮಾತ್ತಾಗಿ ಮರ ಸಾಯದಿದ್ದಲ್ಲಿ ಬುಡ ಹೀಗೆ ಸುಟ್ಟು ಹೋದಂತಾಗುತ್ತದೆ.

Advertisement

ಅಡಿಕೆ ಮರಕ್ಕೆ ಸಂಜೆಯ ಇಳಿ ಬಿಸಿಲು ಹೊಡೆದಾಗಲೂ ಹೀಗೆಯೇ ಆಗುತ್ತದೆ. ಆದರೆ ಹಾಗೆ ಬಿಸಿಲಿನ ತೀಕ್ಷ್ಣತೆಯಿಂದ ಹೊಡೆವಾಗ ಯಾವುದೋ ಒಂದು ನಿರ್ದಿಷ್ಟ ಭಾಗ ಮಾತ್ರ ಸುಡದು. ಒಂದು ಮೈ ಉದ್ದಕ್ಕೂ ಸುಡುತ್ತದೆ.

Advertisement

ಈ ಚಿತ್ರದಲ್ಲಿ ಸುಟ್ಟ ಗುರುತು ಇಳಿ ಬಿಸಿಲಿನ ತೀಕ್ಷ್ಣತೆಗೆ ಆದದ್ದಲ್ಲ.ಹೀಗೆ ಇಳಿಬಿಸಿಲಿನ ತೀಕ್ಷ್ಣತೆಗೆ ಸುಟ್ಟ ಅಡಿಕೆ ಮರವನ್ನು
ನಮ್ಮ ಮಲೆನಾಡಿನಲ್ಲಿ ಸುಟುಗಲು ಮರ ಅಂತಾರೆ.‌ಹಿಂದೆ ಕೊನೆಗಾರರು ಮರ ಹತ್ತುವ ಕಾಲದಲ್ಲಿ (ಈಗ ದೋಟಿ ಕಾಲ ಅಲ್ವ…? ಹಾಗಾಗಿ) ಇಂತಹ ಸುಟುಗಲು damage ಮರವನ್ನು ಹತ್ತುತ್ತಿರಲಿಲ್ಲ…!!

ಹಿಂದಿನವರು ಅಡಿಕೆ ತೋಟ ಮಾಡುವ ಜಾಗವನ್ನು ನೈಋತ್ಯ ಮಾರುತದ ದಿಕ್ಕು, ಇಳಿಬಿಸಿಲಿನ ತೀವ್ರತೆಯ ಬಿಸಿಲು ಹೊಡೆಯದಿರುವ ನೈಸರ್ಗಿಕ ಕಾಡು ಇಲ್ಲ ಪರ್ವತ ಗಳ ಮರೆ ಇರುವ ಭೂಮಿಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು . ಇಂತಹ ಭೂಮಿಯ ಅಡಿಕೆ ಕೃಷಿಯನ್ನು “ಸಾಂಪ್ರದಾಯಿಕ ಅಡಿಕೆ ಕೃಷಿ ” ಎನ್ನುವದು.

Advertisement

ಈ ತರಹ ಮರ ಸುಟ್ಟರೆ ವಾಸಿಯಾಗೋಲ್ಲ. ಇದಕ್ಕೆ ಯಾವುದೇ ಔಷಧವಿಲ್ಲ. ಇಳಿ ಬಿಸಿಲಿಗೆ ಕೆಲವರು ಸೋಗೆ ಹಾಳೆ ಕಟ್ಟಿದರೆ ಇನ್ನು ಕೆಲವರು ಸುಣ್ಣ ಹೊಡಿತಾರೆ. ಆದರೆ ಐವತ್ತು ಅರವತ್ತು ಅಡಿ ಎತ್ತರ ಬೆಳೆವ ಅಡಿಕೆ ಮರ ಕ್ಕೆ ಎಷ್ಟು ಎತ್ತರದ ತನಕ ಸುಣ್ಣ ಹೊಡೆಯಲು ಸಾದ್ಯ….? ಇದಕ್ಕೆ ಪಗಡೆ ಸಾಲು ಎಂಬ ಮಾದರಿಯ ಅಡಿಕೆ ಸಸಿ ಯನ್ನು ನೆಡುವ ಯೋಜನೆ ರೂಪಿಸಿ ಈ ಇಳಿ ಸಂಜೆಯ ಸೂರ್ಯನ ತೀಕ್ಷ್ಣ ಬಿಸಿಲು ಆರಂಭದ ಮರಕ್ಕೆ ಮಾತ್ರ ಬೀಳುವಂತೆ ತಡೆಯುತ್ತಾರೆ‌.

ಈ ಕಾಂಡಕ್ಕೆ ಆದ ಈ ಗಾಯದ ಸುಟ್ಟ ಗುರುತಿನ ಕರಕಲು ಕಲೆಯಿಂದ ಮರ ತಕ್ಷಣ ಕ್ಕೆ ಸಾಯೋಲ್ಲ…!! ಆದರೆ
ಫಸಲು ಮಾಮೂಲಿ ಮರಕ್ಕಿಂತ ತುಸು ಹೆಚ್ಚೇ ಬರುತ್ತದೆ.ಆದರೆ ಯಾವತ್ತೋ ಒಂದು ದೊಡ್ಡ ಮಳೆ ಗಾಳಿ ಬಂದಾಗ ಮರ ಆ ಸುಟ್ಟ ಜಾಗಕ್ಕೆ ಮುರಿದು ಬಿದ್ದು ಹೋಗುವ ಸಾಧ್ಯತೆ ಹೆಚ್ಚು…

Advertisement

ಅಡಿಕೆ ಮರ hard  ಆದರೂ ಅಡಿಕೆ ಮರದ ಈ ಭಾಗ ಅತ್ಯಂತ ಮೃದು. ಈ‌ ಭಾಗಕ್ಕೆ ಗುದ್ದಲಿ ಪೆಟ್ಟು, ಕಳೆ ಮಿಷನ್ ರೋಪ್ ನ ಪೆಟ್ಟು , ಸೂರ್ಯನ ತೀಕ್ಷ್ಣ ಕಿರಣದ ತಾಪ ಇತ್ಯಾದಿಗಳನ್ನು ಸಹಿಸೋಲ್ಲ… ಆದ್ದರಿಂದ ಅಡಿಕೆ ಮರದ ಬುಡದ ಕಳೆ ಹೊಡೆವಾಗ, ಅಗತೆ ಮಾಡುವಾಗ ಜಾಗೃತೆ ಇರಬೇಕು.

ಬರಹ :
ಪ್ರಬಂಧ ಅಂಬುತೀರ್ಥ
Precautionary measures to be taken in Arecanut cultivation.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪ್ರಬಂಧ ಅಂಬುತೀರ್ಥ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅಂಬುತೀರ್ಥದ ನಿವಾಸಿ ಪ್ರಬಂಧ. ಬಿ ಎ. ವಿಧ್ಯಾಭ್ಯಾಸ ಮುಗಿಸಿದ ಮೇಲೆ ಕೃಷಿ ಕೆಲಸ. ಕಥೆ , ಪರಿಸರ, ಕೃಷಿ , ವಿಜ್ಞಾನ , ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಲೇಖನ ಬರೆಯುವ ಹವ್ಯಾಸ. ಮಲೆನಾಡು ಗಿಡ್ಡ ಗೋ ತಳಿ ಸಂವರ್ಧನೆ, ಜೀರಿಗೆ ಮೆಣಸಿನಕಾಯಿ ಬೆಳೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಣೆ. ಮಲೆನಾಡು ಗಿಡ್ಡ ತಳಿ ಹಸುಗಳ ಸೆಗಣಿಯನ್ನು ಮೌಲ್ಯ ವರ್ಧನೆ ಮಾಡಿ ಕೃಷಿ ಸ್ನೇಹಿ ಸೂಕ್ಷ್ಮಾಣು ಜೀವಿಯುಕ್ತ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಕೆಲಸವನ್ನೂ ಮಾಡುತ್ತಿದ್ದಾರೆ.

Published by
ಪ್ರಬಂಧ ಅಂಬುತೀರ್ಥ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

6 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

7 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

8 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

8 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

2 days ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

2 days ago