Advertisement
The Rural Mirror ಫಾಲೋಅಪ್

ಅಡಿಕೆ ಬೆಳೆ ವಿಸ್ತರಣೆ | ಚರ್ಚೆಯ ನಡುವೆ ಆತಂಕ ವ್ಯಕ್ತಪಡಿಸಿದ ಸಚಿವರು |

Share

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಆತಂಕ ವ್ಯಕ್ತಪಡಿಸಿದರು. ಅಡಿಕೆ ಬೆಳೆ ಪ್ರದೇಶವನ್ನು ಗಮನಿಸಿದರೆ ಮುಂದೊಂದು ದಿನ ಬೆಲೆ ಕುಸಿದು ಬೀಳುವ ಆತಂಕವಿದೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದರು.

ರಾಜ್ಯದಲ್ಲಿ ಅಡಿಕೆಯ ಸದ್ಯದ ಮಾರುಕಟ್ಟೆಯ ಧಾರಣೆಯ ಕಾರಣದಿಂದ ಅಡಿಕೆ ಬೆಳೆ ವ್ಯಾಪಕವಾಗಿ ವಿಸ್ತರಣೆಯಾಗುತ್ತಿದೆ. ಆದರೆ ಇದು ಬಹು ಅಪಾಯಕಾರಿ ಎನ್ನುವುದನ್ನು ಈಗಾಗಲೇ ಹಲವಾರು ಮಂದಿ ಸೂಕ್ಷ್ಮವಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಕಂಡುಬಂದಿರುವ ಅಡಿಕೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಬಾರದೆ ಕೃಷಿಕರು ಕಂಗಾಲಾಗಿದ್ದಾರೆ. ಈ ನಡುವೆಯೇ ಅಡಿಕೆಯ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆಗೆ ವಿಜ್ಞಾನಿಗಳಿಗೂ ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ.  ಹೀಗಾಗಿ ಬೆಳೆ ವಿಸ್ತರಣೆಯಾದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳೂ ಹೆಚ್ಚಾಗಲಿದೆ ಎನ್ನುವುದನ್ನೂ ಹಲವು ತಜ್ಞರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಅಡಿಕೆಗೆ ಯಥೇಚ್ಛವಾಗಿ ನೀರು ಬೇಕಾಗುತ್ತದೆ, ಮಲೆನಾಡು ಹೊರತುಪಡಿಸಿ ಇತರ ಕಡೆಗಳಲ್ಲು ಅಡಿಕೆ ಬೆಳೆ ವ್ಯಾಪಕ ವಿಸ್ತರಣೆಯು ಅಂತರ್ಜಲ ಕೊರತೆಗೂ ಕಾರಣವಾಗುವುದು ಅಲ್ಲದೆ ಹಲವು ಅಧ್ಯಯನಗಳೂ ಅಂತಹ ಕಡೆಗಳಲ್ಲಿ ಆಗಬೇಕಾಗಿದೆ.

ಪಾರಂಪರಿಕವಾಗಿ ಅಡಿಕೆ ಬೆಳೆಯುವ ಪ್ರದೇಶಗಳಾದ ದಕ್ಷಿಣ ಕನ್ನಡ, ಕಾಸರಗೋಡು, ಮಲೆನಾಡು ಭಾಗಗಳಾದ ಉತ್ತರಕನ್ನಡ , ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಸದ್ಯ ಪರ್ಯಾಯ ಬೆಳೆ ಬಗ್ಗೆ ಮಾತನಾಡುವಾಗ  ಆಹಾರ ಬೆಳೆ ಬೆಳೆಯಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇಲ್ಲಿ ತೆಂಗು, ಅಡಿಕೆ, ಏಲಕ್ಕಿ, ಕಾಳು ಮೆಣಸು ಜೊತೆಯಾಗಿದ್ದರೂ ಆಹಾರ ಬೆಳೆ ಈಗ ಕಷ್ಟವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

2 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

13 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

13 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

19 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

21 hours ago