Advertisement
MIRROR FOCUS

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!

Share

ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ ಇರುವ ಬಗ್ಗೆ ಮಾತನಾಡುತ್ತಿದ್ದರೆ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆಯೂ ಅಡಿಕೆ ಬೆಳೆಗಾರರು ಕೊಳೆರೋಗದ ಬಗ್ಗೆ ಮಾತನಾಡುತ್ತಿದ್ದಾರೆ. ಮಲೆನಾಡು-ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾಗುತ್ತಿಲ್ಲ. ಹೀಗಾಗಿ ಕೊಳೆರೋಗವೂ ಹೆಚ್ಚಾಗುವ ಆತಂಕ ಇದೆ. ಮಳೆಯ ಮಧ್ಯೆಯೇ ಇಂದು ಕೆಲವು ಕಡೆ, ಔಷಧಿ ಸಿಂಪಡಣೆ ಮಾಡುವ ಬಗ್ಗೆ ಕೃಷಿಕರು ಮಾಹಿತಿ ಹಂಚಿಕೊಂಡಿದ್ದಾರೆ. ಅಡಿಕೆ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್‌  ಆನ್‌ ಲೈನ್‌ ಮೂಲಕ ಸಮೀಕ್ಷೆ ಮಾಡಲು ಮುಂದಾಗಿದೆ. ಅದರ ಲಿಂಕ್‌ ಕೂಡಾ ಇಲ್ಲಿದೆ.

ವಾರದ ನಂತರ ಮಳೆ ಕಡಿಮೆಯಾಗುತ್ತದೆ ಎನ್ನುವ ಹವಾಮಾನ ಮಾಹಿತಿಯಿಂದ ಔಷಧಿ ಸಿಂಪಡಣೆಗೆ ಸಿದ್ಧತೆ ನಡೆಸಿದ್ದ ಅಡಿಕೆ ಬೆಳೆಗಾರರಿಗೆ ಮತ್ತೆ ನಿರಾಸೆ ಕಾದಿದೆ. ಇನ್ನೂ ಒಂದು ವಾರಗಳ ಕಾಲ ಮಳೆ ಇದೆ ಎನ್ನುವ ಹವಾಮಾನ ಮಾಹಿತಿಯು ಮತ್ತಷ್ಟು ಕಂಗೆಡಿಸಿದೆ. ಹೀಗಾಗಿ ಈಗ ಮಳೆ ಇರುವಾಗಲೂ ಔಷಧಿ ಸಿಂಪಡಣೆ ಮಾಡಬಹುದಾ? ಎನ್ನುವ ಬಗ್ಗೆ ಕೃಷಿ ಗುಂಪಿನಲ್ಲಿ ಚರ್ಚೆ ನಡೆಯುತ್ತಿದೆ. ಕೆಲವು ಕಡೆ ಬೋರ್ಡೋ ಬದಲಾಗಿ ಮೆಟಲಾಕ್ಸಿಲ್‌ ಸಿಂಪಡಣೆ ಮಾಡಿ ಮಳೆ ಕಡಿಮೆಯಾದ ಬಳಿಕ ಬೋರ್ಡೋ ಸಿಂಪಡಣೆಯ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಯಾವುದಕ್ಕೂ ಮಳೆ ಕಡಿಮೆಯಾಗಬೇಕಲ್ಲ ಎನ್ನುವುದೇ ಎಲ್ಲರ ಅಭಿಪ್ರಾಯದ ನಡುವೆ, ಪೈಬರ್‌ ದೋಟಿಯ ಮೂಲಕ ಔಷಧಿ ಸಿಂಪಡಿಸುವ ಬಗ್ಗೆ ಕೃಷಿಕರೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮಳೆ ಬಿಟ್ಟು 20-25 ನಿಮಿಷದಲ್ಲಿ ದೋಟಿಯ ಮೂಲಕ ಔಷಧಿ ಸಿಂಪಡಣೆ ಮಾಡಬಹುದಾಗಿದೆ, ಗಾಳಿಯ ಸಂಚಾರ ಇದ್ದರೆ ಅಡಿಕೆ ಗೊನೆ ಈ ಸಮಯದಲ್ಲಿ ಒಣಗುತ್ತದೆ. ತಕ್ಷಣವೇ ದೋಟಿಯಲ್ಲಿ ಔಷಧಿ ಸಿಂಪಡಿಸಿ ರೋಗವನ್ನು ಹರಡದಂತೆ ಕ್ರಮ ಕೈಗೊಳ್ಳಬಹುದು. ಆದರೆ, ಇಂತಹ ಹೊತ್ತಲ್ಲಿ ಔಷಧಿಯನ್ನು ಸ್ವಲ್ಪ ಹೆಚ್ಚು ಕಾಲ ಸಿಂಪಡಿಸಬೇಕು ಹಾಗೂ ಔಷಧಿ ಬಿಟ್ಟ ಬಳಿಕ ಕನಿಷ್ಟ 5-10 ನಿಮಿಷ ಮಳೆ ಬಾರದೇ ಇದ್ದರೆ ಉತ್ತಮ, ಈ ಅಭಿಪ್ರಾಯವನ್ನು ಹಂಚಿಕೊಂಡವರು ಕೃಷಿಕ ದೇವಿಪ್ರಸಾದ್‌ ಪುಣಚ. ಇಂತಹ ಉಪಾಯಗಳು ಇದ್ದರೆ ನೀವೂ ಹಂಚಿಕೊಂಡರೆ ಇತರ ಕೃಷಿಕರಿಗೂ ಅನುಕೂಲ. ನಮ್ಮಗೂ ವ್ಯಾಟ್ಸಪ್‌ ಮೂಲಕ ಕಳುಹಿಸಬಹುದು, ಅಥವಾ ಕೃಷಿ ಗುಂಪುಗಳಲ್ಲಿ ಹಂಚಿಕೊಳ್ಳಿ. ನಮ್ಮ ವ್ಯಾಟ್ಸಪ್‌ ಸಂಖ್ಯೆ – 9449125447 

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್‌ ಮೂಲಕ  ಸಮೀಕ್ಷೆ ಮಾಡಲು ಮುಂದಾಗಿದೆ ಅದರ ಲಿಂಕ್‌ ಇಲ್ಲಿದೆ. ಕ್ಲಿಕ್‌ ಮಾಡಿ ನಿಮ್ಮ ಅಭಿಪ್ರಾಯ ಹಾಗೂ ಮಾಹಿತಿ ದಾಖಲಿಸಿ.    …… ಮುಂದೆ ಓದಿ……

ಈ ಫೋಟೊದ ಮೇಲೆ ಕ್ಲಿಕ್‌ ಮಾಡಿ ಅಭಿಪ್ರಾಯ ದಾಖಲಿಸಬಹುದು : 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago