Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ-ಎಲೆಚುಕ್ಕಿ ರೋಗ | ಕ್ಯಾಂಪ್ಕೋ ನೇತೃತ್ವದಲ್ಲಿ ಸಭೆ | ಕೃಷಿ ಪ್ರಮುಖರಿಂದ ಹಾಗೂ ವಿಜ್ಞಾನಿಗಳಿಂದ ಅಭಿಪ್ರಾಯ ಮಂಡನೆ |

Share

ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗಕ್ಕೆ ಸಂಬಂಧಿಸಿದಂತೆ ಕ್ಯಾಂಪ್ಕೋ ನೇತೃತ್ವದಲ್ಲಿ‌ ಎಆರ್‌ಡಿಎಫ್‌ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಕೃಷಿ ಪ್ರಮುಖರು ಹಾಗೂ ವಿಜ್ಞಾನಿಗಳ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿ ವಿಜ್ಞಾನಿಗಳು ಹಾಗೂ ಕೃಷಿ ಪ್ರಮುಖರು ವಿಷಯ ಮಂಡಿಸಿದರು.

ಅಡಿಕೆ ಮತ್ತು ಸಾಂಬಾರ ಮಂಡಳಿಯ ನಿರ್ದೇಶಕ ಡಾ.ಹೋಮಿ ಚೆರಿಯನ್‌ ಪ್ರಸ್ತಾವನೆಗೈದರು. ಬಳಿಕ ಅಡಿಕೆ ಹಳದಿ ಎಲೆರೋಗದ ಹಾಗೂ ಎಲೆಚುಕ್ಕಿ ರೋಗದ ಬಗ್ಗೆ ಸಿಪಿಸಿಆರ್‌ ಐ ವಿಜ್ಞಾನಿ ಡಾ. ವಿನಾಯಕ ಹೆಗಡೆ, ಎಆರ್‌ಡಿಎಫ್ ವಿಜ್ಞಾನಿ ಡಾ.ಕೇಶವ ಭಟ್‌, ISIRI ಯ ಡಾ.ನಂದಿನಿ ಎಂ ಘಂಟೆ, ಶಿವಮೊಗ್ಗ ವಿವಿಯ ಡಾ.ಗಂಗಾಧರ ನಾಯಕ್‌, ನಿಟ್ಟೆಯ ಇಂದ್ರಾಣಿ ಕರುಣಾಸಾಗರ್‌,  ವಿಷಯ ಮಂಡಿಸಿದರು. ಕೃಷಿಕರ ಪರವಾಗಿ ಬದನಾಜೆ ಶಂಕರ ಭಟ್‌, ಶೃಂಗೇರಿಯ  ಬಾಲಕೃಷ್ಣ ಅವರು ಮಾಹಿತಿ ಹಂಚಿಕೊಂಡರು. FSSAI ಯ ಡಾ ಐ ಕರುಣಾಸಾಗರ್‌ ಇದ್ದರು.

ವಿಜ್ಞಾನಿಗಳು ಅಡಿಕೆ ಹಳದಿ ಎಲೆರೋಗಕ್ಕೆ ಪೈಟೋಪ್ಲಾಸ್ಮಾ ಕಾರಣವಾಗಿದ್ದು ಇದಕ್ಕೆ ಸೂಕ್ತವಾದ ಔಷಧಿ ಇದುವರೆಗೂ ಪತ್ತೆಯಾಗಿಲ್ಲ. ಹೀಗಾಗಿ ರೋಗ ನಿರೋಧಕ ತಳಿ ಹಾಗೂ ಕೃಷಿ ನಿರ್ವಹಣೆಯೇ ಹೆಚ್ಚಿನ ಪರಿಹಾರ ನೀಡಬಲ್ಲುದು ಎಂದರು.

ಆದರೆ ISIRI ಯ ಡಾ.ನಂದಿನಿ ಎಂ ಘಂಟೆ ಅವರು ಫೈಟೋಪ್ಲಾಸ್ಮಾ ಮಾತ್ರಾ ಕಾರಣವಲ್ಲ ಎಂದರು. ಕೃಷಿಕರು ಹಾಗೂ ಇತರ ವಿಜ್ಞಾನಿಗಳು ರೋಗ ನಿಯಂತ್ರಣ ಹಾಗೂ ಹರಡುವಿಕೆ ಕಡಿಮೆ ಮಾಡಲು ಕೃಷಿ ನಿರ್ವಹಣೆ ಹಾಗೂ ಗೊಬ್ಬರ ನಿರ್ವಹಣೆಯೇ ಸೂಕ್ತ ಪರಿಹಾರ ಎಂದರು.

ಇಡೀ ಸಂವಾದವನ್ನು ಮುಕ್ತಾಯಗೊಳಿಸಿದ  ಅಡಿಕೆ ಮತ್ತು ಸಾಂಬಾರ ಮಂಡಳಿಯ ನಿರ್ದೇಶಕ ಡಾ.ಹೋಮಿ ಚೆರಿಯನ್‌ ಮಾತನಾಡಿ, ಅಡಿಕೆ ಹಳದಿ ಎಲೆರೋಗಕ್ಕೆ ರೋಗನಿರೋಧಕ ತಳಿಯೇ ಪರಿಹಾರವಾಗಿದೆ. ಅದು ಟಿಶ್ಯು ಕಲ್ಚರ್‌ ಮೂಲಕವೂ ಅಥವಾ ರೋಗನಿರೋಧಕ ತಳಿಗಳ ಅಭಿವೃದ್ಧಿಯ ಮೂಲಕವೂ ಆಗಬೇಕಿದೆ. ಇದಕ್ಕೆ ಅಗತ್ಯವಾದ ಕೆಲಸಗಳು ನಡೆಯುತ್ತದೆ. ಇದಕ್ಕಾಗಿ ಅಗತ್ಯ ನೆರವು ಸರ್ಕಾರ ಹಾಗೂ ಇತರೆಡೆಯಿಂದ ಲಭ್ಯವಾಗಲಿ, ವಿಜ್ಞಾನಿಗಳಿ ನಿರಂತರವಾಗಿ ಈ ಬಗ್ಗೆ ಕೆಲಸ ಮಾಡುತ್ತಾರೆ ಎಂದರು.

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಮಾತನಾಡಿ, ಅಡಿಕೆ ರೋಗ ನಿರ್ವಹಣೆಯ ಸಂದರ್ಭ ವಿಜ್ಞಾನಿಗಳ ನಡುವೆ ಸಂವಹನ ನಡೆಯಬೇಕಿದೆ,  ಸಮಯದ ಮಿತಿಯೊಳಗೆ ಕೆಲಸ ಮಾಡುವ ಅನಿವಾರ್ಯತೆ ಇದೆ ಎಲ್ಲರೂ ಜೊತೆಯಾಗಿ ಸಾಗಬೇಕಿದೆ ಎಂದರು. ಅಡಿಕೆ ಮಾರುಕಟ್ಟೆಗೆ ಸಂಬಂಧಿಸಿ ಕ್ಯಾಂಪ್ಕೋ ಕೆಲಸ ಮಾಡುತ್ತದೆ, ಅಡಿಕೆ ಹಳದಿ ಎಲೆರೋಗದ ವಿಷಯದಲ್ಲೂ ಕ್ಯಾಂಪ್ಕೋ ರೈತರ ಜೊತೆ ಇದೆ. ಆದರೆ ಅಡಿಕೆ ತೆರಿಗೆ ಸರ್ಕಾರಕ್ಕೆ ನೇರವಾಗಿ ಲಭ್ಯವಾಗುತ್ತದೆ, ಹೀಗಾಗಿ ಶೇ.2 ರಷ್ಟು ಅಡಿಕೆ ಸಂಶೋಧನೆಗೆ ಮೀಸಲು ಇಡಬೇಕು ಇದಕ್ಕೆ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಿದೆ ಎಂದರು.

ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಮಾಜಿ ಅಧ್ಯಕ್ಷರುಗಳಾದ ನಾಗರಾಜ ಶೆಟ್ಟಿ, ಪದ್ಮನಾಭ ಕೊಂಕೋಡಿ, ಎಸ್‌ ಆರ್‌ ಸತೀಶ್ಚಂದ್ರ, ಕ್ಯಾಂಪ್ಕೋ ನಿರ್ದೇಶಕರುಗಳು, ಟಿಎಸ್‌ಎಸ್‌, ಮ್ಯಾಂಮ್ಕೋಸ್‌ , ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಪ್ರತಿನಿಧಿಗಳು ಸೇರಿದಂತೆ ಪ್ರಮುಖ ಕೃಷಿಕರು ಭಾಗವಹಿಸಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

12 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago