The Rural Mirror ಫಾಲೋಅಪ್

ಅಡಿಕೆ ಬೆಳೆ ವಿಸ್ತರಣೆ | ಚರ್ಚೆಯ ನಡುವೆ ಆತಂಕ ವ್ಯಕ್ತಪಡಿಸಿದ ಸಚಿವರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಆತಂಕ ವ್ಯಕ್ತಪಡಿಸಿದರು. ಅಡಿಕೆ ಬೆಳೆ ಪ್ರದೇಶವನ್ನು ಗಮನಿಸಿದರೆ ಮುಂದೊಂದು ದಿನ ಬೆಲೆ ಕುಸಿದು ಬೀಳುವ ಆತಂಕವಿದೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದರು.

Advertisement
Advertisement

ರಾಜ್ಯದಲ್ಲಿ ಅಡಿಕೆಯ ಸದ್ಯದ ಮಾರುಕಟ್ಟೆಯ ಧಾರಣೆಯ ಕಾರಣದಿಂದ ಅಡಿಕೆ ಬೆಳೆ ವ್ಯಾಪಕವಾಗಿ ವಿಸ್ತರಣೆಯಾಗುತ್ತಿದೆ. ಆದರೆ ಇದು ಬಹು ಅಪಾಯಕಾರಿ ಎನ್ನುವುದನ್ನು ಈಗಾಗಲೇ ಹಲವಾರು ಮಂದಿ ಸೂಕ್ಷ್ಮವಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಕಂಡುಬಂದಿರುವ ಅಡಿಕೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಬಾರದೆ ಕೃಷಿಕರು ಕಂಗಾಲಾಗಿದ್ದಾರೆ. ಈ ನಡುವೆಯೇ ಅಡಿಕೆಯ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆಗೆ ವಿಜ್ಞಾನಿಗಳಿಗೂ ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ.  ಹೀಗಾಗಿ ಬೆಳೆ ವಿಸ್ತರಣೆಯಾದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳೂ ಹೆಚ್ಚಾಗಲಿದೆ ಎನ್ನುವುದನ್ನೂ ಹಲವು ತಜ್ಞರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಅಡಿಕೆಗೆ ಯಥೇಚ್ಛವಾಗಿ ನೀರು ಬೇಕಾಗುತ್ತದೆ, ಮಲೆನಾಡು ಹೊರತುಪಡಿಸಿ ಇತರ ಕಡೆಗಳಲ್ಲು ಅಡಿಕೆ ಬೆಳೆ ವ್ಯಾಪಕ ವಿಸ್ತರಣೆಯು ಅಂತರ್ಜಲ ಕೊರತೆಗೂ ಕಾರಣವಾಗುವುದು ಅಲ್ಲದೆ ಹಲವು ಅಧ್ಯಯನಗಳೂ ಅಂತಹ ಕಡೆಗಳಲ್ಲಿ ಆಗಬೇಕಾಗಿದೆ.

ಪಾರಂಪರಿಕವಾಗಿ ಅಡಿಕೆ ಬೆಳೆಯುವ ಪ್ರದೇಶಗಳಾದ ದಕ್ಷಿಣ ಕನ್ನಡ, ಕಾಸರಗೋಡು, ಮಲೆನಾಡು ಭಾಗಗಳಾದ ಉತ್ತರಕನ್ನಡ , ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಸದ್ಯ ಪರ್ಯಾಯ ಬೆಳೆ ಬಗ್ಗೆ ಮಾತನಾಡುವಾಗ  ಆಹಾರ ಬೆಳೆ ಬೆಳೆಯಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇಲ್ಲಿ ತೆಂಗು, ಅಡಿಕೆ, ಏಲಕ್ಕಿ, ಕಾಳು ಮೆಣಸು ಜೊತೆಯಾಗಿದ್ದರೂ ಆಹಾರ ಬೆಳೆ ಈಗ ಕಷ್ಟವಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

8 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

10 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

11 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

12 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

13 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago