ಅಡಿಕೆ ಬೆಳೆ ವಿಸ್ತರಣೆ | ಚರ್ಚೆಯ ನಡುವೆ ಆತಂಕ ವ್ಯಕ್ತಪಡಿಸಿದ ಸಚಿವರು |

December 22, 2022
10:10 AM

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಆತಂಕ ವ್ಯಕ್ತಪಡಿಸಿದರು. ಅಡಿಕೆ ಬೆಳೆ ಪ್ರದೇಶವನ್ನು ಗಮನಿಸಿದರೆ ಮುಂದೊಂದು ದಿನ ಬೆಲೆ ಕುಸಿದು ಬೀಳುವ ಆತಂಕವಿದೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದರು.

ರಾಜ್ಯದಲ್ಲಿ ಅಡಿಕೆಯ ಸದ್ಯದ ಮಾರುಕಟ್ಟೆಯ ಧಾರಣೆಯ ಕಾರಣದಿಂದ ಅಡಿಕೆ ಬೆಳೆ ವ್ಯಾಪಕವಾಗಿ ವಿಸ್ತರಣೆಯಾಗುತ್ತಿದೆ. ಆದರೆ ಇದು ಬಹು ಅಪಾಯಕಾರಿ ಎನ್ನುವುದನ್ನು ಈಗಾಗಲೇ ಹಲವಾರು ಮಂದಿ ಸೂಕ್ಷ್ಮವಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಕಂಡುಬಂದಿರುವ ಅಡಿಕೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಬಾರದೆ ಕೃಷಿಕರು ಕಂಗಾಲಾಗಿದ್ದಾರೆ. ಈ ನಡುವೆಯೇ ಅಡಿಕೆಯ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆಗೆ ವಿಜ್ಞಾನಿಗಳಿಗೂ ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ.  ಹೀಗಾಗಿ ಬೆಳೆ ವಿಸ್ತರಣೆಯಾದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳೂ ಹೆಚ್ಚಾಗಲಿದೆ ಎನ್ನುವುದನ್ನೂ ಹಲವು ತಜ್ಞರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಅಡಿಕೆಗೆ ಯಥೇಚ್ಛವಾಗಿ ನೀರು ಬೇಕಾಗುತ್ತದೆ, ಮಲೆನಾಡು ಹೊರತುಪಡಿಸಿ ಇತರ ಕಡೆಗಳಲ್ಲು ಅಡಿಕೆ ಬೆಳೆ ವ್ಯಾಪಕ ವಿಸ್ತರಣೆಯು ಅಂತರ್ಜಲ ಕೊರತೆಗೂ ಕಾರಣವಾಗುವುದು ಅಲ್ಲದೆ ಹಲವು ಅಧ್ಯಯನಗಳೂ ಅಂತಹ ಕಡೆಗಳಲ್ಲಿ ಆಗಬೇಕಾಗಿದೆ.

ಪಾರಂಪರಿಕವಾಗಿ ಅಡಿಕೆ ಬೆಳೆಯುವ ಪ್ರದೇಶಗಳಾದ ದಕ್ಷಿಣ ಕನ್ನಡ, ಕಾಸರಗೋಡು, ಮಲೆನಾಡು ಭಾಗಗಳಾದ ಉತ್ತರಕನ್ನಡ , ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಸದ್ಯ ಪರ್ಯಾಯ ಬೆಳೆ ಬಗ್ಗೆ ಮಾತನಾಡುವಾಗ  ಆಹಾರ ಬೆಳೆ ಬೆಳೆಯಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇಲ್ಲಿ ತೆಂಗು, ಅಡಿಕೆ, ಏಲಕ್ಕಿ, ಕಾಳು ಮೆಣಸು ಜೊತೆಯಾಗಿದ್ದರೂ ಆಹಾರ ಬೆಳೆ ಈಗ ಕಷ್ಟವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror