Advertisement
MIRROR FOCUS

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!

Share

ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ ಇರುವ ಬಗ್ಗೆ ಮಾತನಾಡುತ್ತಿದ್ದರೆ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆಯೂ ಅಡಿಕೆ ಬೆಳೆಗಾರರು ಕೊಳೆರೋಗದ ಬಗ್ಗೆ ಮಾತನಾಡುತ್ತಿದ್ದಾರೆ. ಮಲೆನಾಡು-ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾಗುತ್ತಿಲ್ಲ. ಹೀಗಾಗಿ ಕೊಳೆರೋಗವೂ ಹೆಚ್ಚಾಗುವ ಆತಂಕ ಇದೆ. ಮಳೆಯ ಮಧ್ಯೆಯೇ ಇಂದು ಕೆಲವು ಕಡೆ, ಔಷಧಿ ಸಿಂಪಡಣೆ ಮಾಡುವ ಬಗ್ಗೆ ಕೃಷಿಕರು ಮಾಹಿತಿ ಹಂಚಿಕೊಂಡಿದ್ದಾರೆ. ಅಡಿಕೆ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್‌  ಆನ್‌ ಲೈನ್‌ ಮೂಲಕ ಸಮೀಕ್ಷೆ ಮಾಡಲು ಮುಂದಾಗಿದೆ. ಅದರ ಲಿಂಕ್‌ ಕೂಡಾ ಇಲ್ಲಿದೆ.

ವಾರದ ನಂತರ ಮಳೆ ಕಡಿಮೆಯಾಗುತ್ತದೆ ಎನ್ನುವ ಹವಾಮಾನ ಮಾಹಿತಿಯಿಂದ ಔಷಧಿ ಸಿಂಪಡಣೆಗೆ ಸಿದ್ಧತೆ ನಡೆಸಿದ್ದ ಅಡಿಕೆ ಬೆಳೆಗಾರರಿಗೆ ಮತ್ತೆ ನಿರಾಸೆ ಕಾದಿದೆ. ಇನ್ನೂ ಒಂದು ವಾರಗಳ ಕಾಲ ಮಳೆ ಇದೆ ಎನ್ನುವ ಹವಾಮಾನ ಮಾಹಿತಿಯು ಮತ್ತಷ್ಟು ಕಂಗೆಡಿಸಿದೆ. ಹೀಗಾಗಿ ಈಗ ಮಳೆ ಇರುವಾಗಲೂ ಔಷಧಿ ಸಿಂಪಡಣೆ ಮಾಡಬಹುದಾ? ಎನ್ನುವ ಬಗ್ಗೆ ಕೃಷಿ ಗುಂಪಿನಲ್ಲಿ ಚರ್ಚೆ ನಡೆಯುತ್ತಿದೆ. ಕೆಲವು ಕಡೆ ಬೋರ್ಡೋ ಬದಲಾಗಿ ಮೆಟಲಾಕ್ಸಿಲ್‌ ಸಿಂಪಡಣೆ ಮಾಡಿ ಮಳೆ ಕಡಿಮೆಯಾದ ಬಳಿಕ ಬೋರ್ಡೋ ಸಿಂಪಡಣೆಯ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಯಾವುದಕ್ಕೂ ಮಳೆ ಕಡಿಮೆಯಾಗಬೇಕಲ್ಲ ಎನ್ನುವುದೇ ಎಲ್ಲರ ಅಭಿಪ್ರಾಯದ ನಡುವೆ, ಪೈಬರ್‌ ದೋಟಿಯ ಮೂಲಕ ಔಷಧಿ ಸಿಂಪಡಿಸುವ ಬಗ್ಗೆ ಕೃಷಿಕರೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮಳೆ ಬಿಟ್ಟು 20-25 ನಿಮಿಷದಲ್ಲಿ ದೋಟಿಯ ಮೂಲಕ ಔಷಧಿ ಸಿಂಪಡಣೆ ಮಾಡಬಹುದಾಗಿದೆ, ಗಾಳಿಯ ಸಂಚಾರ ಇದ್ದರೆ ಅಡಿಕೆ ಗೊನೆ ಈ ಸಮಯದಲ್ಲಿ ಒಣಗುತ್ತದೆ. ತಕ್ಷಣವೇ ದೋಟಿಯಲ್ಲಿ ಔಷಧಿ ಸಿಂಪಡಿಸಿ ರೋಗವನ್ನು ಹರಡದಂತೆ ಕ್ರಮ ಕೈಗೊಳ್ಳಬಹುದು. ಆದರೆ, ಇಂತಹ ಹೊತ್ತಲ್ಲಿ ಔಷಧಿಯನ್ನು ಸ್ವಲ್ಪ ಹೆಚ್ಚು ಕಾಲ ಸಿಂಪಡಿಸಬೇಕು ಹಾಗೂ ಔಷಧಿ ಬಿಟ್ಟ ಬಳಿಕ ಕನಿಷ್ಟ 5-10 ನಿಮಿಷ ಮಳೆ ಬಾರದೇ ಇದ್ದರೆ ಉತ್ತಮ, ಈ ಅಭಿಪ್ರಾಯವನ್ನು ಹಂಚಿಕೊಂಡವರು ಕೃಷಿಕ ದೇವಿಪ್ರಸಾದ್‌ ಪುಣಚ. ಇಂತಹ ಉಪಾಯಗಳು ಇದ್ದರೆ ನೀವೂ ಹಂಚಿಕೊಂಡರೆ ಇತರ ಕೃಷಿಕರಿಗೂ ಅನುಕೂಲ. ನಮ್ಮಗೂ ವ್ಯಾಟ್ಸಪ್‌ ಮೂಲಕ ಕಳುಹಿಸಬಹುದು, ಅಥವಾ ಕೃಷಿ ಗುಂಪುಗಳಲ್ಲಿ ಹಂಚಿಕೊಳ್ಳಿ. ನಮ್ಮ ವ್ಯಾಟ್ಸಪ್‌ ಸಂಖ್ಯೆ – 9449125447 

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್‌ ಮೂಲಕ  ಸಮೀಕ್ಷೆ ಮಾಡಲು ಮುಂದಾಗಿದೆ ಅದರ ಲಿಂಕ್‌ ಇಲ್ಲಿದೆ. ಕ್ಲಿಕ್‌ ಮಾಡಿ ನಿಮ್ಮ ಅಭಿಪ್ರಾಯ ಹಾಗೂ ಮಾಹಿತಿ ದಾಖಲಿಸಿ.    …… ಮುಂದೆ ಓದಿ……

ಈ ಫೋಟೊದ ಮೇಲೆ ಕ್ಲಿಕ್‌ ಮಾಡಿ ಅಭಿಪ್ರಾಯ ದಾಖಲಿಸಬಹುದು : 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

16 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

16 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

17 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago