Advertisement
MIRROR FOCUS

ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!

Share

ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ ಇರುವ ಬಗ್ಗೆ ಮಾತನಾಡುತ್ತಿದ್ದರೆ, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆಯೂ ಅಡಿಕೆ ಬೆಳೆಗಾರರು ಕೊಳೆರೋಗದ ಬಗ್ಗೆ ಮಾತನಾಡುತ್ತಿದ್ದಾರೆ. ಮಲೆನಾಡು-ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾಗುತ್ತಿಲ್ಲ. ಹೀಗಾಗಿ ಕೊಳೆರೋಗವೂ ಹೆಚ್ಚಾಗುವ ಆತಂಕ ಇದೆ. ಮಳೆಯ ಮಧ್ಯೆಯೇ ಇಂದು ಕೆಲವು ಕಡೆ, ಔಷಧಿ ಸಿಂಪಡಣೆ ಮಾಡುವ ಬಗ್ಗೆ ಕೃಷಿಕರು ಮಾಹಿತಿ ಹಂಚಿಕೊಂಡಿದ್ದಾರೆ. ಅಡಿಕೆ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್‌  ಆನ್‌ ಲೈನ್‌ ಮೂಲಕ ಸಮೀಕ್ಷೆ ಮಾಡಲು ಮುಂದಾಗಿದೆ. ಅದರ ಲಿಂಕ್‌ ಕೂಡಾ ಇಲ್ಲಿದೆ.

ವಾರದ ನಂತರ ಮಳೆ ಕಡಿಮೆಯಾಗುತ್ತದೆ ಎನ್ನುವ ಹವಾಮಾನ ಮಾಹಿತಿಯಿಂದ ಔಷಧಿ ಸಿಂಪಡಣೆಗೆ ಸಿದ್ಧತೆ ನಡೆಸಿದ್ದ ಅಡಿಕೆ ಬೆಳೆಗಾರರಿಗೆ ಮತ್ತೆ ನಿರಾಸೆ ಕಾದಿದೆ. ಇನ್ನೂ ಒಂದು ವಾರಗಳ ಕಾಲ ಮಳೆ ಇದೆ ಎನ್ನುವ ಹವಾಮಾನ ಮಾಹಿತಿಯು ಮತ್ತಷ್ಟು ಕಂಗೆಡಿಸಿದೆ. ಹೀಗಾಗಿ ಈಗ ಮಳೆ ಇರುವಾಗಲೂ ಔಷಧಿ ಸಿಂಪಡಣೆ ಮಾಡಬಹುದಾ? ಎನ್ನುವ ಬಗ್ಗೆ ಕೃಷಿ ಗುಂಪಿನಲ್ಲಿ ಚರ್ಚೆ ನಡೆಯುತ್ತಿದೆ. ಕೆಲವು ಕಡೆ ಬೋರ್ಡೋ ಬದಲಾಗಿ ಮೆಟಲಾಕ್ಸಿಲ್‌ ಸಿಂಪಡಣೆ ಮಾಡಿ ಮಳೆ ಕಡಿಮೆಯಾದ ಬಳಿಕ ಬೋರ್ಡೋ ಸಿಂಪಡಣೆಯ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಯಾವುದಕ್ಕೂ ಮಳೆ ಕಡಿಮೆಯಾಗಬೇಕಲ್ಲ ಎನ್ನುವುದೇ ಎಲ್ಲರ ಅಭಿಪ್ರಾಯದ ನಡುವೆ, ಪೈಬರ್‌ ದೋಟಿಯ ಮೂಲಕ ಔಷಧಿ ಸಿಂಪಡಿಸುವ ಬಗ್ಗೆ ಕೃಷಿಕರೊಬ್ಬರು ಅಭಿಪ್ರಾಯ ಹಂಚಿಕೊಂಡಿದ್ದಾರೆ.

Advertisement

ಮಳೆ ಬಿಟ್ಟು 20-25 ನಿಮಿಷದಲ್ಲಿ ದೋಟಿಯ ಮೂಲಕ ಔಷಧಿ ಸಿಂಪಡಣೆ ಮಾಡಬಹುದಾಗಿದೆ, ಗಾಳಿಯ ಸಂಚಾರ ಇದ್ದರೆ ಅಡಿಕೆ ಗೊನೆ ಈ ಸಮಯದಲ್ಲಿ ಒಣಗುತ್ತದೆ. ತಕ್ಷಣವೇ ದೋಟಿಯಲ್ಲಿ ಔಷಧಿ ಸಿಂಪಡಿಸಿ ರೋಗವನ್ನು ಹರಡದಂತೆ ಕ್ರಮ ಕೈಗೊಳ್ಳಬಹುದು. ಆದರೆ, ಇಂತಹ ಹೊತ್ತಲ್ಲಿ ಔಷಧಿಯನ್ನು ಸ್ವಲ್ಪ ಹೆಚ್ಚು ಕಾಲ ಸಿಂಪಡಿಸಬೇಕು ಹಾಗೂ ಔಷಧಿ ಬಿಟ್ಟ ಬಳಿಕ ಕನಿಷ್ಟ 5-10 ನಿಮಿಷ ಮಳೆ ಬಾರದೇ ಇದ್ದರೆ ಉತ್ತಮ, ಈ ಅಭಿಪ್ರಾಯವನ್ನು ಹಂಚಿಕೊಂಡವರು ಕೃಷಿಕ ದೇವಿಪ್ರಸಾದ್‌ ಪುಣಚ. ಇಂತಹ ಉಪಾಯಗಳು ಇದ್ದರೆ ನೀವೂ ಹಂಚಿಕೊಂಡರೆ ಇತರ ಕೃಷಿಕರಿಗೂ ಅನುಕೂಲ. ನಮ್ಮಗೂ ವ್ಯಾಟ್ಸಪ್‌ ಮೂಲಕ ಕಳುಹಿಸಬಹುದು, ಅಥವಾ ಕೃಷಿ ಗುಂಪುಗಳಲ್ಲಿ ಹಂಚಿಕೊಳ್ಳಿ. ನಮ್ಮ ವ್ಯಾಟ್ಸಪ್‌ ಸಂಖ್ಯೆ – 9449125447 

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್‌ ಮಿರರ್‌ ಮೂಲಕ  ಸಮೀಕ್ಷೆ ಮಾಡಲು ಮುಂದಾಗಿದೆ ಅದರ ಲಿಂಕ್‌ ಇಲ್ಲಿದೆ. ಕ್ಲಿಕ್‌ ಮಾಡಿ ನಿಮ್ಮ ಅಭಿಪ್ರಾಯ ಹಾಗೂ ಮಾಹಿತಿ ದಾಖಲಿಸಿ.    …… ಮುಂದೆ ಓದಿ……

Advertisement

ಈ ಫೋಟೊದ ಮೇಲೆ ಕ್ಲಿಕ್‌ ಮಾಡಿ ಅಭಿಪ್ರಾಯ ದಾಖಲಿಸಬಹುದು : 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

8 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

9 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago