MIRROR FOCUS

Arecanut | ಅಡಿಕೆಯಿಂದ ತಯಾರಾಗುತ್ತಿದೆ ಎನರ್ಜಿ ಡ್ರಿಂಕ್…!‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಶ್ವದಲ್ಲಿ ಅಡಿಕೆ ಹೆಚ್ಚು ಬೆಳೆಯುವ ದೇಶ ಭಾರತ. ಹಾಗಿದ್ದರೂ ಇಂದಿಗೂ ಅಡಿಕೆ ಹಾನಿಕಾರಕ ಎಂಬ ಹಣೆಪಟ್ಟಿಯಿಂದ ಹೊರಬಂದಿಲ್ಲ. ಸರ್ಕಾರ, ಇಲಾಖೆ, ಅಧಿಕಾರಿಗಳ ನಡುವೆ ತಾಕಲಾಟ ನಡೆಯುತ್ತಲೇ ಇದೆ. ಆದರೆ ಪುಟ್ಟ ದೇಶ ವಿಯೆಟ್ನಾಂನಲ್ಲಿ ಅಡಿಕೆಯಿಂದ ಎನರ್ಜಿ ಡ್ರಿಂಕ್‌ ತಯಾರಾಗಿ ಮಾರಾಟವಾಗುತ್ತಿದೆ . ಒಂದಲ್ಲ ಮೂರು ಬಗೆಯ ಎನರ್ಜಿ ಡ್ರಿಂಕ್‌ ಅಡಿಕೆಯಿಂದಲೇ ತಯಾರಾಗುತ್ತಿದೆ.

Advertisement

ವಿಯೆಟ್ನಾಂ ದೇಶದಲ್ಲಿ ವಿವಿಧ ಬಗೆಯ ಕೃಷಿ ಉತ್ಪನ್ನಗಳು ತಯಾರಾಗುತ್ತಿದೆ. ಅದರಲ್ಲಿ ಅಡಿಕೆಯ ಎನರ್ಜಿ ಡ್ರಿಂಕ್‌ ಕೂಡಾ ಒಂದು. ಎಳೆ ಅಡಿಕೆಯಿಂದ ಈ ಡ್ರಿಂಕ್‌ ತಯಾರು ಮಾಡಲಾಗುತ್ತಿದೆ. 250 ಎಂಎಲ್‌ ನ ಬಾಟಲಿಯಲ್ಲಿ ವಿಯೆಟ್ನಾಂನಲ್ಲಿ ಈ ಡ್ರಿಂಕ್‌ ಮಾರುಕಟ್ಟೆಗೆ ಸರಬರಾಜು ಮಾಡಲಾಗುತ್ತಿದೆ. 24 ತಿಂಗಳು ಬಾಳ್ವಿಕೆಯನ್ನು ಈ ಡ್ರಿಂಕ್‌ ಹೊಂದಿದೆ.ಕಳೆದ ಒಂದರಡು ವರ್ಷಗಳಿಂದ ಈ ಡ್ರಿಂಕ್‌ ವಿಯೆಟ್ನಾಂ ಮಾರುಕಟ್ಟೆಯಲ್ಲಿ ಹಾಗೂ ಇತರೆಡೆಗೂ ಸರಬರಾಜಾಗುತ್ತಿದೆ.

ಅಡಿಕೆ ವಿಶ್ವದೆಲ್ಲೆಡೆ ಬಳಕೆಯಲ್ಲಿದ್ದರೂ ಅಡಿಕೆ ತಿನ್ನುವುದು  ಹಾನಿಕಾರಕ ಎಂಬ ಅಪವಾದಗಳು ಕೇಳುತ್ತಲೇ ಇದೆ. ಈಚೆಗೆ ಚೀನಾದಲ್ಲಿ ಯುವ ಗಾಯಕನೊಬ್ಬ ಕ್ಯಾನ್ಸರ್‌ ನಿಂದ ನಿಧನರಾದ ಬಳಿಕ ಅಡಿಕೆ ಹಾನಿಕಾರಕ ಎಂದು ವ್ಯಾಪಕವಾಗಿ ಹಬ್ಬಿತು.

ಆದರೆ ಅಡಿಕೆಯ ಬಳಕೆ ವಿವಿಧ ರೂಪದಲ್ಲಿದೆ. ಅಡಿಕೆಯ ಎನರ್ಜಿ ಡ್ರಿಂಕ್‌ ಈಗ ಹೆಚ್ಚು ಗಮನ ಸೆಳೆದಿದೆ. ಅದಕ್ಕೂ ಮೊದಲು ರಾಜ್ಯದಲ್ಲಿ ನಿವೇದನ್‌  ಎಂಬವರು ಅಡಿಕೆ ಚಹಾ ತಯಾರಿಸಿ ದೇಶ ವಿದೇಶದ ಗಮನ ಸೆಳೆದಿದ್ದರು. ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಭಾರತದಲ್ಲಿ ಕೂಡಾ ಅತೀ ಅಗತ್ಯವಾಗಿ ಅಧ್ಯಯನಗಳು ನಡೆಯಬೇಕಾಗಿದೆ.

ಅಡಿಕೆಯ ಪರ್ಯಾಯ ಬಳಕೆಯ ಕಡೆಗೆ ಇಂದು ಗಮನಹರಿಸಬೇಕಾದ ಅಗತ್ಯ ಇದೆ. ಅಡಿಕೆಯಿಂದ ಸಾಕಷ್ಟು ಬಗೆಯ ಉತ್ಪನ್ನಗಳನ್ನು ತಯಾರು ಮಾಡಲು ಸಾಧ್ಯವಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಗಮನಹರಿಸಬೇಕಾದ ಅಗತ್ಯ ಇದೆ. ಅಡಿಕೆ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಕೂಡಾ.
ಶ್ರೀ ಪಡ್ರೆ, ಸಂಪಾದಕರು,ಅಡಿಕೆ ಪತ್ರಿಕೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

5 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

5 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

15 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

15 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

15 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

15 hours ago