ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಆತಂಕ ವ್ಯಕ್ತಪಡಿಸಿದರು. ಅಡಿಕೆ ಬೆಳೆ ಪ್ರದೇಶವನ್ನು ಗಮನಿಸಿದರೆ ಮುಂದೊಂದು ದಿನ ಬೆಲೆ ಕುಸಿದು ಬೀಳುವ ಆತಂಕವಿದೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದರು.
ರಾಜ್ಯದಲ್ಲಿ ಅಡಿಕೆಯ ಸದ್ಯದ ಮಾರುಕಟ್ಟೆಯ ಧಾರಣೆಯ ಕಾರಣದಿಂದ ಅಡಿಕೆ ಬೆಳೆ ವ್ಯಾಪಕವಾಗಿ ವಿಸ್ತರಣೆಯಾಗುತ್ತಿದೆ. ಆದರೆ ಇದು ಬಹು ಅಪಾಯಕಾರಿ ಎನ್ನುವುದನ್ನು ಈಗಾಗಲೇ ಹಲವಾರು ಮಂದಿ ಸೂಕ್ಷ್ಮವಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಕಂಡುಬಂದಿರುವ ಅಡಿಕೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಬಾರದೆ ಕೃಷಿಕರು ಕಂಗಾಲಾಗಿದ್ದಾರೆ. ಈ ನಡುವೆಯೇ ಅಡಿಕೆಯ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆಗೆ ವಿಜ್ಞಾನಿಗಳಿಗೂ ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ. ಹೀಗಾಗಿ ಬೆಳೆ ವಿಸ್ತರಣೆಯಾದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳೂ ಹೆಚ್ಚಾಗಲಿದೆ ಎನ್ನುವುದನ್ನೂ ಹಲವು ತಜ್ಞರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಅಡಿಕೆಗೆ ಯಥೇಚ್ಛವಾಗಿ ನೀರು ಬೇಕಾಗುತ್ತದೆ, ಮಲೆನಾಡು ಹೊರತುಪಡಿಸಿ ಇತರ ಕಡೆಗಳಲ್ಲು ಅಡಿಕೆ ಬೆಳೆ ವ್ಯಾಪಕ ವಿಸ್ತರಣೆಯು ಅಂತರ್ಜಲ ಕೊರತೆಗೂ ಕಾರಣವಾಗುವುದು ಅಲ್ಲದೆ ಹಲವು ಅಧ್ಯಯನಗಳೂ ಅಂತಹ ಕಡೆಗಳಲ್ಲಿ ಆಗಬೇಕಾಗಿದೆ.
ಪಾರಂಪರಿಕವಾಗಿ ಅಡಿಕೆ ಬೆಳೆಯುವ ಪ್ರದೇಶಗಳಾದ ದಕ್ಷಿಣ ಕನ್ನಡ, ಕಾಸರಗೋಡು, ಮಲೆನಾಡು ಭಾಗಗಳಾದ ಉತ್ತರಕನ್ನಡ , ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಸದ್ಯ ಪರ್ಯಾಯ ಬೆಳೆ ಬಗ್ಗೆ ಮಾತನಾಡುವಾಗ ಆಹಾರ ಬೆಳೆ ಬೆಳೆಯಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇಲ್ಲಿ ತೆಂಗು, ಅಡಿಕೆ, ಏಲಕ್ಕಿ, ಕಾಳು ಮೆಣಸು ಜೊತೆಯಾಗಿದ್ದರೂ ಆಹಾರ ಬೆಳೆ ಈಗ ಕಷ್ಟವಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…