Advertisement
The Rural Mirror ಫಾಲೋಅಪ್

ಅಡಿಕೆ ಬೆಳೆ ವಿಸ್ತರಣೆ | ಚರ್ಚೆಯ ನಡುವೆ ಆತಂಕ ವ್ಯಕ್ತಪಡಿಸಿದ ಸಚಿವರು |

Share

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಆತಂಕ ವ್ಯಕ್ತಪಡಿಸಿದರು. ಅಡಿಕೆ ಬೆಳೆ ಪ್ರದೇಶವನ್ನು ಗಮನಿಸಿದರೆ ಮುಂದೊಂದು ದಿನ ಬೆಲೆ ಕುಸಿದು ಬೀಳುವ ಆತಂಕವಿದೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದರು.

ರಾಜ್ಯದಲ್ಲಿ ಅಡಿಕೆಯ ಸದ್ಯದ ಮಾರುಕಟ್ಟೆಯ ಧಾರಣೆಯ ಕಾರಣದಿಂದ ಅಡಿಕೆ ಬೆಳೆ ವ್ಯಾಪಕವಾಗಿ ವಿಸ್ತರಣೆಯಾಗುತ್ತಿದೆ. ಆದರೆ ಇದು ಬಹು ಅಪಾಯಕಾರಿ ಎನ್ನುವುದನ್ನು ಈಗಾಗಲೇ ಹಲವಾರು ಮಂದಿ ಸೂಕ್ಷ್ಮವಾಗಿ ಎಚ್ಚರಿಸಿದ್ದಾರೆ. ಈಗಾಗಲೇ ಕಂಡುಬಂದಿರುವ ಅಡಿಕೆ ಹಳದಿ ಎಲೆರೋಗ, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಬಾರದೆ ಕೃಷಿಕರು ಕಂಗಾಲಾಗಿದ್ದಾರೆ. ಈ ನಡುವೆಯೇ ಅಡಿಕೆಯ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಹಾಗೂ ಸಂಶೋಧನೆಗೆ ವಿಜ್ಞಾನಿಗಳಿಗೂ ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ.  ಹೀಗಾಗಿ ಬೆಳೆ ವಿಸ್ತರಣೆಯಾದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳೂ ಹೆಚ್ಚಾಗಲಿದೆ ಎನ್ನುವುದನ್ನೂ ಹಲವು ತಜ್ಞರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಅಡಿಕೆಗೆ ಯಥೇಚ್ಛವಾಗಿ ನೀರು ಬೇಕಾಗುತ್ತದೆ, ಮಲೆನಾಡು ಹೊರತುಪಡಿಸಿ ಇತರ ಕಡೆಗಳಲ್ಲು ಅಡಿಕೆ ಬೆಳೆ ವ್ಯಾಪಕ ವಿಸ್ತರಣೆಯು ಅಂತರ್ಜಲ ಕೊರತೆಗೂ ಕಾರಣವಾಗುವುದು ಅಲ್ಲದೆ ಹಲವು ಅಧ್ಯಯನಗಳೂ ಅಂತಹ ಕಡೆಗಳಲ್ಲಿ ಆಗಬೇಕಾಗಿದೆ.

ಪಾರಂಪರಿಕವಾಗಿ ಅಡಿಕೆ ಬೆಳೆಯುವ ಪ್ರದೇಶಗಳಾದ ದಕ್ಷಿಣ ಕನ್ನಡ, ಕಾಸರಗೋಡು, ಮಲೆನಾಡು ಭಾಗಗಳಾದ ಉತ್ತರಕನ್ನಡ , ಶಿವಮೊಗ್ಗ ಮೊದಲಾದ ಕಡೆಗಳಲ್ಲಿ ಸದ್ಯ ಪರ್ಯಾಯ ಬೆಳೆ ಬಗ್ಗೆ ಮಾತನಾಡುವಾಗ  ಆಹಾರ ಬೆಳೆ ಬೆಳೆಯಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇಲ್ಲಿ ತೆಂಗು, ಅಡಿಕೆ, ಏಲಕ್ಕಿ, ಕಾಳು ಮೆಣಸು ಜೊತೆಯಾಗಿದ್ದರೂ ಆಹಾರ ಬೆಳೆ ಈಗ ಕಷ್ಟವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

5 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

5 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

23 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago