Advertisement
The Rural Mirror ಫಾಲೋಅಪ್

ಅಡಿಕೆ ಬೆಳೆ ವಿಸ್ತರಣೆ | ಚರ್ಚೆಯ ನಡುವೆ ಆತಂಕ ವ್ಯಕ್ತಪಡಿಸಿದ ಸಚಿವರು |

Share

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಆತಂಕ ವ್ಯಕ್ತಪಡಿಸಿದರು. ಅಡಿಕೆ ಬೆಳೆ ಪ್ರದೇಶವನ್ನು ಗಮನಿಸಿದರೆ ಮುಂದೊಂದು ದಿನ ಬೆಲೆ ಕುಸಿದು ಬೀಳುವ ಆತಂಕವಿದೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದರು.

ರಾಜ್ಯದಲ್ಲಿ ಅಡಿಕೆಯ ಸದ್ಯದ ಮಾರುಕಟ್ಟೆಯ ಧಾರಣೆಯ ಕಾರಣದಿಂದ ಅಡಿಕೆ ಬೆಳೆ ವ್ಯಾಪಕವಾಗಿ ವಿಸ್ತರಣೆಯಾಗುತ್ತಿದೆ. ಆದರೆ ಇದು ಬಹು ಅಪಾಯಕಾರಿ ಎನ್ನುವುದನ್ನು ಈಗಾಗಲೇ ಹಲವಾರು ಮಂದಿ ಸೂಕ್ಷ್ಮವಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಕಂಡುಬಂದಿರುವ ಅಡಿಕೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಬಾರದೆ ಕೃಷಿಕರು ಕಂಗಾಲಾಗಿದ್ದಾರೆ. ಈ ನಡುವೆಯೇ ಅಡಿಕೆಯ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆಗೆ ವಿಜ್ಞಾನಿಗಳಿಗೂ ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ.  ಹೀಗಾಗಿ ಬೆಳೆ ವಿಸ್ತರಣೆಯಾದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳೂ ಹೆಚ್ಚಾಗಲಿದೆ ಎನ್ನುವುದನ್ನೂ ಹಲವು ತಜ್ಞರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಅಡಿಕೆಗೆ ಯಥೇಚ್ಛವಾಗಿ ನೀರು ಬೇಕಾಗುತ್ತದೆ, ಮಲೆನಾಡು ಹೊರತುಪಡಿಸಿ ಇತರ ಕಡೆಗಳಲ್ಲು ಅಡಿಕೆ ಬೆಳೆ ವ್ಯಾಪಕ ವಿಸ್ತರಣೆಯು ಅಂತರ್ಜಲ ಕೊರತೆಗೂ ಕಾರಣವಾಗುವುದು ಅಲ್ಲದೆ ಹಲವು ಅಧ್ಯಯನಗಳೂ ಅಂತಹ ಕಡೆಗಳಲ್ಲಿ ಆಗಬೇಕಾಗಿದೆ.

ಪಾರಂಪರಿಕವಾಗಿ ಅಡಿಕೆ ಬೆಳೆಯುವ ಪ್ರದೇಶಗಳಾದ ದಕ್ಷಿಣ ಕನ್ನಡ, ಕಾಸರಗೋಡು, ಮಲೆನಾಡು ಭಾಗಗಳಾದ ಉತ್ತರಕನ್ನಡ , ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಸದ್ಯ ಪರ್ಯಾಯ ಬೆಳೆ ಬಗ್ಗೆ ಮಾತನಾಡುವಾಗ  ಆಹಾರ ಬೆಳೆ ಬೆಳೆಯಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇಲ್ಲಿ ತೆಂಗು, ಅಡಿಕೆ, ಏಲಕ್ಕಿ, ಕಾಳು ಮೆಣಸು ಜೊತೆಯಾಗಿದ್ದರೂ ಆಹಾರ ಬೆಳೆ ಈಗ ಕಷ್ಟವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

4 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

6 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

6 hours ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

6 hours ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

6 hours ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

20 hours ago